Homeಮುಖಪುಟಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

ಸಿಎಂ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ; ಸೆಂಥಿಲ್ ಬಾಲಾಜಿಗೆ ಸುಪ್ರೀಂ ರಿಲೀಫ್

- Advertisement -
- Advertisement -

ಬಂಧಿತ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ಮುಖ್ಯಮಂತ್ರಿ ಒಪ್ಪಿಗೆಯಿಲ್ಲದೆ ಪದಚ್ಯುತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದ್ದು, ಅವರನ್ನು ಪದಚ್ಯುತಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಸಚಿವ ಬಾಲಾಜಿ ಅವರನ್ನು ರಾಜ್ಯ ಕ್ಯಾಬಿನೆಟ್ಟಿನಲ್ಲಿ ಖಾತೆಯಿಲ್ಲದ ಸಚಿವ ಸ್ಥಾನದಿಂದ ತೆಗೆದುಹಾಕಬೇಕೆ ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಬಹುದು ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

‘ರಾಜ್ಯಪಾಲರಿಗೆ ಸಚಿವರನ್ನು ವಜಾ ಮಾಡುವ ಅಧಿಕಾರವಿದೆಯೇ ಎಂಬುದನ್ನು ಪರಿಗಣಿಸಲು ಹೈಕೋರ್ಟ್ ಸೂಕ್ತವಾಗಿದ್ದು, ಸಂಬಂಧಪಟ್ಟವರು ಸಚಿವರಾಗಿ ಮುಂದುವರಿಯಬೇಕೇ ಎಂಬುದನ್ನು ನಿರ್ಧರಿಸಲು ಮುಖ್ಯಮಂತ್ರಿಗೆ ಬಿಟ್ಟಿದ್ದಾರೆ’ ಎಂದು ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಇಂದು ಹೇಳಿದೆ.

ಇದರಲ್ಲಿ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನಾವು ಭಾವಿಸುತ್ತೇವೆ. ಮದ್ರಾಸ್ ಹೈಕೋರ್ಟಿನ ದೃಷ್ಟಿಕೋನವನ್ನು ನಾವು ಒಪ್ಪುತ್ತೇವೆ ಮತ್ತು ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರೂ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಮುಂದುವರಿಯಬೇಕು ಎಂದು ಮದ್ರಾಸ್ ಹೈಕೋರ್ಟಿನ ತೀರ್ಪನ್ನು ಸಾಮಾಜಿಕ ಕಾರ್ಯಕರ್ತ ಎಂಎಲ್ ರವಿ ಪ್ರಶ್ನಿಸಿದ್ದರು.

ಪ್ರಕರಣದ ಹಿನ್ನೆಲೆ:

ಬರೋಬ್ಬರಿ 18 ಗಂಟೆಗಳ ವಿಚಾರಣೆ ಬಳಿಕ ತಮಿಳುನಾಡಿನ ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 203ರ ಜೂನ್ 14ರಂದು ಬಂಧಿಸಿದ್ದರು. ಬಂಧನವಾದ ಬಳಿಕ ಸೆಂಥಿಲ್ ಬಾಲಾಜಿ ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯಗಳು ಎಲ್ಲೆಡೆ ವೈರಲ್ ಆಗಿತ್ತು. ಸೆಂಥಿಲ್ ಬಂಧನದ ನಂತರ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದವು.

ಹಿಂದಿನ ಜಯಲಲಿತಾ ಸರ್ಕಾರದಲ್ಲಿ ಸಚಿವರಾಗಿದ್ದ ಸೆಂಥಿಲ್, 2011 ರಿಂದ 2016ರ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣದಲ್ಲಿ ಅವರನ್ನು ಇಡಿ ಬಂಧಿಸಿದೆ. ಈ ಅವಧಿಯಲ್ಲಿ ತಮಿಳುನಾಡಿನಲ್ಲಿ ಇದ್ದ ಎಐಎಡಿಎಂಕೆಯ ಜಯಲಲಿತಾ ನೇತೃತ್ವದ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಾರಿಗೆ ಸಚಿವರಾಗಿದ್ದರು. ಸದ್ಯ ಅವರು ಎಂಕೆ ಸ್ಟಾಲಿನ್ ಸಂಪುಟದಲ್ಲಿ ವಿದ್ಯುತ್ ಮತ್ತು ಅಬಕಾರಿ ಖಾತೆಗಳನ್ನು ನಿರ್ವಹಿಸುತ್ತಿದ್ದರು.

ಸೆಂಥಿಲ್ ಬಾಲಾಜಿ ಅವರು 1975, ಅಕ್ಟೋಬರ್ 21 ರಂದು ತಮಿಳುನಾಡಿನ ಕರೂರು ಜಿಲ್ಲೆಯ ರಾಮೇಶ್ವರಪಟ್ಟಿ ಎಂಬಲ್ಲಿ ಜನಿಸಿದ್ದಾರೆ. ನಾಲ್ಕು ಬಾರಿಯ ಶಾಸಕರಾಗಿರುವ ಸೆಂಥಿಲ್ ಬಾಲಾಜಿ ಎಐಎಡಿಎಂಕೆ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. 2006ರಲ್ಲಿ ಶಾಸಕರಾಗಿ ತಮಿಳುನಾಡು ವಿಧಾನಸಭೆಯನ್ನು ಪ್ರವೇಶಿಸಿದ ಸೆಂಥಿಲ್ ಬಾಲಾಜಿ, 2011 ರಿಂದ 2015ರಲ್ಲಿ ಜೆ ಜಯಲಲಿತಾ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2018ರಲ್ಲಿ ಸೆಂಥಿಲ್ ಡಿಎಂಕೆ ಪಕ್ಷದ ಕಡೆ ಹೆಜ್ಜೆ ಹಾಕಿದರು.

ಇದನ್ನೂ ಓದಿ; ರಾಜ್ಯಸಭೆಗೆ ನಾಮನಿರ್ದೇಶನಗೊಂಡ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...