HomeಅಂಕಣಗಳುKarnataka SIR'ಕರ್ನಾಟಕದಲ್ಲಿ SIR' ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

- Advertisement -
- Advertisement -

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಜೂನ್ 30 ರಿಂದ ನಡೆಯುವ ಎಸ್‌ಐಆರ್ (SIR) ಅನ್ನು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಅದಕ್ಕೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರ ಸಭೆ ಸ್ಪಷ್ಟ ನಿದರ್ಶನ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವರ ಕಾರ್ಯವೈಖರಿ ಮತ್ತು ಪಕ್ಷದ ಸಂಘಟನೆಗೆ ಗೈರಾಗುವ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸರ್ಕಾರದ ಸಚಿವರು ಮತ್ತು ಶಾಸಕರನ್ನು ನಾನು ಸುಮ್ಮನೆ ಬಿಡುವುದಿಲ್ಲ. ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕೆಲಸ ಮಾಡಲೇಬೇಕು” ಎಂದಿದ್ದಾರೆ.

“ಮೊನ್ನೆ ನಡೆದ ಪ್ರಮುಖ ಸಭೆಗೆ ಹಲವು ಆಫೀಸ್ ಬೇರರ್ಸ್ ಬರಲೇ ಇಲ್ಲ. ಸಮಯ ಕೊಟ್ಟಿದ್ದರೂ ಬೇಜವಾಬ್ದಾರಿ ತೋರಿದ್ದಾರೆ. ಇಂತಹವರನ್ನು ಎಐಸಿಸಿ (AICC) ಒಂದೇ ದಿನದಲ್ಲಿ ಹುದ್ದೆಯಿಂದ ತೆಗೆದುಹಾಕಿದೆ. ನಿರ್ಲಕ್ಷ್ಯ ವಹಿಸಿದರೆ ಜನರಲ್ ಸೆಕ್ರೆಟರಿ, ವೈಸ್ ಪ್ರೆಸಿಡೆಂಟ್‌ಗಳೆಲ್ಲಾ ಒಂದೇ ದಿನದಲ್ಲಿ ‘ಮಾಜಿ’ ಆಗ್ತಾರೆ” ಎಂದು ಎಚ್ಚರಿಸಿದ್ದಾರೆ.

‘ಎಸ್ಐಆರ್’ (ಮತದಾರರ ಪಟ್ಟಿ ಪರಿಷ್ಕರಣೆ/ಶುದ್ಧೀಕರಣ ಪ್ರಕ್ರಿಯೆ) ಕುರಿತು ಮಾತನಾಡಿದ ಅವರು, “ಇದು ನಮಗೆ ಸಿಕ್ಕಿರುವ ದೊಡ್ಡ ಅವಕಾಶ ಹಾಗೂ ಅಷ್ಟೇ ದೊಡ್ಡ ಅಪಾಯ ಕೂಡ ಹೌದು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬರೊಬ್ಬರಿ 90 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟು ರಾಜಕೀಯ ಚದುರಂಗದಾಟ ಆಡಲಾಗಿತ್ತು. ಇದು ಕೇವಲ ತಾಂತ್ರಿಕ ಪ್ರಕ್ರಿಯೆಯಲ್ಲ, ಬದಲಿಗೆ ವಿರೋಧ ಪಕ್ಷಗಳು ಅಥವಾ ವ್ಯವಸ್ಥೆಯು ತಮ್ಮ ಮತಬ್ಯಾಂಕ್ ಅನ್ನು ಧ್ವಂಸಗೊಳಿಸಲು ಬಳಸಬಹುದಾದ ಒಂದು ದೊಡ್ಡ “ಅಪಾಯ” ಎಂಬುದನ್ನು ಅವರು ಮನಗಂಡಿದ್ದಾರೆ.

ಈ ಮೂಲಕ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಎದುರಾಗಬಹುದಾದ ಗಂಭೀರ ಪರಿಣಾಮವನ್ನು ಪಕ್ಷಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕರ್ನಾಟಕದಲ್ಲೂ ಇಂತಹದ್ದೇ ಹುನ್ನಾರ ನಡೆಯುವ ಸಾಧ್ಯತೆಯಿದೆ. ಆದ್ದರಿಂದ ನಮ್ಮ ನಾಯಕರು ಜಾಗೃತರಾಗಿರಬೇಕು” ಎಂದಿದ್ದಾರೆ.

ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೊಸ ನಿಯಮಗಳನ್ನು ತರಲಾಗುವುದು ಎಂದು ಪ್ರಕಟಿಸಿದ ಡಿಕೆಶಿ, “ಎಲ್ಲಾ ಸಚಿವರು ಮತ್ತು ಎಂಎಲ್‌ಎಗಳು ಕೇವಲ ಬೆಂಗಳೂರಿಗೆ ಸೀಮಿತವಾಗದೆ, ತಮಗೆ ವಹಿಸಿದ ಜಿಲ್ಲೆ ಹಾಗೂ ಕ್ಷೇತ್ರಗಳಿಗೆ ಭೇಟಿ ನೀಡಿ ಕಡ್ಡಾಯವಾಗಿ ಸಭೆ ನಡೆಸಬೇಕು. ಬೂತ್ ಮಟ್ಟದ ಏಜೆಂಟರಿಗೆ (BLA) ತಕ್ಷಣವೇ ಸೂಕ್ತ ತರಬೇತಿ ನೀಡಿ, ಅವರು ಸರ್ಕಾರಿ ಅಧಿಕಾರಿಗಳ (BLO) ಜೊತೆಗೂಡಿ ಮತದಾರರ ಪಟ್ಟಿಯನ್ನು ಮರುಪರಿಶೀಲಿಸುವಂತೆ ನೋಡಿಕೊಳ್ಳಬೇಕು” ಎಂದು ಕಾರ್ಯಕರ್ತರು ಹಾಗೂ ನಾಯಕರಿಗೆ ಖಡಕ್ ಆದೇಶ ನೀಡಿದ್ದಾರೆ.

ಸಾಮಾನ್ಯವಾಗಿ ಕಾರ್ಯಕರ್ತರು ಮತ್ತು ನಾಯಕರು “ನಮಗೆ 25 ವರ್ಷಗಳಿಂದ ವೋಟ್ ಇದೆ, ನಮ್ಮ ತಾತನ ಕಾಲದಿಂದಲೂ ಇಲ್ಲೇ ವೋಟ್ ಇದೆ, ಮ್ಯಾಪಿಂಗ್ 80-90% ಮುಗಿದಿದೆ” ಎಂದು ಅಸಡ್ಡೆ ತೋರಿಸದೆ, ಎಸ್‌ಐಆರ್ ಎಂದರೆ ಹೊಸದಾಗಿ ನಡೆಯುವ ವಿಶೇಷ ಪರಿಷ್ಕರಣೆ (Special Revision) ಆಗಿರುವುದರಿಂದ, ಪ್ರತಿ ವೋಟನ್ನು ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಳೆಯ ದಾಖಲೆಗಳ ಮೇಲಿನ ಅತಿಯಾದ ಆತ್ಮವಿಶ್ವಾಸ ಮತದಾನದ ಹಕ್ಕಿಗೆ ಮುಳುವಾಗಬಾರದು ಎಂದಿದ್ದಾರೆ.

ಶಿವಕುಮಾರ್ ಅವರು ಮತದಾರರನ್ನು ಜಾಗೃತಗೊಳಿಸಲು ಅತ್ಯಂತ ಚಾಣಾಕ್ಷ ರಾಜಕೀಯ ತಂತ್ರವೊಂದನ್ನು ಬಳಸಿದ್ದಾರೆ. “ನಿಮ್ಮ ವೋಟ್ ಲಿಸ್ಟ್‌ನಲ್ಲಿ ಹೆಸರಿಲ್ಲದಿದ್ದರೆ, ನಿಮಗೆ ಗೃಹಲಕ್ಷ್ಮಿ ಇಲ್ಲ, ಗೃಹಜ್ಯೋತಿ ಇಲ್ಲ, ಅನ್ನಭಾಗ್ಯ ಇಲ್ಲ” ಎಂದು ಹೇಳುವ ಮೂಲಕ, ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳುವುದನ್ನು ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಲಿಂಕ್ ಮಾಡಿದ್ದಾರೆ. ಇದು ಕಾರ್ಯಕರ್ತರು ಸಾರ್ವಜನಿಕರ ಮನೆ ಬಾಗಿಲಿಗೆ ಹೋದಾಗ, ಜನರೇ ಸ್ವಯಂಪ್ರೇರಿತರಾಗಿ ತಮ್ಮ ವೋಟನ್ನು ಪರಿಶೀಲಿಸಿಕೊಳ್ಳುವಂತೆ ಮಾಡುವ ಅತ್ಯಂತ ಪರಿಣಾಮಕಾರಿ ಅಸ್ತ್ರವಾಗಿದೆ.

ಪ್ರತಿ ಜಿಲ್ಲೆ ಮತ್ತು ಕ್ಷೇತ್ರಗಳಿಗೆ ಶಾಸಕರು ಮತ್ತು ಮಂತ್ರಿಗಳು ಕಡ್ಡಾಯವಾಗಿ ಭೇಟಿ ನೀಡಿ ಮೀಟಿಂಗ್ ಮಾಡಬೇಕು. ಬೂತ್ ಮಟ್ಟದ ಏಜೆಂಟ್‌ಗಳಿಗೆ ಸೂಕ್ತ ತರಬೇತಿ ನೀಡಿ, ಅವರು ಬಿಎಲ್‌ಒ (BLO – Booth Level Officers) ಗಳ ಜೊತೆ ಮನೆ ಮನೆಗೆ ಹೋಗುವಂತೆ ನೋಡಿಕೊಳ್ಳುವುದು. ಮಹಾನಗರ ಪಾಲಿಕೆ (Corporation) ಚುನಾವಣೆಗಳ ಜವಾಬ್ದಾರಿಯನ್ನು ಮಂತ್ರಿಗಳಿಗೆ ಹಂಚಿ, ವಿಶೇಷ ತಂಡಗಳನ್ನು ನೇಮಕ ಮಾಡಲಾಗುತ್ತಿದೆ.

ಈ ಹಿಂದೆ ಎಸ್‌ಆರ್‌ಐ ಮೀಟಿಂಗ್‌ಗೆ ಬರದೇ ನಿರ್ಲಕ್ಷ್ಯ ವಹಿಸಿದ್ದ ಎಐಸಿಸಿ (AICC) ಮಟ್ಟದಲ್ಲಿ ಹುದ್ದೆಗಳಿಂದ ತೆಗೆದುಹಾಕಿದ್ದನ್ನು ಉಲ್ಲೇಖಿಸಿ, ಕೆಲಸ ಮಾಡದಿದ್ದರೆ ಕಠಿಣ ಕ್ರಮ ಗ್ಯಾರಂಟಿ ಎಂಬ ಸಂದೇಶ ರವಾನಿಸಿದ್ದಾರೆ. ಅದೇ ರೀತಿ ದೇವನಹಳ್ಳಿಯಲ್ಲಿ ನಡೆದ ಎಸ್‌ಐಆರ್ ಕಾರ್ಯಗಾರಕ್ಕೆ ಗೈರಾದ ಪ್ರಮುಖ ನಾಯಕರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ.

“ನನ್ನ ಹಿಂದೆ ಸುತ್ತಾಡುವುದು ಅಥವಾ ದೊಡ್ಡ ನಾಯಕರ ಹಿಂದೆ ತಿರುಗಾಡಿ ಟಿಕೆಟ್ ಕೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರು ವಾರ್ಡ್‌ಗಳಲ್ಲಿ, ಬೂತ್ ಮಟ್ಟದಲ್ಲಿ ಮನೆ ಮನೆಗೆ ಹೋಗಿ ಎಸ್‌ಐಆರ್ ಕೆಲಸ ಮಾಡಿ ವೋಟ್ ಉಳಿಸುತ್ತಾರೋ, ಅವರಿಗೆ ಮಾತ್ರ ಟಿಕೆಟ್” ಎಂದು ಹೇಳಿದ್ದಾರೆ. ಇದು ಅವರು ಪಕ್ಷದ ಗೆಲುವಿಗಾಗಿ ಎಷ್ಟು ಗಂಭೀರ ಹಾಗೂ ಪಾರದರ್ಶಕ ಪ್ರಯತ್ನ ಮಾಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ.

ಡಿ. ಕೆ. ಶಿವಕುಮಾರ್ ಅವರು ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿನ ಗೊಂದಲಗಳನ್ನು ಕೇವಲ ಆಡಳಿತಾತ್ಮಕ ವಿಷಯವಾಗಿ ನೋಡದೆ. ಭವಿಷ್ಯವನ್ನು ನಿರ್ಧರಿಸುವ ” ಹೋರಾಟ” ಎಂಬಂತೆ ಪರಿಗಣಿಸಿದ್ದಾರೆ. ತಳಮಟ್ಟದ ಸಣ್ಣ ತಪ್ಪುಗಳೂ ಸಹ ದೊಡ್ಡ ರಾಜಕೀಯ ನಷ್ಟಕ್ಕೆ ಕಾರಣವಾಗಬಹುದು ಎಂಬುದನ್ನು ಅರಿತು, ಅವರು ಇಡೀ ಪಕ್ಷದ ಯಂತ್ರಾಂಗವನ್ನು ಕಣಕ್ಕಿಳಿಸಲು ತೋರುತ್ತಿರುವ ಉತ್ಸಾಹ ರಾಜ್ಯದಲ್ಲಿ ನಡೆಯುವ ಎಸ್‌ಐಆರ್ ಮಹತ್ವ ಪಡೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...