Homeಮುಖಪುಟಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

ಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

- Advertisement -
- Advertisement -

ಜಾರ್ಖಂಡ್ ವಿಧಾನಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಅನರ್ಹತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ರಂಗೇರಿದೆ. ಶನಿವಾರ ಹೇಮಂತ್ ಸೊರೇನ್ ಮತ್ತು ಆಡಳಿತಾರೂಢ ಶಾಸಕರು ಹಲವು ಬಸ್‌ಗಳಲ್ಲಿ ರೆಸಾರ್ಟ್‌ಗೆ ತೆರಳಿರುವುದು ವರದಿಯಾಗಿದೆ. ಶಾಸಕರನ್ನು ರಾಜ್ಯದ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮೂರು ಬಸ್‌ಗಳನ್ನು ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯಲಾಗಿದ್ದು, ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮನ್ ಸೋರೆನ್ ಅವರ ಶಾಸಕ ಸ್ಥಾನವನ್ನು‘ಅನರ್ಹ’ಗೊಳಿಸುವ ಬಗ್ಗೆ ಸುದ್ದಿಯಾದ ನಂತರ ರಾಜ್ಯದಲ್ಲಿ ಪ್ರಾರಂಭವಾದ ರಾಜಕೀಯ ಬಿಕ್ಕಟ್ಟನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ಆಡಳಿತಾರೂಢ ಮೈತ್ರಿಕೂಟದ ಶಾಸಕರ ಸಭೆಯನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆಸಲಾಯಿತು.

ಇದನ್ನೂ ಓದಿ: ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಆಡಳಿತಾರೂಢ ಶಾಸಕರು ತಮ್ಮ ಲಗೇಜ್ ಸಮೇತ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಹೇಮಂತ್ ಸೊರೆನ್ ಸರ್ಕಾರದ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರೊಂದಿಗೆ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ತೆರಳಿದ್ದಾರೆ

ಪ್ರಸ್ತುತ ಆಡಳಿತರೂಢ ಶಾಸಕರು ಬೀಡುಬಿಟ್ಟಿರುವ ಲಟ್ರಾಟು ಅಣೆಕಟ್ಟಿಗೆ ಹೋಗುವ ರಸ್ತೆಗಳನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ. ಮಾಧ್ಯಮಗಳಿಗೆ ರಸ್ತೆ ಅಥವಾ ಕಾಲ್ನಡಿಗೆಯಲ್ಲೂ ಅಲ್ಲಿಗೆ ತೆರಳಲು ಅನುಮತಿಯಲ್ಲ.

ಛತ್ತೀಸ್‌ಗಢ ಅಥವಾ ಪಶ್ಚಿಮ ಬಂಗಾಳದಲ್ಲಿ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಉಳಿಸಿಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇದಕ್ಕಾಗಿ ಛತ್ತೀಸ್‌ಗಢ, ಬರ್ಮುಡಾ ಮತ್ತು ರಾಯ್‌ಪುರ ಸೇರಿದಂತೆ ಮೂರು ಸ್ಥಳಗಳು ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹರಾಗುವ ವದಂತಿ: ರಾಂಚಿಯಲ್ಲಿ ಯುಪಿಎ ಮಹತ್ವದ ಸಭೆ

“ಅಗತ್ಯವಿದ್ದಲ್ಲಿ ಎಲ್ಲಾ ಆಡಳಿತಾರೂಢ ಶಾಸಕರನ್ನು ಒಂದೇ ಸ್ಥಳಕ್ಕೆ ಕಳುಹಿಸಲಾಗುವುದು” ಎಂದು ಮತ್ತೊಂದು ಮೂಲಗಳು ತಿಳಿಸಿವೆ. ಶಾಸಕರನ್ನು ಜಾರ್ಖಂಡ್‌ನಿಂದ ಹೊರಗೆ ಕರೆದೊಯ್ಯುವ ಆಯ್ಕೆಯು ಮುಕ್ತವಾಗಿದ್ದು ಮತ್ತು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜೆಎಂಎಂ ಮೂಲವು ಪಿಟಿಐಗೆ ತಿಳಿಸಿದೆ.

ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ಆಗಸ್ಟ್ 25 ರಂದು ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ಅವರಿಗೆ ಕಳುಹಿಸಿದ್ದು, ಗಣಿಗಾರಿಕೆಯ ಗುತ್ತಿಗೆಯನ್ನು ಸ್ವತಃ ತಮಗೆ ವಿಸ್ತರಿಸುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವಂತೆ ಕೋರಿ ಚುನಾವಣಾ ಆಯೋಗ ಮನವಿ ಸಲ್ಲಿದೆ.

ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಕುರಿತ ಚುನಾವಣಾ ಆಯೋಗದ ಅಭಿಪ್ರಾಯಗಳ ಬಗ್ಗೆ ರಾಜ್ಯಪಾಲರು ಸಂಜೆಯೊಳಗೆ ಕರೆ ಮಾಡಿ ಅನರ್ಹತೆಯ ಆದೇಶವನ್ನು ಆಯೋಗಕ್ಕೆ ಕಳುಹಿಸಬಹುದು ಎಂದು ರಾಜಭವನದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

81 ಸದಸ್ಯರಿರುವ ಜಾರ್ಖಂಡ್‌ ವಿಧಾನಸಭೆಯಲ್ಲಿ ಆಡಳಿತರೂಢ ಮೈತ್ರಿಯು 49 ಶಾಸಕರನ್ನು ಹೊಂದಿದೆ. ಅತಿದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಶಾಸಕರನ್ನು ಮತ್ತು ಆರ್‌ಜೆಡಿ ಒಂದು ಶಾಸಕರನ್ನು ಹೊಂದಿದೆ. ಸದನದಲ್ಲಿ ಪ್ರಮುಖ ಪ್ರತಿಪಕ್ಷ ಬಿಜೆಪಿ 26 ಶಾಸಕರನ್ನು ಹೊಂದಿದೆ.

“ಕೇಂದ್ರದ ಬಿಜೆಪಿಯು ಎಷ್ಟು ಕೆಟ್ಟ ಅನೈತಿಕ ವೃತ್ತವನ್ನು ಸೃಷ್ಟಿಸುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನಾನು ಆದಿವಾಸಿಗಳ ಮಗ, ಜಾರ್ಖಂಡ್‌ನ ಮಗ. ನಾವು ಹೆದರುವುದಿಲ್ಲ, ಹೋರಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...