Homeಮುಖಪುಟಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

ಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

- Advertisement -
- Advertisement -

ಜಾರ್ಖಂಡ್ ವಿಧಾನಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಅನರ್ಹತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ರಂಗೇರಿದೆ. ಶನಿವಾರ ಹೇಮಂತ್ ಸೊರೇನ್ ಮತ್ತು ಆಡಳಿತಾರೂಢ ಶಾಸಕರು ಹಲವು ಬಸ್‌ಗಳಲ್ಲಿ ರೆಸಾರ್ಟ್‌ಗೆ ತೆರಳಿರುವುದು ವರದಿಯಾಗಿದೆ. ಶಾಸಕರನ್ನು ರಾಜ್ಯದ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮೂರು ಬಸ್‌ಗಳನ್ನು ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯಲಾಗಿದ್ದು, ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮನ್ ಸೋರೆನ್ ಅವರ ಶಾಸಕ ಸ್ಥಾನವನ್ನು‘ಅನರ್ಹ’ಗೊಳಿಸುವ ಬಗ್ಗೆ ಸುದ್ದಿಯಾದ ನಂತರ ರಾಜ್ಯದಲ್ಲಿ ಪ್ರಾರಂಭವಾದ ರಾಜಕೀಯ ಬಿಕ್ಕಟ್ಟನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ಆಡಳಿತಾರೂಢ ಮೈತ್ರಿಕೂಟದ ಶಾಸಕರ ಸಭೆಯನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆಸಲಾಯಿತು.

ಇದನ್ನೂ ಓದಿ: ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಆಡಳಿತಾರೂಢ ಶಾಸಕರು ತಮ್ಮ ಲಗೇಜ್ ಸಮೇತ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಹೇಮಂತ್ ಸೊರೆನ್ ಸರ್ಕಾರದ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರೊಂದಿಗೆ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ತೆರಳಿದ್ದಾರೆ

ಪ್ರಸ್ತುತ ಆಡಳಿತರೂಢ ಶಾಸಕರು ಬೀಡುಬಿಟ್ಟಿರುವ ಲಟ್ರಾಟು ಅಣೆಕಟ್ಟಿಗೆ ಹೋಗುವ ರಸ್ತೆಗಳನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ. ಮಾಧ್ಯಮಗಳಿಗೆ ರಸ್ತೆ ಅಥವಾ ಕಾಲ್ನಡಿಗೆಯಲ್ಲೂ ಅಲ್ಲಿಗೆ ತೆರಳಲು ಅನುಮತಿಯಲ್ಲ.

ಛತ್ತೀಸ್‌ಗಢ ಅಥವಾ ಪಶ್ಚಿಮ ಬಂಗಾಳದಲ್ಲಿ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಉಳಿಸಿಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇದಕ್ಕಾಗಿ ಛತ್ತೀಸ್‌ಗಢ, ಬರ್ಮುಡಾ ಮತ್ತು ರಾಯ್‌ಪುರ ಸೇರಿದಂತೆ ಮೂರು ಸ್ಥಳಗಳು ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹರಾಗುವ ವದಂತಿ: ರಾಂಚಿಯಲ್ಲಿ ಯುಪಿಎ ಮಹತ್ವದ ಸಭೆ

“ಅಗತ್ಯವಿದ್ದಲ್ಲಿ ಎಲ್ಲಾ ಆಡಳಿತಾರೂಢ ಶಾಸಕರನ್ನು ಒಂದೇ ಸ್ಥಳಕ್ಕೆ ಕಳುಹಿಸಲಾಗುವುದು” ಎಂದು ಮತ್ತೊಂದು ಮೂಲಗಳು ತಿಳಿಸಿವೆ. ಶಾಸಕರನ್ನು ಜಾರ್ಖಂಡ್‌ನಿಂದ ಹೊರಗೆ ಕರೆದೊಯ್ಯುವ ಆಯ್ಕೆಯು ಮುಕ್ತವಾಗಿದ್ದು ಮತ್ತು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜೆಎಂಎಂ ಮೂಲವು ಪಿಟಿಐಗೆ ತಿಳಿಸಿದೆ.

ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ಆಗಸ್ಟ್ 25 ರಂದು ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ಅವರಿಗೆ ಕಳುಹಿಸಿದ್ದು, ಗಣಿಗಾರಿಕೆಯ ಗುತ್ತಿಗೆಯನ್ನು ಸ್ವತಃ ತಮಗೆ ವಿಸ್ತರಿಸುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವಂತೆ ಕೋರಿ ಚುನಾವಣಾ ಆಯೋಗ ಮನವಿ ಸಲ್ಲಿದೆ.

ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಕುರಿತ ಚುನಾವಣಾ ಆಯೋಗದ ಅಭಿಪ್ರಾಯಗಳ ಬಗ್ಗೆ ರಾಜ್ಯಪಾಲರು ಸಂಜೆಯೊಳಗೆ ಕರೆ ಮಾಡಿ ಅನರ್ಹತೆಯ ಆದೇಶವನ್ನು ಆಯೋಗಕ್ಕೆ ಕಳುಹಿಸಬಹುದು ಎಂದು ರಾಜಭವನದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

81 ಸದಸ್ಯರಿರುವ ಜಾರ್ಖಂಡ್‌ ವಿಧಾನಸಭೆಯಲ್ಲಿ ಆಡಳಿತರೂಢ ಮೈತ್ರಿಯು 49 ಶಾಸಕರನ್ನು ಹೊಂದಿದೆ. ಅತಿದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಶಾಸಕರನ್ನು ಮತ್ತು ಆರ್‌ಜೆಡಿ ಒಂದು ಶಾಸಕರನ್ನು ಹೊಂದಿದೆ. ಸದನದಲ್ಲಿ ಪ್ರಮುಖ ಪ್ರತಿಪಕ್ಷ ಬಿಜೆಪಿ 26 ಶಾಸಕರನ್ನು ಹೊಂದಿದೆ.

“ಕೇಂದ್ರದ ಬಿಜೆಪಿಯು ಎಷ್ಟು ಕೆಟ್ಟ ಅನೈತಿಕ ವೃತ್ತವನ್ನು ಸೃಷ್ಟಿಸುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನಾನು ಆದಿವಾಸಿಗಳ ಮಗ, ಜಾರ್ಖಂಡ್‌ನ ಮಗ. ನಾವು ಹೆದರುವುದಿಲ್ಲ, ಹೋರಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...