Homeಮುಖಪುಟದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

ದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

- Advertisement -
- Advertisement -

ಅಧಿಕೃತ ಪೈಪ್ ನೀರು ಮತ್ತು ಒಳಚರಂಡಿ ಸಂಪರ್ಕವಿಲ್ಲದ ದೆಹಲಿ ನಿವಾಸಿಗಳಿಗೆ ಸಹಾಯ ಮಾಡಲು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಈ ಕ್ರಮದಿಂದ ನೀರಿನಿಂದ ಮತ್ತು ಗಾಳಿಯಿಂದ ಹರಡುವ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ ಎಂದು ಹೇಳಲಾಗಿದೆ. ಶುದ್ಧ ನೀರನ್ನು ಮನೆ ಮನೆಗೂ ತಲುಪಿಸುವ ಯೋಜನೆಗೆ ಇದು ಪೂರಕವಾಗಿದೆ. ಇಷ್ಟು ದಿನ ಲಕ್ಷಗಟ್ಟಲೇ ಹಣ ಸುರಿಯುತ್ತಿದ್ದ ಜನರು ಕಡಿಮೆ ಹಣದಲ್ಲಿ ನೀರಿನ ಸಂಪರ್ಕ ವ್ಯವಸ್ಥೆ ಹೊಂದಬಹುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಲಮಂಡಳಿ ಹೊಸ ನೀರು ಮತ್ತು ಒಳಚರಂಡಿ ಸಂಪರ್ಕದ ಶುಲ್ಕದ ಮೂಲ ಮೊತ್ತವನ್ನು 1/50 ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಅಂದರೆ 200 ಚದರ ಮೀಟರ್ ಪ್ರದೇಶಕ್ಕೆ 1,14,110 ರೂ. ಕಟ್ಟುವ ಬದಲು ಕೇವಲ 2310 ರೂ. ಕಟ್ಟುವ ಸೌಲಭ್ಯ ದೊರೆತಿದೆ.

ಸರಿಸುಮಾರು ಶೇ. 18ರಷ್ಟು ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ದೆಹಲಿಯ ಸುಮಾರು 6 ಲಕ್ಷ ಕುಟುಂಬಗಳು ಪ್ರಸ್ತುತ ಕೊಳವೆ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹೊಂದಿಲ್ಲ. ಈ ಮನೆಗಳು ಹೆಚ್ಚಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿವೆ.

ದೆಹಲಿ ಜಲ ಮಂಡಳಿಯ ಅಧ್ಯಕ್ಷರೂ ಆಗಿರುವ ಸಿಎಂ ಕೇಜ್ರಿವಾಲ್ ಅವರು ಹೊಸ ನೀರು ಮತ್ತು ಒಳಚರಂಡಿ ಸಂಪರ್ಕಕ್ಕಾಗಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕವನ್ನು ಮನ್ನಾ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ಮೀಟರ್‌ಗೆ 500 ರೂ. ಇದ್ದಿದ್ದನ್ನು 100 ರೂ.ಗೆ ಇಳಿಸಿದರು. ಆದಾಗ್ಯೂ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ವೆಚ್ಚ ಕಡಿತ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ನೀರಿನ ಪೈಪ್‌ಲೈನ್‌ ಮೂಲಕ ಅಕ್ರಮ ಎಸಗುತ್ತಿದ್ದವರಿಗೆ ಇದು ಕಡಿವಾಣ ಹಾಕಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಡಿಜೆಬಿ ನೀರಿನ ಪೈಪ್‌ಲೈನ್‌ಗಳನ್ನು ಹಾಕಿದ್ದರೂ, ಹೆಚ್ಚಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕದಿಂದಾಗಿ ಹೆಚ್ಚಿನ ನಿವಾಸಿಗಳು ಇನ್ನೂ ಸಂಪರ್ಕವನ್ನು ಪಡೆದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪೈಪ್‌ಲೈನ್‌ಗಳು, ನೀರು ಸಂಸ್ಕರಣಾ ಘಟಕಗಳು ಮತ್ತು ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಈ ಅವಶ್ಯಕತೆಗಳಲ್ಲಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಆಪ್ ಅಧಿಕಾರಾವಧಿಯಲ್ಲಿ, 2014 ರಿಂದ 1,047 ಚದರ ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಪೈಪ್‌ಲೈನ್‌ಗಳನ್ನು ಹೊಂದಿರುವವರ ಸಂಖ್ಯೆ ಶೇ. 58 ರಿಂದ ಶೇ. 93ಕ್ಕೆ ಏರಿಕೆಯಾಗಿದೆ. ಕಡಿತಗೊಳಿಸಿದ ಶುಲ್ಕಗಳು ದೆಹಲಿಯಲ್ಲಿ ಲೆಕ್ಕವಿಲ್ಲದ ಅಥವಾ ಆದಾಯರಹಿತ ನೀರನ್ನು ತಗ್ಗಿಸುತ್ತವೆ ಹಲವು ಜನ ಅಕ್ರಮ ಸಂಪರ್ಕವನ್ನು ಬಿಟ್ಟಿದ್ದಾರೆ.

ಪ್ರಸ್ತುತ ನೀರಿನ ಅಭಿವೃದ್ಧಿ ಶುಲ್ಕ ಪ್ರತಿ ಚದರ ಮೀಟರ್‌ಗೆ 440 ರೂ. ಮತ್ತು ಒಳಚರಂಡಿ ಅಭಿವೃದ್ಧಿ ಶುಲ್ಕ, ಚದರ ಮೀಟರ್‌ಗೆ 494 ರೂ. ಇದೆ. ಈಗ ಎಲ್ಲಾ ದೆಹಲಿ ಜಲ ಮಂಡಳಿ ಗ್ರಾಹಕರು ಆ ಆರೋಪಗಳಿಂದ ಮುಕ್ತರಾಗಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಮೂಲಸೌಕರ್ಯವನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಜಲ ಮಂಡಳಿಯು ಜಿಟಿ ರಸ್ತೆಯಲ್ಲಿ (ಶಹದ್ರಾ) ಹೆಚ್ಚುವರಿ ಭೂಗತ ಜಲಾಶಯ ಮತ್ತು ಬೂಸ್ಟರ್ ಪಂಪಿಂಗ್ ಸ್ಟೇಷನ್‌ನಂತಹ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಘೋಷಿಸಿದ್ದಾರೆ.

ಬಡ ಪ್ರದೇಶಗಳಾದ ಪುನರ್ವಸತಿ ವಸಾಹತುಗಳು, ಕೊಳೆಗೇರಿಗಳು ಮತ್ತು ಜೆಜೆ ಕ್ಲಸ್ಟರ್‌ಗಳು ದೆಹಲಿಯವರಿಗೆ ಕೊಳವೆ ನೀರು ಮತ್ತು ಆರೋಗ್ಯಕರ ಒಳಚರಂಡಿ ವ್ಯವಸ್ಥೆ ಹೊಂದಿಲ್ಲದ ಪ್ರದೇಶಗಳಾಗಿವೆ. ದೂರದಿಂದ ಕೊಳಕು ನೀರನ್ನು ತಂದು ಹಲವು ದಿನಗಳವರೆಗೆ ಸಂಗ್ರಹಿಸಿಡುತ್ತಾರೆ. ಹೀಗಾಗಿ ರೋಗ-ರುಜಿನ ಹೆಚ್ಚಿದೆ. ಸರಿಯಾದ ಪೈಪ್‌ಲೈನ್‌ ಅಥವಾ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿದ್ದರೆ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ.

ದೆಹಲಿ ಜಲ ಮಂಡಳಿಯು ಸೋನಿಯಾ ವಿಹಾರ್ ಮತ್ತು ರಾಜೀವ್ ನಗರದಲ್ಲಿ 110 ಕಿ.ಮೀ ಹೊಸ ಒಳಚರಂಡಿ ಮಾರ್ಗ ನಿರ್ಮಿಸಲಿದೆ. ರಾಜಧಾನಿಯ ಅನೇಕ ಪ್ರದೇಶಗಳ ಕಿರಿದಾದ ಬೀದಿಗಳನ್ನು ತೆರವುಗೊಳಿಸಲು ಡಿಜೆಬಿ ಹೊಸ ಒಳಚರಂಡಿ ಶುಚಿಗೊಳಿಸುವ ಯಂತ್ರಗಳನ್ನು ನಿಯೋಜಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಜ್ರೀವಾಲರ ಈ ಕ್ರಮ ಸ್ವಾಗತಾರ್ಹ. ಆಡಳಿತಾರೂಢರು ಮನಸ್ಸು ಮಾಡಿದರೆ ಇಂತಹ ಜನಪರ ಕಾರ್ಯಗಳನ್ನು ಜಾರಿಗೊಳಿಸಬಹುದು ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...