Homeಮುಖಪುಟಮತ್ತೆ ಮುನ್ನೆಲೆಗೆ ಬಂದ ಸಿಎಂ ಬದಲಾವಣೆ ಚರ್ಚೆ: ರೆಕ್ಕೆ ಪುಕ್ಕ ಒದಗಿಸಿದ ಈ ಎರಡು ಹೇಳಿಕೆಗಳು

ಮತ್ತೆ ಮುನ್ನೆಲೆಗೆ ಬಂದ ಸಿಎಂ ಬದಲಾವಣೆ ಚರ್ಚೆ: ರೆಕ್ಕೆ ಪುಕ್ಕ ಒದಗಿಸಿದ ಈ ಎರಡು ಹೇಳಿಕೆಗಳು

ಇನ್ನು ಬಾಕಿ ಉಳಿದಿರುವ ಒಂದು ವರ್ಷದ ಸಿಎಂ ಗಾದಿಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ದೊಡ್ಡ ದಂಡೇ ನೆರೆದಿದೆ.

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮತ್ತು ರಾಜ್ಯದ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್‌ರವರು ನೀಡಿದ ಹೇಳಿಕೆಗಳು ಈ ಚರ್ಚೆಗೆ ಮತ್ತಷ್ಟು ರೆಕ್ಕೆ ಪುಕ್ಕ ಒದಗಿಸಿವೆ. ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾರವರು ರಾಜ್ಯಕ್ಕೆ ಆಗಮಿಸಿದ ದಿನವೇ ಈ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ.

ಕಳೆದ 4-5 ತಿಂಗಳಿನಿಂದಲೂ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಕೆಳಗಿಳಿಸಿ ಮತ್ತೊಬ್ಬರಿಗೆ ಆ ಹುದ್ದೆ ನೀಡಲಾಗುತ್ತದೆ ಎಂಬ ಚರ್ಚೆ ನಡೆಯುತ್ತಲೇ ಇದೆ. ಆದರೆ ಐದು ರಾಜ್ಯಗಳಲ್ಲಿ ನಡೆದ ಚುನಾವಣೆ ಕಾರಣಕ್ಕೆ ಅದು ಸಾಧ್ಯವಾಗಿಲ್ಲ ಎಂಬ ಮಾತೂ ಸಹ ಕೇಳಿಬರುತ್ತಿದೆ. ಆದರೆ ಸಚಿವ ಸಂಪುಟ ವಿಸ್ತರಣೆಗೆ ಇದುವರೆಗೂ ಬಿಜೆಪಿ ಹೈಕಮಾಂಡ್ ಅನುಮತಿ ನೀಡದಿರುವುದು ಮೇಲಿನ ಊಹಾಪೋಹಗಳಿಗೆ ಪುಷ್ಟಿ ನೀಡುವಂತಿದೆ.

ಗುಜರಾತ್ ಮತ್ತು ದೆಹಲಿಯ ಸ್ಥಳೀಯ ಚುನಾವಣೆಗಳನ್ನು ಉಲ್ಲೇಖಿಸಿ ಮಾತನಾಡಿದ ಬಿ.ಎಲ್ ಸಂತೋಷ್ “ಒಂದು ರಾಜ್ಯದ ನಾಯಕತ್ವವನ್ನು ಹೋಲ್‌ ಸೇಲ್ ಆಗಿ ಬದಲಿಸುವ ತಾಕತ್ತು ಮತ್ತು ಧೈರ್ಯ ಬಿಜೆಪಿ ಹೈಕಮಾಂಡ್‌ಗಿದೆ” ಎಂದು ಹೇಳಿಕೆ ನೀಡಿದ್ದಾರೆ.

“ಇದು ಎಲ್ಲಾ ಕಡೆ ನಡೆಯುತ್ತದೆ ಎಂದು ನಾನು ಹೇಳುವುದಿಲ್ಲ. ಆದರೆ ಇತರ ರಾಜಕೀಯ ಪಕ್ಷಗಳು ಊಹಿಸಲೂ ಸಾಧ್ಯವಾಗದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಿಜೆಪಿ ಸಮರ್ಥವಾಗಿದೆ. ಆ ಆತ್ಮವಿಶ್ವಾಸ ಇದ್ದ ಕಾರಣಕ್ಕಾಗಿಯೇ ಗುಜರಾತ್ ಸಿಎಂ ಬದಲಿಸಿ ಸಂಪೂರ್ಣ ಸಂಪುಟವನ್ನು ಪುನರ್‌ರಚಿಸಲಾಗಿದೆ. ಯಾವುದೇ ದೂರುಗಳು ಇಲ್ಲದಿದ್ದರೂ ಸಹ ಹೊಸತನವನ್ನು ತರುವುದಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ರಾಜಕೀಯದಲ್ಲಿ ಬದಲಾವಣೆ ಎಂಬುದು ಅನಿವಾರ್ಯ. ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದು ಸುಲಭ ಸಂಗತಿಯಲ್ಲ. ಆಡಳಿತ ವಿರೋಧಿ ಅಲೆ ದಟ್ಟವಾಗಿದ್ದಾಗ ಎರಡನೇ ಬಾರಿ ಚುನಾವಣೆಗಳನ್ನು ಗೆಲ್ಲುವುದು ಸುಲಭವಲ್ಲ ಎಂಬುದು ನಿಮಗೆಲ್ಲರಿಗೂ ಗೊತ್ತಿದೆ ಎಂದು ಬಿ.ಎಲ್ ಸಂತೋಷ್ ಹೇಳಿದ್ದಾರೆ. ಅದು ಬೊಮ್ಮಾಯಿಯವರನ್ನು ಇಳಿಸುವ ಚರ್ಚೆಗೆ ಇಂಬು ಕೊಟ್ಟಿದೆ.

ಕಳೆದ ವರ್ಷ ಡಿಸೆಂಬರ್ 18ರಂದು ಬೆಂಗಳೂರಿನಲ್ಲಿ ನಡೆದ ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಇದೇ ಬಿ.ಎಲ್ ಸಂತೋಷ್, “ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಬೊಮ್ಮಾಯಿಯವರು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ. ಕೆಲವು ಪತ್ರಕರ್ತರು ಸಹ ಹಾಗೆಯೇ ಭಾವಿಸಿರಬಹುದು. ಆದರೆ ವೀರ ಸಾವರ್ಕರ್ ಬಗ್ಗೆ ಸಿಎಂ ಆಡಿದ ಮಾತುಗಳನ್ನು ಕೇಳಿದರೆ ಅದ್ಯಾವುದು ಇಲ್ಲ ಎಂಬುದು ಎಲ್ಲರಿಗೂ ಸ್ಪಷ್ಟವಾಗುತ್ತದೆ” ಎಂದು ಹೇಳಿದ್ದರು. ಆ ವೇದಿಕೆಯಲ್ಲಿ ಆ ಮಾತುಗಳು ಬೇಕಿಲ್ಲದಿದ್ದರೂ ಉದ್ದೇಶಪೂರ್ವಕವಾಗಿ ಹೇಳಿದ್ದರು.

ಇನ್ನು ರಾಜ್ಯದ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್‌ರವರು ಸಹ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಸಚಿವ ಅಶ್ವಥ್ ನಾರಾಯಣ್‌ರವರ ತಮ್ಮ ಸತೀಶ್‌ರವರು ಮಾಗಡಿಯ ದರ್ಶನ್ ಎಂಬುವವರಿಂದ ಹಣ ಪಡೆದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ದೂರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಶ್ವಥ್ ನಾರಾಯಣ್, “ನಾನು ಸಿಎಂ ಆಗಿಬಿಡುತ್ತೇನೆ ಎನ್ನವ ಭಯ ಡಿ.ಕೆ ಶಿವಕುಮಾರ್‌ರವರನ್ನು ಕಾಡುತ್ತಿದೆ. ಒಬ್ಬ ನಾಯಕನ ಬೆಳವಣಿಗೆ ಸಹಿಸದೆ ಹೀಗೆಲ್ಲಾ ಪಿತೂರಿ ಮಾಡುತ್ತಿದ್ದಾರೆ. ಹೀಗಾಗಿ ವಿನಾಕಾರಣ ನನ್ನ ಮೇಲೆ ಆರೋಪ ಹೊರಿಸಿ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ” ಎಂದು ಕಿಡಿಕಾರಿದ್ದಾರೆ.

ಅಂದರೆ ಸಿಎಂ ಬದಲಾವಣೆಯಾಗಲಿದ್ದು, ತಾನೂ ಕೂಡ ಆ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಅವರು ಬಹಿರಂಗವಾಗಿಯೇ ಸಾರಿದ್ದಾರೆ. ಇನ್ನೊಂದು ವರ್ಷದಲ್ಲಿ ಚುನಾವಣೆ ಎದುರಾಗಲಿದ್ದು, ರಾಜ್ಯದಲ್ಲಿ ಸದ್ಯ ಬಿಜೆಪಿ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ಬಿಟ್ ಕಾಯಿನ್ ಹಗರಣದ ಬೆನ್ನಿಗೆ 40% ಕಮಿಷನ್ ಹಗರಣ ಮತ್ತು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಬಿಜೆಪಿ ಕೊರಳಿಗೆ ಸುತ್ತಿಕೊಂಡಿದೆ. ಇನ್ನು ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕಿಯ ಬಂಧನವಾಗಿರುವುದರ ಜೊತೆಗೆ ಸಚಿವರ ಹೆಸರುಗಳು ಸಹ ಕೇಳಿ ಬರುತ್ತಿವೆ. ಇನ್ನೊಂದೆಡೆ ಬೊಮ್ಮಾಯಿಯವರು ಸಿಎಂ ಆಗಿ ವರ್ಷವಾಗುತ್ತ ಬಂದರೂ ಹೇಳಿಕೊಳ್ಳುವ ಸಾಧನೆಯೇನು ಮಾಡಿಲ್ಲ. ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿನ ಸೋಲಿನ ಜೊತೆಗೆ ಬಿಟ್‌ ಕಾಯಿನ್ ಹಗರಣದಲ್ಲಿ ಅವರೆ ನಂಬರ್ ಓನ್ ಆರೋಪಿಯಾಗಿದ್ದಾರೆ. ಹಾಗಾಗಿ ಸಿಎಂ ಬದಲಾವಣೆ ಕೇವಲ ಊಹಾಪೋಹವಾಗಿ ಉಳಿದಿಲ್ಲ.

ಇನ್ನು ಬಾಕಿ ಉಳಿದಿರುವ ಒಂದು ವರ್ಷದ ಸಿಎಂ ಗಾದಿಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ದೊಡ್ಡ ದಂಡೇ ನೆರೆದಿದೆ. ಬ್ರಾಹ್ಮಣ ಸಮುದಾಯದಿಂದ ಪ್ರಹ್ಲಾದ್ ಜೋಶಿ, ಬಿ.ಎಲ್ ಸಂತೋಷ್ ಇದ್ದರೆ, ಲಿಂಗಾಯತ ಸಮುದಾಯದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಮಂತ್ರಿ ಮುರುಗೇಶ್ ನಿರಾಣಿ ಮತ್ತು ಶಾಸಕ ಅರವಿಂದ್ ಬೆಲ್ಲದ್ ಹೆಸರು ಚಾಲ್ತಿಯಲ್ಲಿದೆ. ಒಕ್ಕಲಿಗ ಸಮುದಾಯಕ್ಕೆ ಈ ಬಾರಿ ಚಾನ್ಸ್ ನೀಡುವುದಾದರೆ ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ್ ಮತ್ತು ಸಿ.ಟಿ ರವಿ ಪೈಪೋಟಿ ನಡೆಸುತ್ತಿದ್ದಾರೆ.

ಗುಜರಾತ್, ಉತ್ತರಖಂಡ ರಾಜ್ಯಗಳಲ್ಲಿ ಯಶಸ್ವಿಯಾಗಿ ಸಿಎಂ ಬದಲಾವಣೆ ಮಾಡಿರುವ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿಯೂ ಅದನ್ನು ಮಾಡುತ್ತದೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನುಳಿದ ವರುಷದಲ್ಲಿ ಹತ್ತು ಮಂದಿ ಮುಖ್ಯಮಂತ್ರಿಯಾದರೂ ೨೦೨೩ ನಲ್ಲಿ ಭಾಜಪ ಮಣ್ಣು ಮುಕ್ಕುವುದು ಗ್ಯಾರ೦ಟಿ… ಅಮಿತ್ ಷಾ ಅವರಿಗೆ ಗೊತ್ತಿಲ್ಲ. ಇದು ಗುಜರಾತ್ ಅಲ್ಲಾ ಕರ್ನಾಟಕ ಅಂತಾ…. ಗುಜರಾತಿಗಳ ಆಟ ಇಲ್ಲಿ ನಡೆಯೊಲ್ಲಾ…

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...