Homeಮುಖಪುಟಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

ಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

- Advertisement -
- Advertisement -

ಜಾರ್ಖಂಡ್ ವಿಧಾನಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಅನರ್ಹತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ರಂಗೇರಿದೆ. ಶನಿವಾರ ಹೇಮಂತ್ ಸೊರೇನ್ ಮತ್ತು ಆಡಳಿತಾರೂಢ ಶಾಸಕರು ಹಲವು ಬಸ್‌ಗಳಲ್ಲಿ ರೆಸಾರ್ಟ್‌ಗೆ ತೆರಳಿರುವುದು ವರದಿಯಾಗಿದೆ. ಶಾಸಕರನ್ನು ರಾಜ್ಯದ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮೂರು ಬಸ್‌ಗಳನ್ನು ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯಲಾಗಿದ್ದು, ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮನ್ ಸೋರೆನ್ ಅವರ ಶಾಸಕ ಸ್ಥಾನವನ್ನು‘ಅನರ್ಹ’ಗೊಳಿಸುವ ಬಗ್ಗೆ ಸುದ್ದಿಯಾದ ನಂತರ ರಾಜ್ಯದಲ್ಲಿ ಪ್ರಾರಂಭವಾದ ರಾಜಕೀಯ ಬಿಕ್ಕಟ್ಟನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ಆಡಳಿತಾರೂಢ ಮೈತ್ರಿಕೂಟದ ಶಾಸಕರ ಸಭೆಯನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆಸಲಾಯಿತು.

ಇದನ್ನೂ ಓದಿ: ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಆಡಳಿತಾರೂಢ ಶಾಸಕರು ತಮ್ಮ ಲಗೇಜ್ ಸಮೇತ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಹೇಮಂತ್ ಸೊರೆನ್ ಸರ್ಕಾರದ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರೊಂದಿಗೆ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ತೆರಳಿದ್ದಾರೆ

ಪ್ರಸ್ತುತ ಆಡಳಿತರೂಢ ಶಾಸಕರು ಬೀಡುಬಿಟ್ಟಿರುವ ಲಟ್ರಾಟು ಅಣೆಕಟ್ಟಿಗೆ ಹೋಗುವ ರಸ್ತೆಗಳನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ. ಮಾಧ್ಯಮಗಳಿಗೆ ರಸ್ತೆ ಅಥವಾ ಕಾಲ್ನಡಿಗೆಯಲ್ಲೂ ಅಲ್ಲಿಗೆ ತೆರಳಲು ಅನುಮತಿಯಲ್ಲ.

ಛತ್ತೀಸ್‌ಗಢ ಅಥವಾ ಪಶ್ಚಿಮ ಬಂಗಾಳದಲ್ಲಿ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಉಳಿಸಿಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇದಕ್ಕಾಗಿ ಛತ್ತೀಸ್‌ಗಢ, ಬರ್ಮುಡಾ ಮತ್ತು ರಾಯ್‌ಪುರ ಸೇರಿದಂತೆ ಮೂರು ಸ್ಥಳಗಳು ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹರಾಗುವ ವದಂತಿ: ರಾಂಚಿಯಲ್ಲಿ ಯುಪಿಎ ಮಹತ್ವದ ಸಭೆ

“ಅಗತ್ಯವಿದ್ದಲ್ಲಿ ಎಲ್ಲಾ ಆಡಳಿತಾರೂಢ ಶಾಸಕರನ್ನು ಒಂದೇ ಸ್ಥಳಕ್ಕೆ ಕಳುಹಿಸಲಾಗುವುದು” ಎಂದು ಮತ್ತೊಂದು ಮೂಲಗಳು ತಿಳಿಸಿವೆ. ಶಾಸಕರನ್ನು ಜಾರ್ಖಂಡ್‌ನಿಂದ ಹೊರಗೆ ಕರೆದೊಯ್ಯುವ ಆಯ್ಕೆಯು ಮುಕ್ತವಾಗಿದ್ದು ಮತ್ತು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜೆಎಂಎಂ ಮೂಲವು ಪಿಟಿಐಗೆ ತಿಳಿಸಿದೆ.

ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ಆಗಸ್ಟ್ 25 ರಂದು ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ಅವರಿಗೆ ಕಳುಹಿಸಿದ್ದು, ಗಣಿಗಾರಿಕೆಯ ಗುತ್ತಿಗೆಯನ್ನು ಸ್ವತಃ ತಮಗೆ ವಿಸ್ತರಿಸುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವಂತೆ ಕೋರಿ ಚುನಾವಣಾ ಆಯೋಗ ಮನವಿ ಸಲ್ಲಿದೆ.

ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಕುರಿತ ಚುನಾವಣಾ ಆಯೋಗದ ಅಭಿಪ್ರಾಯಗಳ ಬಗ್ಗೆ ರಾಜ್ಯಪಾಲರು ಸಂಜೆಯೊಳಗೆ ಕರೆ ಮಾಡಿ ಅನರ್ಹತೆಯ ಆದೇಶವನ್ನು ಆಯೋಗಕ್ಕೆ ಕಳುಹಿಸಬಹುದು ಎಂದು ರಾಜಭವನದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

81 ಸದಸ್ಯರಿರುವ ಜಾರ್ಖಂಡ್‌ ವಿಧಾನಸಭೆಯಲ್ಲಿ ಆಡಳಿತರೂಢ ಮೈತ್ರಿಯು 49 ಶಾಸಕರನ್ನು ಹೊಂದಿದೆ. ಅತಿದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಶಾಸಕರನ್ನು ಮತ್ತು ಆರ್‌ಜೆಡಿ ಒಂದು ಶಾಸಕರನ್ನು ಹೊಂದಿದೆ. ಸದನದಲ್ಲಿ ಪ್ರಮುಖ ಪ್ರತಿಪಕ್ಷ ಬಿಜೆಪಿ 26 ಶಾಸಕರನ್ನು ಹೊಂದಿದೆ.

“ಕೇಂದ್ರದ ಬಿಜೆಪಿಯು ಎಷ್ಟು ಕೆಟ್ಟ ಅನೈತಿಕ ವೃತ್ತವನ್ನು ಸೃಷ್ಟಿಸುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನಾನು ಆದಿವಾಸಿಗಳ ಮಗ, ಜಾರ್ಖಂಡ್‌ನ ಮಗ. ನಾವು ಹೆದರುವುದಿಲ್ಲ, ಹೋರಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...