Homeಮುಖಪುಟಮತ್ತೆ ಮುನ್ನೆಲೆಗೆ ಬಂದ ಸಿಎಂ ಬದಲಾವಣೆ ಚರ್ಚೆ: ರೆಕ್ಕೆ ಪುಕ್ಕ ಒದಗಿಸಿದ ಈ ಎರಡು ಹೇಳಿಕೆಗಳು

ಮತ್ತೆ ಮುನ್ನೆಲೆಗೆ ಬಂದ ಸಿಎಂ ಬದಲಾವಣೆ ಚರ್ಚೆ: ರೆಕ್ಕೆ ಪುಕ್ಕ ಒದಗಿಸಿದ ಈ ಎರಡು ಹೇಳಿಕೆಗಳು

ಇನ್ನು ಬಾಕಿ ಉಳಿದಿರುವ ಒಂದು ವರ್ಷದ ಸಿಎಂ ಗಾದಿಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ದೊಡ್ಡ ದಂಡೇ ನೆರೆದಿದೆ.

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮತ್ತು ರಾಜ್ಯದ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್‌ರವರು ನೀಡಿದ ಹೇಳಿಕೆಗಳು ಈ ಚರ್ಚೆಗೆ ಮತ್ತಷ್ಟು ರೆಕ್ಕೆ ಪುಕ್ಕ ಒದಗಿಸಿವೆ. ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾರವರು ರಾಜ್ಯಕ್ಕೆ ಆಗಮಿಸಿದ ದಿನವೇ ಈ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ.

ಕಳೆದ 4-5 ತಿಂಗಳಿನಿಂದಲೂ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಕೆಳಗಿಳಿಸಿ ಮತ್ತೊಬ್ಬರಿಗೆ ಆ ಹುದ್ದೆ ನೀಡಲಾಗುತ್ತದೆ ಎಂಬ ಚರ್ಚೆ ನಡೆಯುತ್ತಲೇ ಇದೆ. ಆದರೆ ಐದು ರಾಜ್ಯಗಳಲ್ಲಿ ನಡೆದ ಚುನಾವಣೆ ಕಾರಣಕ್ಕೆ ಅದು ಸಾಧ್ಯವಾಗಿಲ್ಲ ಎಂಬ ಮಾತೂ ಸಹ ಕೇಳಿಬರುತ್ತಿದೆ. ಆದರೆ ಸಚಿವ ಸಂಪುಟ ವಿಸ್ತರಣೆಗೆ ಇದುವರೆಗೂ ಬಿಜೆಪಿ ಹೈಕಮಾಂಡ್ ಅನುಮತಿ ನೀಡದಿರುವುದು ಮೇಲಿನ ಊಹಾಪೋಹಗಳಿಗೆ ಪುಷ್ಟಿ ನೀಡುವಂತಿದೆ.

ಗುಜರಾತ್ ಮತ್ತು ದೆಹಲಿಯ ಸ್ಥಳೀಯ ಚುನಾವಣೆಗಳನ್ನು ಉಲ್ಲೇಖಿಸಿ ಮಾತನಾಡಿದ ಬಿ.ಎಲ್ ಸಂತೋಷ್ “ಒಂದು ರಾಜ್ಯದ ನಾಯಕತ್ವವನ್ನು ಹೋಲ್‌ ಸೇಲ್ ಆಗಿ ಬದಲಿಸುವ ತಾಕತ್ತು ಮತ್ತು ಧೈರ್ಯ ಬಿಜೆಪಿ ಹೈಕಮಾಂಡ್‌ಗಿದೆ” ಎಂದು ಹೇಳಿಕೆ ನೀಡಿದ್ದಾರೆ.

“ಇದು ಎಲ್ಲಾ ಕಡೆ ನಡೆಯುತ್ತದೆ ಎಂದು ನಾನು ಹೇಳುವುದಿಲ್ಲ. ಆದರೆ ಇತರ ರಾಜಕೀಯ ಪಕ್ಷಗಳು ಊಹಿಸಲೂ ಸಾಧ್ಯವಾಗದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಿಜೆಪಿ ಸಮರ್ಥವಾಗಿದೆ. ಆ ಆತ್ಮವಿಶ್ವಾಸ ಇದ್ದ ಕಾರಣಕ್ಕಾಗಿಯೇ ಗುಜರಾತ್ ಸಿಎಂ ಬದಲಿಸಿ ಸಂಪೂರ್ಣ ಸಂಪುಟವನ್ನು ಪುನರ್‌ರಚಿಸಲಾಗಿದೆ. ಯಾವುದೇ ದೂರುಗಳು ಇಲ್ಲದಿದ್ದರೂ ಸಹ ಹೊಸತನವನ್ನು ತರುವುದಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ರಾಜಕೀಯದಲ್ಲಿ ಬದಲಾವಣೆ ಎಂಬುದು ಅನಿವಾರ್ಯ. ಎರಡನೇ ಬಾರಿಗೆ ಅಧಿಕಾರಕ್ಕೆ ಬರುವುದು ಸುಲಭ ಸಂಗತಿಯಲ್ಲ. ಆಡಳಿತ ವಿರೋಧಿ ಅಲೆ ದಟ್ಟವಾಗಿದ್ದಾಗ ಎರಡನೇ ಬಾರಿ ಚುನಾವಣೆಗಳನ್ನು ಗೆಲ್ಲುವುದು ಸುಲಭವಲ್ಲ ಎಂಬುದು ನಿಮಗೆಲ್ಲರಿಗೂ ಗೊತ್ತಿದೆ ಎಂದು ಬಿ.ಎಲ್ ಸಂತೋಷ್ ಹೇಳಿದ್ದಾರೆ. ಅದು ಬೊಮ್ಮಾಯಿಯವರನ್ನು ಇಳಿಸುವ ಚರ್ಚೆಗೆ ಇಂಬು ಕೊಟ್ಟಿದೆ.

ಕಳೆದ ವರ್ಷ ಡಿಸೆಂಬರ್ 18ರಂದು ಬೆಂಗಳೂರಿನಲ್ಲಿ ನಡೆದ ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಇದೇ ಬಿ.ಎಲ್ ಸಂತೋಷ್, “ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಬೊಮ್ಮಾಯಿಯವರು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ. ಕೆಲವು ಪತ್ರಕರ್ತರು ಸಹ ಹಾಗೆಯೇ ಭಾವಿಸಿರಬಹುದು. ಆದರೆ ವೀರ ಸಾವರ್ಕರ್ ಬಗ್ಗೆ ಸಿಎಂ ಆಡಿದ ಮಾತುಗಳನ್ನು ಕೇಳಿದರೆ ಅದ್ಯಾವುದು ಇಲ್ಲ ಎಂಬುದು ಎಲ್ಲರಿಗೂ ಸ್ಪಷ್ಟವಾಗುತ್ತದೆ” ಎಂದು ಹೇಳಿದ್ದರು. ಆ ವೇದಿಕೆಯಲ್ಲಿ ಆ ಮಾತುಗಳು ಬೇಕಿಲ್ಲದಿದ್ದರೂ ಉದ್ದೇಶಪೂರ್ವಕವಾಗಿ ಹೇಳಿದ್ದರು.

ಇನ್ನು ರಾಜ್ಯದ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್‌ರವರು ಸಹ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಸಚಿವ ಅಶ್ವಥ್ ನಾರಾಯಣ್‌ರವರ ತಮ್ಮ ಸತೀಶ್‌ರವರು ಮಾಗಡಿಯ ದರ್ಶನ್ ಎಂಬುವವರಿಂದ ಹಣ ಪಡೆದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ದೂರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಶ್ವಥ್ ನಾರಾಯಣ್, “ನಾನು ಸಿಎಂ ಆಗಿಬಿಡುತ್ತೇನೆ ಎನ್ನವ ಭಯ ಡಿ.ಕೆ ಶಿವಕುಮಾರ್‌ರವರನ್ನು ಕಾಡುತ್ತಿದೆ. ಒಬ್ಬ ನಾಯಕನ ಬೆಳವಣಿಗೆ ಸಹಿಸದೆ ಹೀಗೆಲ್ಲಾ ಪಿತೂರಿ ಮಾಡುತ್ತಿದ್ದಾರೆ. ಹೀಗಾಗಿ ವಿನಾಕಾರಣ ನನ್ನ ಮೇಲೆ ಆರೋಪ ಹೊರಿಸಿ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ” ಎಂದು ಕಿಡಿಕಾರಿದ್ದಾರೆ.

ಅಂದರೆ ಸಿಎಂ ಬದಲಾವಣೆಯಾಗಲಿದ್ದು, ತಾನೂ ಕೂಡ ಆ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಅವರು ಬಹಿರಂಗವಾಗಿಯೇ ಸಾರಿದ್ದಾರೆ. ಇನ್ನೊಂದು ವರ್ಷದಲ್ಲಿ ಚುನಾವಣೆ ಎದುರಾಗಲಿದ್ದು, ರಾಜ್ಯದಲ್ಲಿ ಸದ್ಯ ಬಿಜೆಪಿ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ಬಿಟ್ ಕಾಯಿನ್ ಹಗರಣದ ಬೆನ್ನಿಗೆ 40% ಕಮಿಷನ್ ಹಗರಣ ಮತ್ತು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಬಿಜೆಪಿ ಕೊರಳಿಗೆ ಸುತ್ತಿಕೊಂಡಿದೆ. ಇನ್ನು ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕಿಯ ಬಂಧನವಾಗಿರುವುದರ ಜೊತೆಗೆ ಸಚಿವರ ಹೆಸರುಗಳು ಸಹ ಕೇಳಿ ಬರುತ್ತಿವೆ. ಇನ್ನೊಂದೆಡೆ ಬೊಮ್ಮಾಯಿಯವರು ಸಿಎಂ ಆಗಿ ವರ್ಷವಾಗುತ್ತ ಬಂದರೂ ಹೇಳಿಕೊಳ್ಳುವ ಸಾಧನೆಯೇನು ಮಾಡಿಲ್ಲ. ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿನ ಸೋಲಿನ ಜೊತೆಗೆ ಬಿಟ್‌ ಕಾಯಿನ್ ಹಗರಣದಲ್ಲಿ ಅವರೆ ನಂಬರ್ ಓನ್ ಆರೋಪಿಯಾಗಿದ್ದಾರೆ. ಹಾಗಾಗಿ ಸಿಎಂ ಬದಲಾವಣೆ ಕೇವಲ ಊಹಾಪೋಹವಾಗಿ ಉಳಿದಿಲ್ಲ.

ಇನ್ನು ಬಾಕಿ ಉಳಿದಿರುವ ಒಂದು ವರ್ಷದ ಸಿಎಂ ಗಾದಿಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ದೊಡ್ಡ ದಂಡೇ ನೆರೆದಿದೆ. ಬ್ರಾಹ್ಮಣ ಸಮುದಾಯದಿಂದ ಪ್ರಹ್ಲಾದ್ ಜೋಶಿ, ಬಿ.ಎಲ್ ಸಂತೋಷ್ ಇದ್ದರೆ, ಲಿಂಗಾಯತ ಸಮುದಾಯದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಮಂತ್ರಿ ಮುರುಗೇಶ್ ನಿರಾಣಿ ಮತ್ತು ಶಾಸಕ ಅರವಿಂದ್ ಬೆಲ್ಲದ್ ಹೆಸರು ಚಾಲ್ತಿಯಲ್ಲಿದೆ. ಒಕ್ಕಲಿಗ ಸಮುದಾಯಕ್ಕೆ ಈ ಬಾರಿ ಚಾನ್ಸ್ ನೀಡುವುದಾದರೆ ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ್ ಮತ್ತು ಸಿ.ಟಿ ರವಿ ಪೈಪೋಟಿ ನಡೆಸುತ್ತಿದ್ದಾರೆ.

ಗುಜರಾತ್, ಉತ್ತರಖಂಡ ರಾಜ್ಯಗಳಲ್ಲಿ ಯಶಸ್ವಿಯಾಗಿ ಸಿಎಂ ಬದಲಾವಣೆ ಮಾಡಿರುವ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿಯೂ ಅದನ್ನು ಮಾಡುತ್ತದೆಯೇ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನುಳಿದ ವರುಷದಲ್ಲಿ ಹತ್ತು ಮಂದಿ ಮುಖ್ಯಮಂತ್ರಿಯಾದರೂ ೨೦೨೩ ನಲ್ಲಿ ಭಾಜಪ ಮಣ್ಣು ಮುಕ್ಕುವುದು ಗ್ಯಾರ೦ಟಿ… ಅಮಿತ್ ಷಾ ಅವರಿಗೆ ಗೊತ್ತಿಲ್ಲ. ಇದು ಗುಜರಾತ್ ಅಲ್ಲಾ ಕರ್ನಾಟಕ ಅಂತಾ…. ಗುಜರಾತಿಗಳ ಆಟ ಇಲ್ಲಿ ನಡೆಯೊಲ್ಲಾ…

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...