Homeಕರ್ನಾಟಕಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ

- Advertisement -
- Advertisement -

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ, ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸಿಎಂ ಆದೇಶಿಸಿದ್ದಾರೆ.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರೀ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಗಿದೆ.

ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಇಂಜಿನಿಯರ್‌ಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ಹೇಳಿದ್ದಾರೆ.

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ.

ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದ್ದು,
ನಿಗಮದ ವ್ಯಾಪ್ತಿಯಲ್ಲಿ 2,133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿದ್ದಾರೆ.

ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್‌. ಜಮೀರ್‌ ಅಹ್ಮದ್‌ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಬೆಂಗಳೂರು: ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಗುಲಿ ಬಾಲಕಿ ಮೃತ್ಯು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...