Homeಮುಖಪುಟದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

ದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

- Advertisement -
- Advertisement -

ಅಧಿಕೃತ ಪೈಪ್ ನೀರು ಮತ್ತು ಒಳಚರಂಡಿ ಸಂಪರ್ಕವಿಲ್ಲದ ದೆಹಲಿ ನಿವಾಸಿಗಳಿಗೆ ಸಹಾಯ ಮಾಡಲು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಈ ಕ್ರಮದಿಂದ ನೀರಿನಿಂದ ಮತ್ತು ಗಾಳಿಯಿಂದ ಹರಡುವ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ ಎಂದು ಹೇಳಲಾಗಿದೆ. ಶುದ್ಧ ನೀರನ್ನು ಮನೆ ಮನೆಗೂ ತಲುಪಿಸುವ ಯೋಜನೆಗೆ ಇದು ಪೂರಕವಾಗಿದೆ. ಇಷ್ಟು ದಿನ ಲಕ್ಷಗಟ್ಟಲೇ ಹಣ ಸುರಿಯುತ್ತಿದ್ದ ಜನರು ಕಡಿಮೆ ಹಣದಲ್ಲಿ ನೀರಿನ ಸಂಪರ್ಕ ವ್ಯವಸ್ಥೆ ಹೊಂದಬಹುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಲಮಂಡಳಿ ಹೊಸ ನೀರು ಮತ್ತು ಒಳಚರಂಡಿ ಸಂಪರ್ಕದ ಶುಲ್ಕದ ಮೂಲ ಮೊತ್ತವನ್ನು 1/50 ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಅಂದರೆ 200 ಚದರ ಮೀಟರ್ ಪ್ರದೇಶಕ್ಕೆ 1,14,110 ರೂ. ಕಟ್ಟುವ ಬದಲು ಕೇವಲ 2310 ರೂ. ಕಟ್ಟುವ ಸೌಲಭ್ಯ ದೊರೆತಿದೆ.

ಸರಿಸುಮಾರು ಶೇ. 18ರಷ್ಟು ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ದೆಹಲಿಯ ಸುಮಾರು 6 ಲಕ್ಷ ಕುಟುಂಬಗಳು ಪ್ರಸ್ತುತ ಕೊಳವೆ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹೊಂದಿಲ್ಲ. ಈ ಮನೆಗಳು ಹೆಚ್ಚಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿವೆ.

ದೆಹಲಿ ಜಲ ಮಂಡಳಿಯ ಅಧ್ಯಕ್ಷರೂ ಆಗಿರುವ ಸಿಎಂ ಕೇಜ್ರಿವಾಲ್ ಅವರು ಹೊಸ ನೀರು ಮತ್ತು ಒಳಚರಂಡಿ ಸಂಪರ್ಕಕ್ಕಾಗಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕವನ್ನು ಮನ್ನಾ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ಮೀಟರ್‌ಗೆ 500 ರೂ. ಇದ್ದಿದ್ದನ್ನು 100 ರೂ.ಗೆ ಇಳಿಸಿದರು. ಆದಾಗ್ಯೂ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ವೆಚ್ಚ ಕಡಿತ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ನೀರಿನ ಪೈಪ್‌ಲೈನ್‌ ಮೂಲಕ ಅಕ್ರಮ ಎಸಗುತ್ತಿದ್ದವರಿಗೆ ಇದು ಕಡಿವಾಣ ಹಾಕಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಡಿಜೆಬಿ ನೀರಿನ ಪೈಪ್‌ಲೈನ್‌ಗಳನ್ನು ಹಾಕಿದ್ದರೂ, ಹೆಚ್ಚಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕದಿಂದಾಗಿ ಹೆಚ್ಚಿನ ನಿವಾಸಿಗಳು ಇನ್ನೂ ಸಂಪರ್ಕವನ್ನು ಪಡೆದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪೈಪ್‌ಲೈನ್‌ಗಳು, ನೀರು ಸಂಸ್ಕರಣಾ ಘಟಕಗಳು ಮತ್ತು ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಈ ಅವಶ್ಯಕತೆಗಳಲ್ಲಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಆಪ್ ಅಧಿಕಾರಾವಧಿಯಲ್ಲಿ, 2014 ರಿಂದ 1,047 ಚದರ ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಪೈಪ್‌ಲೈನ್‌ಗಳನ್ನು ಹೊಂದಿರುವವರ ಸಂಖ್ಯೆ ಶೇ. 58 ರಿಂದ ಶೇ. 93ಕ್ಕೆ ಏರಿಕೆಯಾಗಿದೆ. ಕಡಿತಗೊಳಿಸಿದ ಶುಲ್ಕಗಳು ದೆಹಲಿಯಲ್ಲಿ ಲೆಕ್ಕವಿಲ್ಲದ ಅಥವಾ ಆದಾಯರಹಿತ ನೀರನ್ನು ತಗ್ಗಿಸುತ್ತವೆ ಹಲವು ಜನ ಅಕ್ರಮ ಸಂಪರ್ಕವನ್ನು ಬಿಟ್ಟಿದ್ದಾರೆ.

ಪ್ರಸ್ತುತ ನೀರಿನ ಅಭಿವೃದ್ಧಿ ಶುಲ್ಕ ಪ್ರತಿ ಚದರ ಮೀಟರ್‌ಗೆ 440 ರೂ. ಮತ್ತು ಒಳಚರಂಡಿ ಅಭಿವೃದ್ಧಿ ಶುಲ್ಕ, ಚದರ ಮೀಟರ್‌ಗೆ 494 ರೂ. ಇದೆ. ಈಗ ಎಲ್ಲಾ ದೆಹಲಿ ಜಲ ಮಂಡಳಿ ಗ್ರಾಹಕರು ಆ ಆರೋಪಗಳಿಂದ ಮುಕ್ತರಾಗಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಮೂಲಸೌಕರ್ಯವನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಜಲ ಮಂಡಳಿಯು ಜಿಟಿ ರಸ್ತೆಯಲ್ಲಿ (ಶಹದ್ರಾ) ಹೆಚ್ಚುವರಿ ಭೂಗತ ಜಲಾಶಯ ಮತ್ತು ಬೂಸ್ಟರ್ ಪಂಪಿಂಗ್ ಸ್ಟೇಷನ್‌ನಂತಹ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಘೋಷಿಸಿದ್ದಾರೆ.

ಬಡ ಪ್ರದೇಶಗಳಾದ ಪುನರ್ವಸತಿ ವಸಾಹತುಗಳು, ಕೊಳೆಗೇರಿಗಳು ಮತ್ತು ಜೆಜೆ ಕ್ಲಸ್ಟರ್‌ಗಳು ದೆಹಲಿಯವರಿಗೆ ಕೊಳವೆ ನೀರು ಮತ್ತು ಆರೋಗ್ಯಕರ ಒಳಚರಂಡಿ ವ್ಯವಸ್ಥೆ ಹೊಂದಿಲ್ಲದ ಪ್ರದೇಶಗಳಾಗಿವೆ. ದೂರದಿಂದ ಕೊಳಕು ನೀರನ್ನು ತಂದು ಹಲವು ದಿನಗಳವರೆಗೆ ಸಂಗ್ರಹಿಸಿಡುತ್ತಾರೆ. ಹೀಗಾಗಿ ರೋಗ-ರುಜಿನ ಹೆಚ್ಚಿದೆ. ಸರಿಯಾದ ಪೈಪ್‌ಲೈನ್‌ ಅಥವಾ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿದ್ದರೆ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ.

ದೆಹಲಿ ಜಲ ಮಂಡಳಿಯು ಸೋನಿಯಾ ವಿಹಾರ್ ಮತ್ತು ರಾಜೀವ್ ನಗರದಲ್ಲಿ 110 ಕಿ.ಮೀ ಹೊಸ ಒಳಚರಂಡಿ ಮಾರ್ಗ ನಿರ್ಮಿಸಲಿದೆ. ರಾಜಧಾನಿಯ ಅನೇಕ ಪ್ರದೇಶಗಳ ಕಿರಿದಾದ ಬೀದಿಗಳನ್ನು ತೆರವುಗೊಳಿಸಲು ಡಿಜೆಬಿ ಹೊಸ ಒಳಚರಂಡಿ ಶುಚಿಗೊಳಿಸುವ ಯಂತ್ರಗಳನ್ನು ನಿಯೋಜಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಜ್ರೀವಾಲರ ಈ ಕ್ರಮ ಸ್ವಾಗತಾರ್ಹ. ಆಡಳಿತಾರೂಢರು ಮನಸ್ಸು ಮಾಡಿದರೆ ಇಂತಹ ಜನಪರ ಕಾರ್ಯಗಳನ್ನು ಜಾರಿಗೊಳಿಸಬಹುದು ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...