Homeಕರ್ನಾಟಕಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

ಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು (ಜ.25) ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಶೆಟ್ಟರ್ ಕೇಸರಿ ಪಕ್ಷಕ್ಕೆ ಮರಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಅವರು ಬಿಜೆಪಿಯವರು ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದ್ದು, ಕೆಲ ದಿನಗಳ ಹಿಂದೆ ಜಗದೀಶ್ ಶೆಟ್ಟರ್ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿಯವರು ನಮ್ಮ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಈ ಬಗ್ಗೆ ಎಚ್ಚರವಾಗಿರಬೇಕು ಎಂದಿದ್ದರು. ನಿನ್ನೆ ಬೆಳಿಗ್ಗೆ ಅವರೊಂದಿಗೆ ಮಾತನಾಡಿದ್ದೆ. ಕಾಂಗ್ರೆಸ್‌ ನನಗೆ ರಾಜಕೀಯ ಮರುಜೀವ ಕೊಟ್ಟಿದೆ. ಯಾವುದೇ ಕಾರಣಕ್ಕೆ ಬಿಜೆಪಿಗೆ ಹೋಗಲ್ಲ ಎಂದಿದ್ದರು. ಈ ಮಾತನ್ನು ನಂಬಿ ನಾನು ಮೈಸೂರಿನಲ್ಲಿ ಅವರ ಬಗ್ಗೆ ಮಾತನಾಡಿದ್ದೆ. ಈಗ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿಯಿತು. ಅವರು ಹಿರಿಯರು ಎಂದು ನಮ್ಮ ಪಕ್ಷ ಗೌರವ ಕೊಟ್ಟಿತ್ತು ಎಂದಿದ್ದಾರೆ.

ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಅವರು ಮೊದಲು ಹೇಳಿಕೆ ಕೊಡಲಿ, ಆಮೇಲೆ ನಾನು ಮಾತನಾಡುತ್ತೇನೆ. ನನಗೆ ಇದುವರೆಗೆ ಅವರ ರಾಜೀನಾಮೆ ಪತ್ರ ದೊರೆತಿಲ್ಲ ಎಂದರು. ದೇಶದ ಹಿತಕ್ಕಾಗಿ ಬಿಜೆಪಿಗೆ ಮರಳಿರುವುದಾಗಿ ಶೆಟ್ಟರ್ ಹೇಳಿದ್ದಾರೆ ಎಂದು ಮಾಧ್ಯಮದವರು ಡಿಕೆಶಿಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಡಿಕೆಶಿ, ಬಿಜೆಪಿಯವರು ಅವರಿಗೆ ಸೀಟ್ ತಪ್ಪಿಸುವಾಗ ಅವರಿಗೆ ದೇಶದ ಹಿತ ಗೊತ್ತಿರಲಿಲ್ವಾ? ಎಂದು ಪ್ರಶ್ನಿಸಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ : ಬಸವರಾಜ ಹೊರಟ್ಟಿ

ಜಗದೀಶ್ ಶೆಟ್ಟರ್ ಧಿಡೀರ್ ಬಿಜೆಪಿ ಸೇರ್ಪಡೆಯ ಕುರಿತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು (ಜ.25) ಮಧ್ಯಾಹ್ನ 12:45ಕ್ಕೆ ಜಗದೀಶ್ ಶೆಟ್ಟರ್ ಕರೆ ಮಾಡಿ ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಈ-ಮೇಲ್ ಮಾಡುವುದಾಗಿ ಹೇಳಿದ್ದಾರೆ. ಆದರೆ, ನನಗೆ ಇದುವರೆಗೆ ಈ-ಮೇಲ್ ಬಂದಿಲ್ಲ. ನಿಯಮಗಳ ಪ್ರಕಾರ, ಸದಸ್ಯರು ನೇರವಾಗಿ ಬಂದು ರಾಜೀನಾಮೆ ನೀಡ್ಬೇಕು. ಇಲ್ಲದಿದ್ದರೆ ಪಕ್ಷಾಂತರ ಕಾಯ್ದೆ ಅನ್ವಯ ಆಗಲಿದೆ. ಯಾರಾದರು ದೂರು ಕೊಟ್ಟರೆ ಪಕ್ಷಾಂತರ ಕಾಯ್ದೆ ಪ್ರಕಾರ ಶೆಟ್ಟರ್‌ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಪಕ್ಷಾಂತರ ನಿಷೇಧ ಕಾಯ್ದೆ? 

ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ, ಅಂದರೆ 1985ರ ಜನವರಿ 30ರಂದು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಯಿತು. 2003ರಲ್ಲಿ ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ಕಾಯ್ದೆಗೆ ಮತ್ತಷ್ಟು ಬಲ ತುಂಬಲಾಯಿತು.

ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಕಾರ, ರಾಜಕೀಯ ಪಕ್ಷದಿಂದ ಆಯ್ಕೆಯಾಗುವ ಯಾವುದೇ ಶಾಸಕ/ಸಂಸದರು, ತಾನು ಆಯ್ಕೆಯಾದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೆ, ಇನ್ನೊಂದು ರಾಜಕೀಯ ಪಕ್ಷಕ್ಕೆ ಸೇರಿದರೆ ಅದು ಪಕ್ಷಾಂತರವಾಗಲಿದೆ. ಅಂಥವರನ್ನು ಅನರ್ಹಗೊಳಿಸಬಹುದು.

ಮತದಾನದ ಸಮಯದಲ್ಲಿ ಹಾಜರಿರಲೇಬೇಕು ಎಂದು ರಾಜಕೀಯ ಪಕ್ಷವೊಂದು ತನ್ನ ಶಾಸಕ/ಸಂಸದರಿಗೆ ಲಿಖಿತ ಸೂಚನೆ (ವಿಪ್‌) ಜಾರಿಗೊಳಿಸಿದ ಬಳಿಕವೂ, ಅದನ್ನು ಉಲ್ಲಂಘನೆ ಮಾಡುವವರು ಹಾಗೂ ಮತದಾನದಿಂದ ದೂರ ಉಳಿಯುವವರನ್ನು ಪಕ್ಷಾಂತರಿಗಳು ಎಂದು ಅನರ್ಹಗೊಳಿಸಬಹುದು.

ಒಬ್ಬ ಸದಸ್ಯ ಪಕ್ಷಾಂತರ ಮಾಡಿದ್ದಾನೋ ಇಲ್ಲವೇ ಎಂಬ ನಿರ್ಣಯವನ್ನು ಸಭಾಧ್ಯಕ್ಷ, ಸ್ಪೀಕರ್‌ ಪಕ್ಷಾಂತರ ನಿಷೇಧ ಕಾಯ್ದೆಯೆ ಅನ್ವಯ ತೀರ್ಮಾನ ಕೈಗೊಳ್ಳುವ ಅಧಿಕಾರ ಹೊಂದಿರುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...