HomeಅಂಕಣಗಳುKarnataka SIR'ಕರ್ನಾಟಕದಲ್ಲಿ SIR' ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

- Advertisement -
- Advertisement -

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಜೂನ್ 30 ರಿಂದ ನಡೆಯುವ ಎಸ್‌ಐಆರ್ (SIR) ಅನ್ನು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಅದಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರ ಸಭೆ ಸ್ಪಷ್ಟ ನಿದರ್ಶನ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವರ ಕಾರ್ಯವೈಖರಿ ಮತ್ತು ಪಕ್ಷದ ಸಂಘಟನೆಗೆ ಗೈರಾಗುವ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸರ್ಕಾರದ ಸಚಿವರು ಮತ್ತು ಶಾಸಕರನ್ನು ನಾನು ಸುಮ್ಮನೆ ಬಿಡುವುದಿಲ್ಲ. ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕೆಲಸ ಮಾಡಲೇಬೇಕು” ಎಂದಿದ್ದಾರೆ.

“ಮೊನ್ನೆ ನಡೆದ ಪ್ರಮುಖ ಸಭೆಗೆ ಹಲವು ಆಫೀಸ್ ಬೇರರ್ಸ್ ಬರಲೇ ಇಲ್ಲ. ಸಮಯ ಕೊಟ್ಟಿದ್ದರೂ ಬೇಜವಾಬ್ದಾರಿ ತೋರಿದ್ದಾರೆ. ಇಂತಹವರನ್ನು ಎಐಸಿಸಿ (AICC) ಒಂದೇ ದಿನದಲ್ಲಿ ಹುದ್ದೆಯಿಂದ ತೆಗೆದುಹಾಕಿದೆ. ನಿರ್ಲಕ್ಷ್ಯ ವಹಿಸಿದರೆ ಜನರಲ್ ಸೆಕ್ರೆಟರಿ, ವೈಸ್ ಪ್ರೆಸಿಡೆಂಟ್‌ಗಳೆಲ್ಲಾ ಒಂದೇ ದಿನದಲ್ಲಿ ‘ಮಾಜಿ’ ಆಗ್ತಾರೆ” ಎಂದು ಎಚ್ಚರಿಸಿದ್ದಾರೆ.

‘ಎಸ್ಐಆರ್’ (ಮತದಾರರ ಪಟ್ಟಿ ಪರಿಷ್ಕರಣೆ/ಶುದ್ಧೀಕರಣ ಪ್ರಕ್ರಿಯೆ) ಕುರಿತು ಮಾತನಾಡಿದ ಅವರು, “ಇದು ನಮಗೆ ಸಿಕ್ಕಿರುವ ದೊಡ್ಡ ಅವಕಾಶ ಹಾಗೂ ಅಷ್ಟೇ ದೊಡ್ಡ ಅಪಾಯ ಕೂಡ ಹೌದು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬರೊಬ್ಬರಿ 90 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟು ರಾಜಕೀಯ ಚದುರಂಗದಾಟ ಆಡಲಾಗಿತ್ತು. ಇದು ಕೇವಲ ತಾಂತ್ರಿಕ ಪ್ರಕ್ರಿಯೆಯಲ್ಲ, ಬದಲಿಗೆ ವಿರೋಧ ಪಕ್ಷಗಳು ಅಥವಾ ವ್ಯವಸ್ಥೆಯು ತಮ್ಮ ಮತಬ್ಯಾಂಕ್ ಅನ್ನು ಧ್ವಂಸಗೊಳಿಸಲು ಬಳಸಬಹುದಾದ ಒಂದು ದೊಡ್ಡ “ಅಪಾಯ” ಎಂಬುದನ್ನು ಅವರು ಮನಗಂಡಿದ್ದಾರೆ.

ಈ ಮೂಲಕ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಎದುರಾಗಬಹುದಾದ ಗಂಭೀರ ಪರಿಣಾಮವನ್ನು ಪಕ್ಷಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕರ್ನಾಟಕದಲ್ಲೂ ಇಂತಹದ್ದೇ ಹುನ್ನಾರ ನಡೆಯುವ ಸಾಧ್ಯತೆಯಿದೆ. ಆದ್ದರಿಂದ ನಮ್ಮ ನಾಯಕರು ಜಾಗೃತರಾಗಿರಬೇಕು” ಎಂದಿದ್ದಾರೆ.

ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೊಸ ನಿಯಮಗಳನ್ನು ತರಲಾಗುವುದು ಎಂದು ಪ್ರಕಟಿಸಿದ ಡಿಕೆಶಿ, “ಎಲ್ಲಾ ಸಚಿವರು ಮತ್ತು ಎಂಎಲ್‌ಎಗಳು ಕೇವಲ ಬೆಂಗಳೂರಿಗೆ ಸೀಮಿತವಾಗದೆ, ತಮಗೆ ವಹಿಸಿದ ಜಿಲ್ಲೆ ಹಾಗೂ ಕ್ಷೇತ್ರಗಳಿಗೆ ಭೇಟಿ ನೀಡಿ ಕಡ್ಡಾಯವಾಗಿ ಸಭೆ ನಡೆಸಬೇಕು. ಬೂತ್ ಮಟ್ಟದ ಏಜೆಂಟರಿಗೆ (BLA) ತಕ್ಷಣವೇ ಸೂಕ್ತ ತರಬೇತಿ ನೀಡಿ, ಅವರು ಸರ್ಕಾರಿ ಅಧಿಕಾರಿಗಳ (BLO) ಜೊತೆಗೂಡಿ ಮತದಾರರ ಪಟ್ಟಿಯನ್ನು ಮರುಪರಿಶೀಲಿಸುವಂತೆ ನೋಡಿಕೊಳ್ಳಬೇಕು” ಎಂದು ಕಾರ್ಯಕರ್ತರು ಹಾಗೂ ನಾಯಕರಿಗೆ ಖಡಕ್ ಆದೇಶ ನೀಡಿದ್ದಾರೆ.

ಸಾಮಾನ್ಯವಾಗಿ ಕಾರ್ಯಕರ್ತರು ಮತ್ತು ನಾಯಕರು “ನಮಗೆ 25 ವರ್ಷಗಳಿಂದ ವೋಟ್ ಇದೆ, ನಮ್ಮ ತಾತನ ಕಾಲದಿಂದಲೂ ಇಲ್ಲೇ ವೋಟ್ ಇದೆ, ಮ್ಯಾಪಿಂಗ್ 80-90% ಮುಗಿದಿದೆ” ಎಂದು ಅಸಡ್ಡೆ ತೋರಿಸದೆ, ಎಸ್‌ಐಆರ್ ಎಂದರೆ ಹೊಸದಾಗಿ ನಡೆಯುವ ವಿಶೇಷ ಪರಿಷ್ಕರಣೆ (Special Revision) ಆಗಿರುವುದರಿಂದ, ಪ್ರತಿ ವೋಟನ್ನು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಳೆಯ ದಾಖಲೆಗಳ ಮೇಲಿನ ಅತಿಯಾದ ಆತ್ಮವಿಶ್ವಾಸ ಮತದಾನದ ಹಕ್ಕಿಗೆ ಮುಳುವಾಗಬಾರದು ಎಂದಿದ್ದಾರೆ.

ಶಿವಕುಮಾರ್ ಅವರು ಮತದಾರರನ್ನು ಜಾಗೃತಗೊಳಿಸಲು ಅತ್ಯಂತ ಚಾಣಾಕ್ಷ ರಾಜಕೀಯ ತಂತ್ರವೊಂದನ್ನು ಬಳಸಿದ್ದಾರೆ. “ನಿಮ್ಮ ವೋಟ್ ಲಿಸ್ಟ್‌ನಲ್ಲಿ ಹೆಸರಿಲ್ಲದಿದ್ದರೆ, ನಿಮಗೆ ಗೃಹಲಕ್ಷ್ಮಿ ಇಲ್ಲ, ಗೃಹಜ್ಯೋತಿ ಇಲ್ಲ, ಅನ್ನಭಾಗ್ಯ ಇಲ್ಲ” ಎಂದು ಹೇಳುವ ಮೂಲಕ, ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳುವುದನ್ನು ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಲಿಂಕ್ ಮಾಡಿದ್ದಾರೆ. ಇದು ಕಾರ್ಯಕರ್ತರು ಸಾರ್ವಜನಿಕರ ಮನೆ ಬಾಗಿಲಿಗೆ ಹೋದಾಗ, ಜನರೇ ಸ್ವಯಂಪ್ರೇರಿತರಾಗಿ ತಮ್ಮ ವೋಟನ್ನು ಪರಿಶೀಲಿಸಿಕೊಳ್ಳುವಂತೆ ಮಾಡುವ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಿದೆ.

ಪ್ರತಿ ಜಿಲ್ಲೆ ಮತ್ತು ಕ್ಷೇತ್ರಗಳಿಗೆ ಶಾಸಕರು ಮತ್ತು ಮಂತ್ರಿಗಳು ಕಡ್ಡಾಯವಾಗಿ ಭೇಟಿ ನೀಡಿ ಮೀಟಿಂಗ್ ಮಾಡಬೇಕು. ಬೂತ್ ಮಟ್ಟದ ಏಜೆಂಟ್‌ಗಳಿಗೆ ಸೂಕ್ತ ತರಬೇತಿ ನೀಡಿ, ಅವರು ಬಿಎಲ್‌ಒ (BLO – Booth Level Officers) ಗಳ ಜೊತೆ ಮನೆ ಮನೆಗೆ ಹೋಗುವಂತೆ ನೋಡಿಕೊಳ್ಳುವುದು. ಮಹಾನಗರ ಪಾಲಿಕೆ (Corporation) ಚುನಾವಣೆಗಳ ಜವಾಬ್ದಾರಿಯನ್ನು ಮಂತ್ರಿಗಳಿಗೆ ಹಂಚಿ, ವಿಶೇಷ ತಂಡಗಳನ್ನು ನೇಮಕ ಮಾಡಲಾಗುತ್ತಿದೆ.

ಈ ಹಿಂದೆ ಎಸ್‌ಆರ್‌ಐ ಮೀಟಿಂಗ್‌ಗೆ ಬರದೇ ನಿರ್ಲಕ್ಷ್ಯ ವಹಿಸಿದ್ದ ಎಐಸಿಸಿ (AICC) ಮಟ್ಟದಲ್ಲಿ ಹುದ್ದೆಗಳಿಂದ ತೆಗೆದುಹಾಕಿದ್ದನ್ನು ಉಲ್ಲೇಖಿಸಿ, ಕೆಲಸ ಮಾಡದಿದ್ದರೆ ಕಠಿಣ ಕ್ರಮ ಗ್ಯಾರಂಟಿ ಎಂಬ ಸಂದೇಶ ರವಾನಿಸಿದ್ದಾರೆ. ಅದೇ ರೀತಿ ದೇವನಹಳ್ಳಿಯಲ್ಲಿ ನಡೆದ ಎಸ್‌ಐಆರ್ ಕಾರ್ಯಗಾರಕ್ಕೆ ಗೈರಾದ ಪ್ರಮುಖ ನಾಯಕರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ.

“ನನ್ನ ಹಿಂದೆ ಸುತ್ತಾಡುವುದು ಅಥವಾ ದೊಡ್ಡ ನಾಯಕರ ಹಿಂದೆ ತಿರುಗಾಡಿ ಟಿಕೆಟ್ ಕೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರು ವಾರ್ಡ್‌ಗಳಲ್ಲಿ, ಬೂತ್ ಮಟ್ಟದಲ್ಲಿ ಮನೆ ಮನೆಗೆ ಹೋಗಿ ಎಸ್‌ಐಆರ್ ಕೆಲಸ ಮಾಡಿ ವೋಟ್ ಉಳಿಸುತ್ತಾರೋ, ಅವರಿಗೆ ಮಾತ್ರ ಟಿಕೆಟ್” ಎಂದು ಹೇಳಿದ್ದಾರೆ. ಇದು ಅವರು ಪಕ್ಷದ ಗೆಲುವಿಗಾಗಿ ಎಷ್ಟು ಗಂಭೀರ ಹಾಗೂ ಪಾರದರ್ಶಕ ಪ್ರಯತ್ನ ಮಾಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ.

ಡಿ. ಕೆ. ಶಿವಕುಮಾರ್ ಅವರು ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿನ ಗೊಂದಲಗಳನ್ನು ಕೇವಲ ಆಡಳಿತಾತ್ಮಕ ವಿಷಯವಾಗಿ ನೋಡದೆ. ಭವಿಷ್ಯವನ್ನು ನಿರ್ಧರಿಸುವ ” ಹೋರಾಟ” ಎಂಬಂತೆ ಪರಿಗಣಿಸಿದ್ದಾರೆ. ತಳಮಟ್ಟದ ಸಣ್ಣ ತಪ್ಪುಗಳೂ ಸಹ ದೊಡ್ಡ ರಾಜಕೀಯ ನಷ್ಟಕ್ಕೆ ಕಾರಣವಾಗಬಹುದು ಎಂಬುದನ್ನು ಅರಿತು, ಅವರು ಇಡೀ ಪಕ್ಷದ ಯಂತ್ರಾಂಗವನ್ನು ಕಣಕ್ಕಿಳಿಸಲು ತೋರುತ್ತಿರುವ ಉತ್ಸಾಹ ರಾಜ್ಯದಲ್ಲಿ ನಡೆಯುವ ಎಸ್‌ಐಆರ್ ಮಹತ್ವ ಪಡೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...