Homeಕರ್ನಾಟಕಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

ಎಸ್‌ಎಸ್‌ಎಲ್‌ಸಿಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: ಡಿಡಿಪಿಐಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

- Advertisement -
- Advertisement -

ಎಸ್ಎಸ್‌ಎಲ್‌ಸಿಯಲ್ಲಿ‌ ಶೇಕಡ 60ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಎರಡನೇ ದಿನವೂ (ಶನಿವಾರ) ಸಭೆ ಮುಂದುವರಿಸಿದ ಸಿಎಂ, ಹಲವು ಸೂಚನೆಗಳನ್ನು ಕೊಟ್ಟರು.

ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಸಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ ಎಂದರು.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಹಣ ಬಿಡುಗಡೆ ಆಗಿದ್ದರೂ, ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಆಗದಂತೆ ಶಿಕ್ಷಕರು ಮತ್ತು ಅಧಿಕಾರಿಗಳು ಪೋಷಕರ ಜೊತೆ ಮಾತನಾಡಬೇಕು. ಡ್ರಾಪ್‌ಔಟ್‌ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐಗಳು, ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರಾ ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟ ಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್‌, ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ. ನಿಮ್ಮ ಪ್ರಾಯೋಗಿಕ ಅನುಭವಗಳು ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸಿ ಎಂದು ಸಿಎಂ ಸೂಚಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು. ಸಿಇಒಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು ಎಂದು ಸಿಎಂ ತಾಕೀತು ಮಾಡಿದರು.

ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಖಡಕ್‌ ಸೂಚನೆ ನೀಡಿ, ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳ ಸಿಇಓ ಗಳು ಹೆಚ್ಚಿನ ಆಸಕ್ತಿ ಕೊಟ್ಟು ಈ ಬಗ್ಗೆ ನಿಗಾ ಇಡಬೇಕು. ಫಲಿತಾಂಶ ಕಡಿಮೆ ಇರುವುದಕ್ಕೆ ಕಾರಣಗಳು, ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾಂಶ ಬರುತ್ತದೆ ಎಂದರು.

ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...