Homeಮುಖಪುಟದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

ದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

- Advertisement -
- Advertisement -

ಅಧಿಕೃತ ಪೈಪ್ ನೀರು ಮತ್ತು ಒಳಚರಂಡಿ ಸಂಪರ್ಕವಿಲ್ಲದ ದೆಹಲಿ ನಿವಾಸಿಗಳಿಗೆ ಸಹಾಯ ಮಾಡಲು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಈ ಕ್ರಮದಿಂದ ನೀರಿನಿಂದ ಮತ್ತು ಗಾಳಿಯಿಂದ ಹರಡುವ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ ಎಂದು ಹೇಳಲಾಗಿದೆ. ಶುದ್ಧ ನೀರನ್ನು ಮನೆ ಮನೆಗೂ ತಲುಪಿಸುವ ಯೋಜನೆಗೆ ಇದು ಪೂರಕವಾಗಿದೆ. ಇಷ್ಟು ದಿನ ಲಕ್ಷಗಟ್ಟಲೇ ಹಣ ಸುರಿಯುತ್ತಿದ್ದ ಜನರು ಕಡಿಮೆ ಹಣದಲ್ಲಿ ನೀರಿನ ಸಂಪರ್ಕ ವ್ಯವಸ್ಥೆ ಹೊಂದಬಹುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಲಮಂಡಳಿ ಹೊಸ ನೀರು ಮತ್ತು ಒಳಚರಂಡಿ ಸಂಪರ್ಕದ ಶುಲ್ಕದ ಮೂಲ ಮೊತ್ತವನ್ನು 1/50 ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಅಂದರೆ 200 ಚದರ ಮೀಟರ್ ಪ್ರದೇಶಕ್ಕೆ 1,14,110 ರೂ. ಕಟ್ಟುವ ಬದಲು ಕೇವಲ 2310 ರೂ. ಕಟ್ಟುವ ಸೌಲಭ್ಯ ದೊರೆತಿದೆ.

ಸರಿಸುಮಾರು ಶೇ. 18ರಷ್ಟು ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ದೆಹಲಿಯ ಸುಮಾರು 6 ಲಕ್ಷ ಕುಟುಂಬಗಳು ಪ್ರಸ್ತುತ ಕೊಳವೆ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹೊಂದಿಲ್ಲ. ಈ ಮನೆಗಳು ಹೆಚ್ಚಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿವೆ.

ದೆಹಲಿ ಜಲ ಮಂಡಳಿಯ ಅಧ್ಯಕ್ಷರೂ ಆಗಿರುವ ಸಿಎಂ ಕೇಜ್ರಿವಾಲ್ ಅವರು ಹೊಸ ನೀರು ಮತ್ತು ಒಳಚರಂಡಿ ಸಂಪರ್ಕಕ್ಕಾಗಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕವನ್ನು ಮನ್ನಾ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ಮೀಟರ್‌ಗೆ 500 ರೂ. ಇದ್ದಿದ್ದನ್ನು 100 ರೂ.ಗೆ ಇಳಿಸಿದರು. ಆದಾಗ್ಯೂ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ವೆಚ್ಚ ಕಡಿತ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ನೀರಿನ ಪೈಪ್‌ಲೈನ್‌ ಮೂಲಕ ಅಕ್ರಮ ಎಸಗುತ್ತಿದ್ದವರಿಗೆ ಇದು ಕಡಿವಾಣ ಹಾಕಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಡಿಜೆಬಿ ನೀರಿನ ಪೈಪ್‌ಲೈನ್‌ಗಳನ್ನು ಹಾಕಿದ್ದರೂ, ಹೆಚ್ಚಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕದಿಂದಾಗಿ ಹೆಚ್ಚಿನ ನಿವಾಸಿಗಳು ಇನ್ನೂ ಸಂಪರ್ಕವನ್ನು ಪಡೆದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪೈಪ್‌ಲೈನ್‌ಗಳು, ನೀರು ಸಂಸ್ಕರಣಾ ಘಟಕಗಳು ಮತ್ತು ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಈ ಅವಶ್ಯಕತೆಗಳಲ್ಲಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಆಪ್ ಅಧಿಕಾರಾವಧಿಯಲ್ಲಿ, 2014 ರಿಂದ 1,047 ಚದರ ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಪೈಪ್‌ಲೈನ್‌ಗಳನ್ನು ಹೊಂದಿರುವವರ ಸಂಖ್ಯೆ ಶೇ. 58 ರಿಂದ ಶೇ. 93ಕ್ಕೆ ಏರಿಕೆಯಾಗಿದೆ. ಕಡಿತಗೊಳಿಸಿದ ಶುಲ್ಕಗಳು ದೆಹಲಿಯಲ್ಲಿ ಲೆಕ್ಕವಿಲ್ಲದ ಅಥವಾ ಆದಾಯರಹಿತ ನೀರನ್ನು ತಗ್ಗಿಸುತ್ತವೆ ಹಲವು ಜನ ಅಕ್ರಮ ಸಂಪರ್ಕವನ್ನು ಬಿಟ್ಟಿದ್ದಾರೆ.

ಪ್ರಸ್ತುತ ನೀರಿನ ಅಭಿವೃದ್ಧಿ ಶುಲ್ಕ ಪ್ರತಿ ಚದರ ಮೀಟರ್‌ಗೆ 440 ರೂ. ಮತ್ತು ಒಳಚರಂಡಿ ಅಭಿವೃದ್ಧಿ ಶುಲ್ಕ, ಚದರ ಮೀಟರ್‌ಗೆ 494 ರೂ. ಇದೆ. ಈಗ ಎಲ್ಲಾ ದೆಹಲಿ ಜಲ ಮಂಡಳಿ ಗ್ರಾಹಕರು ಆ ಆರೋಪಗಳಿಂದ ಮುಕ್ತರಾಗಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಮೂಲಸೌಕರ್ಯವನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಜಲ ಮಂಡಳಿಯು ಜಿಟಿ ರಸ್ತೆಯಲ್ಲಿ (ಶಹದ್ರಾ) ಹೆಚ್ಚುವರಿ ಭೂಗತ ಜಲಾಶಯ ಮತ್ತು ಬೂಸ್ಟರ್ ಪಂಪಿಂಗ್ ಸ್ಟೇಷನ್‌ನಂತಹ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಘೋಷಿಸಿದ್ದಾರೆ.

ಬಡ ಪ್ರದೇಶಗಳಾದ ಪುನರ್ವಸತಿ ವಸಾಹತುಗಳು, ಕೊಳೆಗೇರಿಗಳು ಮತ್ತು ಜೆಜೆ ಕ್ಲಸ್ಟರ್‌ಗಳು ದೆಹಲಿಯವರಿಗೆ ಕೊಳವೆ ನೀರು ಮತ್ತು ಆರೋಗ್ಯಕರ ಒಳಚರಂಡಿ ವ್ಯವಸ್ಥೆ ಹೊಂದಿಲ್ಲದ ಪ್ರದೇಶಗಳಾಗಿವೆ. ದೂರದಿಂದ ಕೊಳಕು ನೀರನ್ನು ತಂದು ಹಲವು ದಿನಗಳವರೆಗೆ ಸಂಗ್ರಹಿಸಿಡುತ್ತಾರೆ. ಹೀಗಾಗಿ ರೋಗ-ರುಜಿನ ಹೆಚ್ಚಿದೆ. ಸರಿಯಾದ ಪೈಪ್‌ಲೈನ್‌ ಅಥವಾ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿದ್ದರೆ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ.

ದೆಹಲಿ ಜಲ ಮಂಡಳಿಯು ಸೋನಿಯಾ ವಿಹಾರ್ ಮತ್ತು ರಾಜೀವ್ ನಗರದಲ್ಲಿ 110 ಕಿ.ಮೀ ಹೊಸ ಒಳಚರಂಡಿ ಮಾರ್ಗ ನಿರ್ಮಿಸಲಿದೆ. ರಾಜಧಾನಿಯ ಅನೇಕ ಪ್ರದೇಶಗಳ ಕಿರಿದಾದ ಬೀದಿಗಳನ್ನು ತೆರವುಗೊಳಿಸಲು ಡಿಜೆಬಿ ಹೊಸ ಒಳಚರಂಡಿ ಶುಚಿಗೊಳಿಸುವ ಯಂತ್ರಗಳನ್ನು ನಿಯೋಜಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಜ್ರೀವಾಲರ ಈ ಕ್ರಮ ಸ್ವಾಗತಾರ್ಹ. ಆಡಳಿತಾರೂಢರು ಮನಸ್ಸು ಮಾಡಿದರೆ ಇಂತಹ ಜನಪರ ಕಾರ್ಯಗಳನ್ನು ಜಾರಿಗೊಳಿಸಬಹುದು ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...