Homeಮುಖಪುಟರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ.

- Advertisement -
- Advertisement -

ದೆಹಲಿಯಲ್ಲಿ ಕಳೆದ 13 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟವನ್ನು ನಿನ್ನೆಯಷ್ಟೆ ಬೆಂಬಲಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗೃಹಬಂಧನ ವಿಧಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ನಿನ್ನೆ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ತಮ್ಮ ಸಂಪುಟ ಸದಸ್ಯರೊಂದಿಗೆ ಸಿಂಘು ಗಡಿಗೆ ಭೇಟಿ ನೀಡಿ, ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮಾಡಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ್ದರು.

ಇಂದು ಬೆಳಿಗ್ಗೆ ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು “ನಿನ್ನೆ ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದಿದೆ.

ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ದೆಹಲಿಯ ವಿವಿಧ ಪುರಸಭೆಗಳ ಮೂವರು ಮೇಯರ್‌ಗಳು ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟಿಸಲು ಪೊಲೀಸರ ಪಡೆದಿದ್ದರು. ಇದನ್ನೆ ನೆಪವಾಗಿಟ್ಟುಕೊಂಡು ಪೊಲೀಸರು ಮುಖ್ಯಮಂತ್ರಿಗಳನ್ನು ಗೃಹಬಂಧನದಲ್ಲಿಟ್ಟಿದ್ದಾರೆ. ಕೇಜ್ರಿವಾಲ್ ಅವರ ನಿವಾಸವವನ್ನು ಸಂಪೂರ್ಣವಾಗಿ ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿದೆ, ಯಾರಿಗೂ ಆವರಣಕ್ಕೆ ಪ್ರವೇಶಿಸಲು ಅಥವಾ ಹೊರಬರಲು ಅವಕಾಶವಿಲ್ಲ ಎಂದು ಆಪ್ ಹೇಳಿದೆ. ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿರುವುದನ್ನು ಇಲ್ಲಿ ಸ್ಮರಿಸಬಹುದು

ಈ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಅವರ ಎಲ್ಲಾ ಅಧಿಕೃತ ಸಭೆಗಳನ್ನು ರದ್ದುಪಡಿಸಲಾಗಿದೆ ಎಂದು ಎಎಪಿ ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರೈತರನ್ನು ಬೆಂಬಲಿಸಿ ಮಾತನಾಡಿದ್ದ ಕೇಜ್ರಿವಾಲ್ “ಎಎಪಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಅನ್ನು ಬೆಂಬಲಿಸುತ್ತದೆ. ಎಎಪಿ ಸ್ವಯಂಸೇವಕರು ಕೂಡ ಆ ದಿನ ದೇಶಾದ್ಯಂತ ನಡೆಯುವ ಶಾಂತಿಯುತ ಪ್ರತಿಭಟನೆಗಳಲ್ಲಿ ರೈತರೊಂದಿಗೆ ಕೈಜೋಡಿಸುತ್ತಾರೆ. ರೈತರನ್ನು ಬೆಂಬಲಿಸುವಂತೆ ಭಾರತದ ನಾಗರಿಕರಲ್ಲಿ ಮನವಿ ಮಾಡುತ್ತೇನೆ” ಎಂದಿದ್ದರು.

‘ರೈತರ ಎಲ್ಲ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಅವರ ಸಮಸ್ಯೆ ಮತ್ತು ಬೇಡಿಕೆಗಳು ಮಾನ್ಯವಾಗಿವೆ. ನನ್ನ ಪಕ್ಷ ಮತ್ತು ನಾನು ಮೊದಲಿನಿಂದಲೂ ಅವರೊಂದಿಗೆ ಬೆಂಬಲಕ್ಕೆ ನಿಂತಿದ್ದೇವೆ. ರೈತರ ಪ್ರತಿಭಟನೆಯ ಆರಂಭದಲ್ಲಿ ದೆಹಲಿ ಪೊಲೀಸರು 9 ಕ್ರೀಡಾಂಗಣಗಳನ್ನು ಜೈಲುಗಳಾಗಿ ಪರಿವರ್ತಿಸಲು ಅನುಮತಿ ಕೋರಿದ್ದರು. ನನ್ನ ಮೇಲೆ ಒತ್ತಡ ಹೇರಿದ್ದರೂ ಅನುಮತಿ ನೀಡಲಿಲ್ಲ’ ಎಂದಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...