Homeಕರ್ನಾಟಕಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

ಜಗದೀಶ್ ಶೆಟ್ಟರ್ ದಿಢೀರ್ ಬಿಜೆಪಿ ಸೇರ್ಪಡೆ: ಸಿಎಂ, ಡಿಸಿಎಂ ಏನಂದ್ರು?

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು (ಜ.25) ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಶೆಟ್ಟರ್ ಕೇಸರಿ ಪಕ್ಷಕ್ಕೆ ಮರಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ. ಅವರು ಬಿಜೆಪಿಯವರು ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದ್ದು, ಕೆಲ ದಿನಗಳ ಹಿಂದೆ ಜಗದೀಶ್ ಶೆಟ್ಟರ್ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಿಜೆಪಿಯವರು ನಮ್ಮ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಈ ಬಗ್ಗೆ ಎಚ್ಚರವಾಗಿರಬೇಕು ಎಂದಿದ್ದರು. ನಿನ್ನೆ ಬೆಳಿಗ್ಗೆ ಅವರೊಂದಿಗೆ ಮಾತನಾಡಿದ್ದೆ. ಕಾಂಗ್ರೆಸ್‌ ನನಗೆ ರಾಜಕೀಯ ಮರುಜೀವ ಕೊಟ್ಟಿದೆ. ಯಾವುದೇ ಕಾರಣಕ್ಕೆ ಬಿಜೆಪಿಗೆ ಹೋಗಲ್ಲ ಎಂದಿದ್ದರು. ಈ ಮಾತನ್ನು ನಂಬಿ ನಾನು ಮೈಸೂರಿನಲ್ಲಿ ಅವರ ಬಗ್ಗೆ ಮಾತನಾಡಿದ್ದೆ. ಈಗ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿಯಿತು. ಅವರು ಹಿರಿಯರು ಎಂದು ನಮ್ಮ ಪಕ್ಷ ಗೌರವ ಕೊಟ್ಟಿತ್ತು ಎಂದಿದ್ದಾರೆ.

ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಅವರು ಮೊದಲು ಹೇಳಿಕೆ ಕೊಡಲಿ, ಆಮೇಲೆ ನಾನು ಮಾತನಾಡುತ್ತೇನೆ. ನನಗೆ ಇದುವರೆಗೆ ಅವರ ರಾಜೀನಾಮೆ ಪತ್ರ ದೊರೆತಿಲ್ಲ ಎಂದರು. ದೇಶದ ಹಿತಕ್ಕಾಗಿ ಬಿಜೆಪಿಗೆ ಮರಳಿರುವುದಾಗಿ ಶೆಟ್ಟರ್ ಹೇಳಿದ್ದಾರೆ ಎಂದು ಮಾಧ್ಯಮದವರು ಡಿಕೆಶಿಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಡಿಕೆಶಿ, ಬಿಜೆಪಿಯವರು ಅವರಿಗೆ ಸೀಟ್ ತಪ್ಪಿಸುವಾಗ ಅವರಿಗೆ ದೇಶದ ಹಿತ ಗೊತ್ತಿರಲಿಲ್ವಾ? ಎಂದು ಪ್ರಶ್ನಿಸಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ : ಬಸವರಾಜ ಹೊರಟ್ಟಿ

ಜಗದೀಶ್ ಶೆಟ್ಟರ್ ಧಿಡೀರ್ ಬಿಜೆಪಿ ಸೇರ್ಪಡೆಯ ಕುರಿತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು (ಜ.25) ಮಧ್ಯಾಹ್ನ 12:45ಕ್ಕೆ ಜಗದೀಶ್ ಶೆಟ್ಟರ್ ಕರೆ ಮಾಡಿ ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಈ-ಮೇಲ್ ಮಾಡುವುದಾಗಿ ಹೇಳಿದ್ದಾರೆ. ಆದರೆ, ನನಗೆ ಇದುವರೆಗೆ ಈ-ಮೇಲ್ ಬಂದಿಲ್ಲ. ನಿಯಮಗಳ ಪ್ರಕಾರ, ಸದಸ್ಯರು ನೇರವಾಗಿ ಬಂದು ರಾಜೀನಾಮೆ ನೀಡ್ಬೇಕು. ಇಲ್ಲದಿದ್ದರೆ ಪಕ್ಷಾಂತರ ಕಾಯ್ದೆ ಅನ್ವಯ ಆಗಲಿದೆ. ಯಾರಾದರು ದೂರು ಕೊಟ್ಟರೆ ಪಕ್ಷಾಂತರ ಕಾಯ್ದೆ ಪ್ರಕಾರ ಶೆಟ್ಟರ್‌ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಏನಿದು ಪಕ್ಷಾಂತರ ನಿಷೇಧ ಕಾಯ್ದೆ? 

ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ, ಅಂದರೆ 1985ರ ಜನವರಿ 30ರಂದು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಯಿತು. 2003ರಲ್ಲಿ ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ಕಾಯ್ದೆಗೆ ಮತ್ತಷ್ಟು ಬಲ ತುಂಬಲಾಯಿತು.

ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಕಾರ, ರಾಜಕೀಯ ಪಕ್ಷದಿಂದ ಆಯ್ಕೆಯಾಗುವ ಯಾವುದೇ ಶಾಸಕ/ಸಂಸದರು, ತಾನು ಆಯ್ಕೆಯಾದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೆ, ಇನ್ನೊಂದು ರಾಜಕೀಯ ಪಕ್ಷಕ್ಕೆ ಸೇರಿದರೆ ಅದು ಪಕ್ಷಾಂತರವಾಗಲಿದೆ. ಅಂಥವರನ್ನು ಅನರ್ಹಗೊಳಿಸಬಹುದು.

ಮತದಾನದ ಸಮಯದಲ್ಲಿ ಹಾಜರಿರಲೇಬೇಕು ಎಂದು ರಾಜಕೀಯ ಪಕ್ಷವೊಂದು ತನ್ನ ಶಾಸಕ/ಸಂಸದರಿಗೆ ಲಿಖಿತ ಸೂಚನೆ (ವಿಪ್‌) ಜಾರಿಗೊಳಿಸಿದ ಬಳಿಕವೂ, ಅದನ್ನು ಉಲ್ಲಂಘನೆ ಮಾಡುವವರು ಹಾಗೂ ಮತದಾನದಿಂದ ದೂರ ಉಳಿಯುವವರನ್ನು ಪಕ್ಷಾಂತರಿಗಳು ಎಂದು ಅನರ್ಹಗೊಳಿಸಬಹುದು.

ಒಬ್ಬ ಸದಸ್ಯ ಪಕ್ಷಾಂತರ ಮಾಡಿದ್ದಾನೋ ಇಲ್ಲವೇ ಎಂಬ ನಿರ್ಣಯವನ್ನು ಸಭಾಧ್ಯಕ್ಷ, ಸ್ಪೀಕರ್‌ ಪಕ್ಷಾಂತರ ನಿಷೇಧ ಕಾಯ್ದೆಯೆ ಅನ್ವಯ ತೀರ್ಮಾನ ಕೈಗೊಳ್ಳುವ ಅಧಿಕಾರ ಹೊಂದಿರುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...