Homeಮುಖಪುಟಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

ಸಿಎಂ ಹೇಮಂತ್‌‌ ಸೊರೇನ್ ಅನರ್ಹತೆ ಭೀತಿ: ಜಾರ್ಖಂಡ್‌ನಲ್ಲಿ ರೆಸಾರ್ಟ್ ರಾಜಕಾರಣ ಆರಂಭ

- Advertisement -
- Advertisement -

ಜಾರ್ಖಂಡ್ ವಿಧಾನಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಅನರ್ಹತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ರಂಗೇರಿದೆ. ಶನಿವಾರ ಹೇಮಂತ್ ಸೊರೇನ್ ಮತ್ತು ಆಡಳಿತಾರೂಢ ಶಾಸಕರು ಹಲವು ಬಸ್‌ಗಳಲ್ಲಿ ರೆಸಾರ್ಟ್‌ಗೆ ತೆರಳಿರುವುದು ವರದಿಯಾಗಿದೆ. ಶಾಸಕರನ್ನು ರಾಜ್ಯದ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮೂರು ಬಸ್‌ಗಳನ್ನು ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯಲಾಗಿದ್ದು, ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮನ್ ಸೋರೆನ್ ಅವರ ಶಾಸಕ ಸ್ಥಾನವನ್ನು‘ಅನರ್ಹ’ಗೊಳಿಸುವ ಬಗ್ಗೆ ಸುದ್ದಿಯಾದ ನಂತರ ರಾಜ್ಯದಲ್ಲಿ ಪ್ರಾರಂಭವಾದ ರಾಜಕೀಯ ಬಿಕ್ಕಟ್ಟನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲು ಆಡಳಿತಾರೂಢ ಮೈತ್ರಿಕೂಟದ ಶಾಸಕರ ಸಭೆಯನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆಸಲಾಯಿತು.

ಇದನ್ನೂ ಓದಿ: ಜಾರ್ಖಂಡ್‌‌‌‌ ಸಿಎಂ ಹೇಮಂತ್‌‌ ಸೋರೆನ್‌‌ ಶಾಸಕ ಸ್ಥಾನದಿಂದ ಅನರ್ಹ ಸಾಧ್ಯತೆ; ಉರುಳಲಿದೆಯೆ ಮತ್ತೊಂದು ಸರ್ಕಾರ?

ಆಡಳಿತಾರೂಢ ಶಾಸಕರು ತಮ್ಮ ಲಗೇಜ್ ಸಮೇತ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಹೇಮಂತ್ ಸೊರೆನ್ ಸರ್ಕಾರದ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರೊಂದಿಗೆ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ತೆರಳಿದ್ದಾರೆ

ಪ್ರಸ್ತುತ ಆಡಳಿತರೂಢ ಶಾಸಕರು ಬೀಡುಬಿಟ್ಟಿರುವ ಲಟ್ರಾಟು ಅಣೆಕಟ್ಟಿಗೆ ಹೋಗುವ ರಸ್ತೆಗಳನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ. ಮಾಧ್ಯಮಗಳಿಗೆ ರಸ್ತೆ ಅಥವಾ ಕಾಲ್ನಡಿಗೆಯಲ್ಲೂ ಅಲ್ಲಿಗೆ ತೆರಳಲು ಅನುಮತಿಯಲ್ಲ.

ಛತ್ತೀಸ್‌ಗಢ ಅಥವಾ ಪಶ್ಚಿಮ ಬಂಗಾಳದಲ್ಲಿ ಸಮ್ಮಿಶ್ರ ಸರ್ಕಾರದ ಶಾಸಕರನ್ನು ಉಳಿಸಿಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇದಕ್ಕಾಗಿ ಛತ್ತೀಸ್‌ಗಢ, ಬರ್ಮುಡಾ ಮತ್ತು ರಾಯ್‌ಪುರ ಸೇರಿದಂತೆ ಮೂರು ಸ್ಥಳಗಳು ಮತ್ತು ಪಶ್ಚಿಮ ಬಂಗಾಳದ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹರಾಗುವ ವದಂತಿ: ರಾಂಚಿಯಲ್ಲಿ ಯುಪಿಎ ಮಹತ್ವದ ಸಭೆ

“ಅಗತ್ಯವಿದ್ದಲ್ಲಿ ಎಲ್ಲಾ ಆಡಳಿತಾರೂಢ ಶಾಸಕರನ್ನು ಒಂದೇ ಸ್ಥಳಕ್ಕೆ ಕಳುಹಿಸಲಾಗುವುದು” ಎಂದು ಮತ್ತೊಂದು ಮೂಲಗಳು ತಿಳಿಸಿವೆ. ಶಾಸಕರನ್ನು ಜಾರ್ಖಂಡ್‌ನಿಂದ ಹೊರಗೆ ಕರೆದೊಯ್ಯುವ ಆಯ್ಕೆಯು ಮುಕ್ತವಾಗಿದ್ದು ಮತ್ತು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜೆಎಂಎಂ ಮೂಲವು ಪಿಟಿಐಗೆ ತಿಳಿಸಿದೆ.

ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ಆಗಸ್ಟ್ 25 ರಂದು ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ಅವರಿಗೆ ಕಳುಹಿಸಿದ್ದು, ಗಣಿಗಾರಿಕೆಯ ಗುತ್ತಿಗೆಯನ್ನು ಸ್ವತಃ ತಮಗೆ ವಿಸ್ತರಿಸುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವಂತೆ ಕೋರಿ ಚುನಾವಣಾ ಆಯೋಗ ಮನವಿ ಸಲ್ಲಿದೆ.

ಹೇಮಂತ್ ಸೋರೆನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಕುರಿತ ಚುನಾವಣಾ ಆಯೋಗದ ಅಭಿಪ್ರಾಯಗಳ ಬಗ್ಗೆ ರಾಜ್ಯಪಾಲರು ಸಂಜೆಯೊಳಗೆ ಕರೆ ಮಾಡಿ ಅನರ್ಹತೆಯ ಆದೇಶವನ್ನು ಆಯೋಗಕ್ಕೆ ಕಳುಹಿಸಬಹುದು ಎಂದು ರಾಜಭವನದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

81 ಸದಸ್ಯರಿರುವ ಜಾರ್ಖಂಡ್‌ ವಿಧಾನಸಭೆಯಲ್ಲಿ ಆಡಳಿತರೂಢ ಮೈತ್ರಿಯು 49 ಶಾಸಕರನ್ನು ಹೊಂದಿದೆ. ಅತಿದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ 18 ಶಾಸಕರನ್ನು ಮತ್ತು ಆರ್‌ಜೆಡಿ ಒಂದು ಶಾಸಕರನ್ನು ಹೊಂದಿದೆ. ಸದನದಲ್ಲಿ ಪ್ರಮುಖ ಪ್ರತಿಪಕ್ಷ ಬಿಜೆಪಿ 26 ಶಾಸಕರನ್ನು ಹೊಂದಿದೆ.

“ಕೇಂದ್ರದ ಬಿಜೆಪಿಯು ಎಷ್ಟು ಕೆಟ್ಟ ಅನೈತಿಕ ವೃತ್ತವನ್ನು ಸೃಷ್ಟಿಸುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನಾನು ಆದಿವಾಸಿಗಳ ಮಗ, ಜಾರ್ಖಂಡ್‌ನ ಮಗ. ನಾವು ಹೆದರುವುದಿಲ್ಲ, ಹೋರಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...