Homeಮುಖಪುಟಕರ್ನಾಟಕದಲ್ಲಿ ಸಿಎಂ ಬದಲಾವಣೆ ಚರ್ಚೆ: ಸಿಎಂ ರೇಸ್‌ನಲ್ಲಿ ಹೊಸ ಹೆಸರುಗಳು

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಚರ್ಚೆ: ಸಿಎಂ ರೇಸ್‌ನಲ್ಲಿ ಹೊಸ ಹೆಸರುಗಳು

ಅನಾರೋಗ್ಯವೋ ಮತ್ತೊಂದೊ ಕಾರಣ ನೀಡಿ ಬೊಮ್ಮಾಯಿಯವರನ್ನು ಕೆಳಗಿಳಿಸಿ ಡೈನಾಮಿಕ್ ಆದವರೊಬ್ಬರನ್ನು ತಂದು ಚುನಾವಣೆಗೆ ಹೋಗಬೇಕು ಎಂಬುದು ಬಿಜೆಪಿಯ ಹಂಬಲ.

- Advertisement -
- Advertisement -

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂಬುದು ಸಾಮಾನ್ಯ ಸಂಗತಿಯಾಗಿಬಿಟ್ಟಿದೆ. ಉತ್ತರಾಖಂಡ ರಾಜ್ಯದಲ್ಲಿ ಈ ಒಂದೇ ವರ್ಷದಲ್ಲಿ ಮೂವರು ಮುಖ್ಯಮಂತ್ರಿಗಳು ಬಂದು ಹೋಗಿದ್ದಾರೆ. ಗುಜರಾತ್‌ನಲ್ಲಿ ಸಿಎಂ ಬದಲಾವಣೆ ಆಗಿದೆ. ಕರ್ನಾಟಕದಲ್ಲಿಯೂ ಬಿಜೆಪಿ ಆಡಳಿತದ ಎರಡು ವರ್ಷಗಳಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದು, ಇನ್ನೂ 6 ತಿಂಗಳು ಕೂಡ ಅಧಿಕಾರ ಪೂರೈಸದ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಸಹ ಬದಲಿಸಲಾಗುತ್ತದೆ ಎಂಬ ಚರ್ಚೆಗಳು ಆರಂಭವಾಗಿವೆ.

ಇದೆಲ್ಲಾ ಆರಂಭವಾಗಿದ್ದು ಹೀಗೆ.. ನವೆಂಬರ್ 29ರಂದು ಬಾಗಲಕೋಟೆಯ ಬೀಳಗಿಯಲ್ಲಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ “ನಮ್ಮ ನಾಯಕರಾದ ಮುರುಗೇಶ ನಿರಾಣಿಯವರು ಆದಷ್ಟು ಬೇಗ ಮುಖ್ಯಮಂತ್ರಿಯಾಗುತ್ತಾರೆ” ಎಂದು ಸಚಿವ ಈಶ್ವರಪ್ಪನವರು ಹೇಳಿಕೆ ನೀಡಿದರು. ಆದಾದ ನಂತರ ಡಿಸೆಂಬರ್ 18ರಂದು ಬೆಂಗಳೂರಿನ ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ. ಕೆಲವು ಪತ್ರಕರ್ತರು ಸಹ ಹಾಗೆಯೇ ಭಾವಿಸಿರಬಹುದು. ಆದರೆ ವೀರ ಸಾವರ್ಕರ್ ಬಗ್ಗೆ ಸಿಎಂ ಮಾತುಗಳನ್ನು ಕೇಳಿದರೆ ಅದ್ಯಾವುದು ಇಲ್ಲ ಎಂಬುದು ಎಲ್ಲರಿಗೂ ಸ್ಪಷ್ಟವಾಗುತ್ತದೆ” ಎಂದು ಹೇಳಿದರು. ಆ ವೇದಿಕೆಯಲ್ಲಿ ಆ ಮಾತುಗಳು ಬೇಕಿರಲಿಲ್ಲ. ಆದರೂ ಉದ್ದೇಶಪೂರ್ವಕವಾಗಿ ಹೇಳಿದರು. ಡಿಸೆಂಬರ್ 19 ಭಾನುವಾರದಂದು ಬೊಮ್ಮಾಯಿ ತಮ್ಮ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತಾಡುತ್ತಾ ಭಾವುಕರಾಗಿ, ’ಅಧಿಕಾರದ ಎಲ್ಲಾ ಸ್ಥಾನಗಳು ತಾತ್ಕಾಲಿಕ, ಯಾವುದು ಶಾಶ್ವತವಲ್ಲ’ ಎಂದಿದ್ದಾರೆ. ಆದರೆ ಅದಕ್ಕಿಂತ ಮುಖ್ಯವಾದುದೆಂದರೆ ಅದೇ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಭಾಷಣದ ನಂತರ ಮಾತನಾಡಿದ ಮುರುಗೇಶ ನಿರಾಣಿ, “ಬೊಮ್ಮಾಯಿಯವರು ಕೇಂದ್ರ ಸಂಪುಟದಲ್ಲಿ ಮಂತ್ರಿಯಾಗಲಿದ್ದಾರೆ” ಎಂದರು. ಈ ಎಲ್ಲಾ ಹೇಳಿಕೆಗಳು ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಊಹಾಪೋಹವಲ್ಲ ಎಂಬುದನ್ನು ಒತ್ತಿ ಹೇಳುತ್ತಿವೆ. ಇದಿಷ್ಟೇ ಅಲ್ಲದೆ, ಶಿಗ್ಗಾಂವಿ ಸಾರ್ವಜನಿಕ ಸಭೆಗೂ ಮುಂಚಿತವಾಗಿ ಬೊಮ್ಮಾಯಿಯವರಿಗೆ ಬಂದ ಕರೆಯ ನಂತರ ಅವರ ಮುಖಚರ್ಯೆ ಬದಲಾಗಿ ಸಪ್ಪಗಾಗಿ ಹೋದರು ಎಂಬ ಗಾಳಿಮಾತುಗಳು ಕೂಡ ಇದಕ್ಕೆ ಪುಷ್ಟಿ ನೀಡುತ್ತಿವೆ. ಹೈಕಮಾಂಡ್‌ನಿಂದ ಬಂದ ಕರೆಯ ಬಗ್ಗೆ ಹಲವು ಬಗೆಯ ರೀತಿಯ ಮಾತುಗಳಿದ್ದರೂ, ಸಿಎಂ ಬದಲಾವಣೆಯ ಬಗ್ಗೆ ವಿವಿಧ ಬಣಗಳು ಆಕ್ಟಿವ್ ಆಗಿರುವುದಂತೂ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಕಾರಣವೇನಿರಬಹುದು?

ಈ ಹಿಂದೆ ಯಡಿಯೂರಪ್ಪ ಪಟ್ಟು ಹಿಡಿದ ಆಪರೇಷನ್ ಕಮಲ ನಡೆಸಿ, 75 ವರ್ಷ ದಾಟಿದ್ದರೂ ಸಹ ಪಕ್ಷದ ಅಘೋಷಿತ ಷರತ್ತನ್ನು ಧಿಕ್ಕರಿಸಿ ಮುಖ್ಯಮಂತ್ರಿಯಾದವರು. ಅದು ಬಿಜೆಪಿ ಹೈಕಮಾಂಡ್‌ಗೆ ನುಂಗಲಾರದ ತುತ್ತಾಗಿತ್ತು. ಅವರ ಮೇಲಿದ್ದ ಭ್ರಷ್ಟಾಚಾರದ ಪ್ರಕರಣಗಳು, ಆಡಳಿತದಲ್ಲಿ ಮಗ ವಿಜಯೇಂದ್ರನ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರದ ಆರೋಪಗಳಿಂದಾಗಿ ಸರ್ಕಾರದ ಕುರಿತು ಜನರಲ್ಲಿ ನೆಗೆಟಿವ್ ಇಮೇಜ್ ಕಟ್ಟಿಕೊಟ್ಟಿದ್ದವು. ಹಾಗಾಗಿ 2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ದೊಡ್ಡ ರಿಸ್ಕ್ ತೆಗೆದುಕೊಂಡು ಅಂತೂಇಂತೂ ಅವರನ್ನು ಕೆಳಗಿಳಿಸಲಾಗಿತ್ತು. ಆ ಸಮಯದಲ್ಲಿ ಬೊಮ್ಮಾಯಿಯವರಿಗೆ ಕೆಲ ಸೂಚನೆಗಳನ್ನು ನೀಡಿ ಸರ್ಕಾರದ ಆ ಇಮೇಜ್ ಬದಲಿಸುವ ಟಾಸ್ಕ್‌ನೊಂದಿಗೆ ಅಧಿಕಾರ ನೀಡಲಾಗಿತ್ತು. ಅದು ಕೂಡ ಹೈಕಮಾಂಡ್ ಆಯ್ಕೆಯಾಗಿರದೆ ಯಡಿಯೂರಪ್ಪನವರ ಆಯ್ಕೆಯೇ ಆಗಿತ್ತು ಎಂಬುದು ಕೂಡ ಬಣ್ಣಿಸಲಾಗಿತ್ತು. ಆದರೆ ಹೈಕಮಾಂಡ್ ಬಯಸಿದ ಹೊಸ ಇಮೇಜ್ ಕೊಡುವಲ್ಲಿ ವಿಫಲವಾಗಿರುವ ಬೊಮ್ಮಾಯಿಯವರು ಹಳೇ ಹಾದಿಯಲ್ಲಿಯೆ ನಡೆಯುತ್ತಿದ್ದಾರೆ ಎನ್ನುತ್ತವೆ ಮೂಲಗಳು.

ಚುನಾವಣಾ ಸೋಲುಗಳು

ಇನ್ನು ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ನಂತರ ನಡೆದ ಎರಡು ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಸಾಧನೆ ಮಾಡಿಲ್ಲ. ಬೊಮ್ಮಾಯಿ ಅವರ ತವರು ಕ್ಷೇತ್ರ ಹಾನಗಲ್‌ನಲ್ಲಿಯೇ ಬಿಜೆಪಿ ಹೀನಾಯ ಸೋಲು ಅನುಭವಿಸಿತು. ತದನಂತರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಕೇವಲ 11 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಪ್ರತಿಪಕ್ಷ ಕಾಂಗ್ರೆಸ್ ಸಹ 11 ಸ್ಥಾನ ಗೆದ್ದು ಪ್ರಬಲ ಪೈಪೋಟಿ ನೀಡಿತು. ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 14 ಸ್ಥಾನ ಗೆದ್ದರೆ, ಪ್ರತಿಪಕ್ಷ ಬಿಜೆಪಿ 06 ಸ್ಥಾನ ಗೆದ್ದಿತ್ತು. ಈಗ ಬಿಜೆಪಿ ಅಧಿಕಾರದಲ್ಲಿರುವಾಗ ಆಡಳಿತ ಮತ್ತು ಪ್ರತಿಪಕ್ಷಗಳೆರಡು ತಲಾ 11 ಸ್ಥಾನ ಗೆದ್ದದ್ದು ಬೊಮ್ಮಾಯಿಯವರ ವಿಫಲತೆಯೆಂದೇ ಹೇಳಲಾಗುತ್ತಿದೆ.

ದ್ವಿಸದಸ್ಯ ಕ್ಷೇತ್ರಗಳಾದ ಬೆಳಗಾವಿಯಲ್ಲಿ ಬಿಜೆಪಿ 13 ಶಾಸಕರು, 3 ಸಂಸದರು ಮತ್ತು ಇಬ್ಬರು ಸಚಿವರಿದ್ದರೂ ಬಿಜೆಪಿ ಹೀನಾಯ ಸೋಲು ಕಂಡಿತು. ಮೈಸೂರಿನಲ್ಲಿ ಬಿಜೆಪಿ ಖಾತೆ ತೆರೆಯಲಾಗಲಿಲ್ಲ. ಬೀದರ್‌ನಲ್ಲಿ ಸೋಲು, ಚಿಕ್ಕಮಗಳೂರಿಲ್ಲಿ ಕೇವಲ 6 ಮತಗಳ ಗೆಲುವು, ಕೊಡಗಿನಲ್ಲಿ ಕಡಿಮೆ ಅಂತರದ ಜಯ ಬಿಜೆಪಿಯನ್ನು ಕಂಗಾಲಾಗಿಸಿದೆ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಸರ್ಕಾರದ ಇಮೇಜ್ ಏನೇ ಇದ್ದರೂ ಕನಿಷ್ಟ ಎಲೆಕ್ಷನ್ ಗೆಲ್ಲುತ್ತಿದ್ದದ್ದು ಕೂಡ ಈಗ ಇಲ್ಲವಾಗಿದೆ.

ಬಿಟ್‌ಕಾಯಿನ್ ಹಗರಣ

ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಹೆಸರು ಆಗಾಗ ಕೇಳಿಬಂದಿದೆ. ಪ್ರಿಯಾಂಕ ಖರ್ಗೆಯವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿಯೂ ಬೊಮ್ಮಾಯಿಯವರ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ಅವರಿಗಿಂತಲೂ ಅವರ ಮಗನ ಮೇಲೆ ಹೆಚ್ಚು ಆರೋಪಗಳು ಕೇಳಿಬರುತ್ತಿದ್ದವು. ಆದರೆ ಬಿಟ್‌ಕಾಯಿನ್ ಭ್ರಷ್ಟಾಚಾರದಲ್ಲಿ ಈಗ ನೇರವಾಗಿ ಸಿಎಂ ಬೊಮ್ಮಾಯಿಯವರ ಹೆಸರು ಕೂಡ ಕೇಳಿಬರುತ್ತಿದೆ. ಇದು ಬಿಜೆಪಿ ಅನಿವಾರ್ಯವಾಗಿ ನಾಯಕತ್ವ ಬದಲಾವಣೆಗೆ ಕೈ ಹಾಕುವಂತೆ ಮಾಡಿದೆ ಎನ್ನಲಾಗುತ್ತಿದೆ.

ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಪ್ರಭಾವಿ ನಾಯಕರೇನಲ್ಲ. ಗೆಲ್ಲಿಸಿಕೊಂಡು ಬರುವ ಶಕ್ತಿ ಅವರಿಗಿಲ್ಲ. ಇನ್ನು ಬೊಮ್ಮಾಯಿಯವರು ಈಗಾಗಲೇ ಬಿಜೆಪಿ ಗೆಲ್ಲಿಸಲು ವಿಫಲರಾಗಿರುವ ಹಿನ್ನೆಲೆಯಲ್ಲಿ 2023ರ ಚುನಾವಣೆಗೆ ಇವರಿಬ್ಬರನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗುತ್ತಿದೆ. ಕಟೀಲ್ ಅವರು ಕೆಲವು ತಿಂಗಳುಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಇರುವುದು ಕೂಡ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರ ಬದಲಾವಣೆಯೂ ನಿಶ್ಚಿತ ಎನ್ನಲಾಗುತ್ತಿದೆ.

ಸಿಎಂ ರೇಸ್‌ಗೆ ಮತ್ತೊಂದು ಹೆಸರು ಸೇರ್ಪಡೆ

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಆರಂಭವಾದೊಡನೆ ಎಲ್ಲರ ಪ್ರಶ್ನೆ ಮುಂದಿನ ಸಿಎಂ ಯಾರಾಗಬಹುದು ಎನ್ನುವುದಾಗಿದೆ. ಈ ಹಿಂದೆ ಯಡಿಯೂರಪ್ಪನವರನ್ನು ಕೆಳಗಿಳಿಸಿದಾಗ ಜೋರಾಗಿ ಕೇಳಿಬಂದ ಹೆಸರು ಮುರುಗೇಶ ನಿರಾಣಿ. ಸಿಎಂ ರೇಸ್‌ನ ಅಂತಿಮ ಹಂತದವರೆಗೂ ಅವರಿದ್ದರು. ಬಿಜೆಪಿಯ ವರಿಷ್ಠರನ್ನೆಲ್ಲಾ ಭೇಟಿಯಾಗಿದ್ದರು. ಆದರೂ ಅವರಿಗೆ ಅಧಿಕಾರ ದಕ್ಕಿರಲಿಲ್ಲ. ಈ ಬಾರಿ ಪಡೆದೇ ತೀರುವುದಾಗಿ ಪಣ ತೊಟ್ಟಿದ್ದಾರೆ. ಪ್ರಬಲ ಲಿಂಗಾಯಿತ ಮಠಗಳ ಬೆಂಬಲ ಅವರಿಗಿದೆ.

ಶೋಭಾ ಕರಂದ್ಲಾಜೆ ಎಂಟ್ರಿ

ಇದು ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿರುವ ಹೆಸರಾಗಿದೆ. ಶೋಭಾರವರು ಸಿಎಂ ಆದರೆ ಯಡಿಯೂರಪ್ಪನವರ ಸಮ್ಮತಿ ಇದ್ದೆ ಇರುತ್ತದೆ, ಲಿಂಗಾಯಿತರಲ್ಲದವರು ಸಿಎಂ ಆಗುವುದರಿಂದ ಒಕ್ಕಲಿಗ ಸೇರಿ ಇತರ ಹಿಂದುಳಿದ ಮತಗಳ ಮೇಲೆ ಕಣ್ಣಿಡುವುದರ ಜೊತೆಗೆ ಲಿಂಗಾಯಿತ ಸರ್ಕಾರ ಎಂಬ ಆರೋಪದಿಂದ ಹೊರಬಂದು ಹಳೇ ಮೈಸೂರು ಪ್ರಾಂತ್ಯದಲ್ಲಿ ಪಕ್ಷದ ಪ್ರಾಬಲ್ಯವನ್ನು ಹೆಚ್ಚಿಸಬಹುದು ಎಂಬುದು ಪಕ್ಷದ ಲೆಕ್ಕಾಚಾರ. ಕರ್ನಾಟಕದ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಅಡ್ವಂಟೇಜ್ ಪಡೆದುಕೊಳ್ಳುವುದರ ಜೊತೆಗೆ ಬೊಮ್ಮಾಯಿಯಷ್ಟು ಪೇಲವ ಅಲ್ಲದ ಶೋಭಾರವರು ಡೈನಾಮಿಕ್ ಆಗಿದ್ದು ಪಕ್ಷಕ್ಕೆ ಹೊಸ ಇಮೇಜ್ ತರಬಲ್ಲರು ಎಂಬ ಆಸೆ ಬಿಜೆಪಿಯದು. ಜೊತೆಗೆ ಹಿಂದುತ್ವದ ಫೈರ್‌ಬ್ರಾಂಡ್ ಆಗಿಯೂ ಶೋಭಾ ಕೆಲಸ ಮಾಡಬಲ್ಲರು ಎಂಬುದು ಅವರ ಹೆಸರು ಮುನ್ನಲೆಗೆ ಬರಲು ಕಾರಣವಾಗಿದೆ. ಅಲ್ಲದೆ ಶೋಭಾ ಕರಂದ್ಲಾಜೆಯವರು ಸದ್ಯಕ್ಕೆ ಯಡಿಯೂರಪ್ಪ ಬಣದಲ್ಲಿ ಮಾತ್ರ ಗುರುತಿಸಿಕೊಂಡವರಲ್ಲ. ಬಿ.ಎಲ್ ಸಂತೋಷ್ ಸೇರಿದಂತೆ ಇತರರಿಗೂ ಹತ್ತಿರವಾಗಿರುವ ಅವರು ಕೇಂದ್ರ ಮಂತ್ರಿಯಾದರಲ್ಲದೆ ಉತ್ತರ ಪ್ರದೇಶ ಚುನಾವಣೆಯ ಒಂದಿಷ್ಟು ಜವಾಬ್ದಾರಿ ಸಹ ಹೊತ್ತಿದ್ದಾರೆ.

ಇದಲ್ಲದೆ ಈ ಹಿಂದೆ ಕೇಳಿಬಂದಂತೆ ಸಿ.ಟಿ ರವಿ, ಅಶ್ವಥ್ ನಾರಾಯಣ ಮತ್ತು ಜಗದೀಶ್ ಶೆಟ್ಟರ್‌ರವರು ಹೆಸರುಗಳು ಸಿಎಂ ರೇಸ್‌ನಲ್ಲಿವೆ.

ಬಿಜೆಪಿಯ ದೂರಾಲೋಚನೆಯೇನು?

ಯಾವುದೇ ರಾಜ್ಯದಲ್ಲಿ ಮಾಸ್ ಲೀಡರ್ ಆಗಿರುವವರು ಸಿಎಂ ಆಗುವುದು ಬಿಜೆಪಿಗೆ ಬೇಕಾಗಿಲ್ಲ, ಹೈಕಮಾಂಡ್ ಹೇಳಿದಂತೆ ಕೇಳುವವರು ಬೇಕು. ಇದನ್ನು ಯಡಿಯೂರಪ್ಪನವರನ್ನು ಇಳಿಸಿದ ಪ್ರಕರಣ ಸೇರಿದಂತೆ ಮಹಾರಾಷ್ಟ್ರ, ಗುಜರಾತ್‌ನಲ್ಲಿ ಕೂಡ ಕಾಣಬಹುದು. ಹಾಗೆಯೇ ಯಾವುದಾದರೂ ಪ್ರಬಲ ಸಮುದಾಯದ ನಾಯಕರಿಗಿಂತ ಅಲ್ಪಸಂಖ್ಯಾತ ಸಮುದಾಯದ, ಹೈಕಮಾಂಡ್ ಹಂಗಿನಲ್ಲಿರುವವರು ಸಿಎಂ ಇರಬೇಕೆಂದು ಮೋದಿ, ಶಾ ಬಯಸುತ್ತಾರೆ ಎಂಬುದಕ್ಕೆ ಹಲವಾರು ಉದಾಹರಣೆಗಳಿವೆ. ಆ ಮೂಲಕ ಕೇಂದ್ರ ಬಿಜೆಪಿ ನಾಯಕರ ವರ್ಚಸ್ಸು ಮತ್ತು ಹಿಂದುತ್ವದ ಮೂಲಕ ಚುನಾವಣೆಗಳನ್ನು ಗೆಲ್ಲಬೇಕೆಂದು ಬಿಜೆಪಿ ಬಯಸುತ್ತದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಅದನ್ನು ಸಾಧಿಸಲಾಗಿದೆ. ಅದರ ಭಾಗವಾಗಿ ಕರ್ನಾಟಕದಲ್ಲಿಯೂ ಸಹ ಲಿಂಗಾಯತ ಸಮುದಾಯವೊಂದನ್ನೇ ಅವಲಂಬಿಸುವುದನ್ನು ಬಿಟ್ಟು ಹಿಂದುತ್ವದ ಮೂಲಕ ಅಧಿಕಾರಕ್ಕೇರಲು ಅದು ಹವಣಿಸುತ್ತಿದೆ. ಈ ಆರು ತಿಂಗಳಿನಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು, ಚರ್ಚ್‌ಗಳ ಮೇಲೆ ದಾಳಿಗಳು, ಗೋ ರಕ್ಷಕರ ಹಾವಳಿ ಹೆಚ್ಚಾಗಿರುವುದು ಅದನ್ನೇ ಸೂಚಿಸುತ್ತದೆ. ಮತಾಂತರ ನಿಷೇಧ ಮಸೂದೆಯಂತಹ ವಿವಾದಾತ್ಮಕ ಹಾಗೂ ಸಂವಿಧಾನ ವಿರೋಧಿ ಎನ್ನಲಾಗಿರುವ ಕಾನೂನನ್ನು ಕೂಡ ವಿಧಾನಸಭೆಯಲ್ಲಿ ಮಂಡಿಸಲು ಸರ್ಕಾರ ಸಿದ್ಧವಾಗಿದೆ.

ಹಿಂದೆಯೆಲ್ಲ ನಾಯಕತ್ವ ಬದಲಾವಣೆ ವಿಷಯ ಬಂದಾಗ ಇಲ್ಲಇಲ್ಲ ಎನ್ನುತ್ತಲೇ ಬದಲಾವಣೆ ಮಾಡಿರುವ ಬಿಜೆಪಿ ಸಂಕ್ರಾಂತಿ ನಂತರ ಬೊಮ್ಮಾಯಿಯವರನ್ನು ಇಳಿಸಲು ನೋಡುತ್ತಿತ್ತು. ಅಷ್ಟರಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆ ಆಗಿರುವುದರಿಂದ ಬಿಜೆಪಿ ಅತ್ತ ಹೆಚ್ಚು ಗಮನ ಹರಿಸಿದೆ. ಚುನಾವಣೆ ಮುಗಿದ ಕೂಡಲೇ ಅನಾರೋಗ್ಯವೋ ಮತ್ತೊಂದೊ ಕಾರಣ ನೀಡಿ ಬೊಮ್ಮಾಯಿಯವರನ್ನು ಕೆಳಗಿಳಿಸಿ ಬಿಜೆಪಿ ರಾಜಕೀಯಕ್ಕೆ ಸಹಾಯ ಮಾಡುವಂತಹ ಡೈನಾಮಿಕ್ ಆದವರೊಬ್ಬರನ್ನು ತಂದು ಒಂದು ವರ್ಷದ ನಂತರ ಚುನಾವಣೆಗೆ ಹೋಗಬೇಕು ಎಂಬುದು ಬಿಜೆಪಿಯ ಹಂಬಲ. ಇದರಲ್ಲಿ ಬಿಜೆಪಿ ಯಶಸ್ವಿಯಾಗಲಿದೆಯೇ? ಇಲ್ಲ ಇದು ಬಿಜೆಪಿಗೆ ತಿರುಗುಬಾಣವಾಗಲಿದೆಯೇ?

  • ಮುತ್ತುರಾಜು

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ: ಅಧಿಕಾರ ಶಾಶ್ವತವಲ್ಲ ಎಂದ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...