Homeಕರ್ನಾಟಕಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

ಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

- Advertisement -
- Advertisement -

ಎಸ್ಎಸ್‌ಎಲ್‌ಸಿಯಲ್ಲಿ‌ ಶೇಕಡ 60ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಎರಡನೇ ದಿನವೂ (ಶನಿವಾರ) ಸಭೆ ಮುಂದುವರಿಸಿದ ಸಿಎಂ, ಹಲವು ಸೂಚನೆಗಳನ್ನು ಕೊಟ್ಟರು.

ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದರು.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಹಣ ಬಿಡುಗಡೆ ಆಗಿದ್ದರೂ, ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು. ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು, ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರಾ ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಿ ಎಂದು ಸಿಎಂ ಸೂಚಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು. ಸಿಇಒಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು ಎಂದು ಸಿಎಂ ತಾಕೀತು ಮಾಡಿದರು.

ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್‌ ಸೂಚನೆ ನೀಡಿ, ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳ ಸಿಇಓ ಗಳು ಹೆಚ್ಚಿನ ಆಸಕ್ತಿ ಕೊಟ್ಟು ಈ ಬಗ್ಗೆ ನಿಗಾ ಇಡಬೇಕು. ಫಲಿತಾಂಶ ಕಡಿಮೆ ಇರುವುದಕ್ಕೆ ಕಾರಣಗಳು, ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತದೆ ಎಂದರು.

ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...