Homeಮುಖಪುಟದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

ದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

- Advertisement -
- Advertisement -

ಅಧಿಕೃತ ಪೈಪ್ ನೀರು ಮತ್ತು ಒಳಚರಂಡಿ ಸಂಪರ್ಕವಿಲ್ಲದ ದೆಹಲಿ ನಿವಾಸಿಗಳಿಗೆ ಸಹಾಯ ಮಾಡಲು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಈ ಕ್ರಮದಿಂದ ನೀರಿನಿಂದ ಮತ್ತು ಗಾಳಿಯಿಂದ ಹರಡುವ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ ಎಂದು ಹೇಳಲಾಗಿದೆ. ಶುದ್ಧ ನೀರನ್ನು ಮನೆ ಮನೆಗೂ ತಲುಪಿಸುವ ಯೋಜನೆಗೆ ಇದು ಪೂರಕವಾಗಿದೆ. ಇಷ್ಟು ದಿನ ಲಕ್ಷಗಟ್ಟಲೇ ಹಣ ಸುರಿಯುತ್ತಿದ್ದ ಜನರು ಕಡಿಮೆ ಹಣದಲ್ಲಿ ನೀರಿನ ಸಂಪರ್ಕ ವ್ಯವಸ್ಥೆ ಹೊಂದಬಹುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಲಮಂಡಳಿ ಹೊಸ ನೀರು ಮತ್ತು ಒಳಚರಂಡಿ ಸಂಪರ್ಕದ ಶುಲ್ಕದ ಮೂಲ ಮೊತ್ತವನ್ನು 1/50 ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಅಂದರೆ 200 ಚದರ ಮೀಟರ್ ಪ್ರದೇಶಕ್ಕೆ 1,14,110 ರೂ. ಕಟ್ಟುವ ಬದಲು ಕೇವಲ 2310 ರೂ. ಕಟ್ಟುವ ಸೌಲಭ್ಯ ದೊರೆತಿದೆ.

ಸರಿಸುಮಾರು ಶೇ. 18ರಷ್ಟು ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ದೆಹಲಿಯ ಸುಮಾರು 6 ಲಕ್ಷ ಕುಟುಂಬಗಳು ಪ್ರಸ್ತುತ ಕೊಳವೆ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹೊಂದಿಲ್ಲ. ಈ ಮನೆಗಳು ಹೆಚ್ಚಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿವೆ.

ದೆಹಲಿ ಜಲ ಮಂಡಳಿಯ ಅಧ್ಯಕ್ಷರೂ ಆಗಿರುವ ಸಿಎಂ ಕೇಜ್ರಿವಾಲ್ ಅವರು ಹೊಸ ನೀರು ಮತ್ತು ಒಳಚರಂಡಿ ಸಂಪರ್ಕಕ್ಕಾಗಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕವನ್ನು ಮನ್ನಾ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ಮೀಟರ್‌ಗೆ 500 ರೂ. ಇದ್ದಿದ್ದನ್ನು 100 ರೂ.ಗೆ ಇಳಿಸಿದರು. ಆದಾಗ್ಯೂ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ವೆಚ್ಚ ಕಡಿತ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ನೀರಿನ ಪೈಪ್‌ಲೈನ್‌ ಮೂಲಕ ಅಕ್ರಮ ಎಸಗುತ್ತಿದ್ದವರಿಗೆ ಇದು ಕಡಿವಾಣ ಹಾಕಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಡಿಜೆಬಿ ನೀರಿನ ಪೈಪ್‌ಲೈನ್‌ಗಳನ್ನು ಹಾಕಿದ್ದರೂ, ಹೆಚ್ಚಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕದಿಂದಾಗಿ ಹೆಚ್ಚಿನ ನಿವಾಸಿಗಳು ಇನ್ನೂ ಸಂಪರ್ಕವನ್ನು ಪಡೆದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪೈಪ್‌ಲೈನ್‌ಗಳು, ನೀರು ಸಂಸ್ಕರಣಾ ಘಟಕಗಳು ಮತ್ತು ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಈ ಅವಶ್ಯಕತೆಗಳಲ್ಲಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಆಪ್ ಅಧಿಕಾರಾವಧಿಯಲ್ಲಿ, 2014 ರಿಂದ 1,047 ಚದರ ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಪೈಪ್‌ಲೈನ್‌ಗಳನ್ನು ಹೊಂದಿರುವವರ ಸಂಖ್ಯೆ ಶೇ. 58 ರಿಂದ ಶೇ. 93ಕ್ಕೆ ಏರಿಕೆಯಾಗಿದೆ. ಕಡಿತಗೊಳಿಸಿದ ಶುಲ್ಕಗಳು ದೆಹಲಿಯಲ್ಲಿ ಲೆಕ್ಕವಿಲ್ಲದ ಅಥವಾ ಆದಾಯರಹಿತ ನೀರನ್ನು ತಗ್ಗಿಸುತ್ತವೆ ಹಲವು ಜನ ಅಕ್ರಮ ಸಂಪರ್ಕವನ್ನು ಬಿಟ್ಟಿದ್ದಾರೆ.

ಪ್ರಸ್ತುತ ನೀರಿನ ಅಭಿವೃದ್ಧಿ ಶುಲ್ಕ ಪ್ರತಿ ಚದರ ಮೀಟರ್‌ಗೆ 440 ರೂ. ಮತ್ತು ಒಳಚರಂಡಿ ಅಭಿವೃದ್ಧಿ ಶುಲ್ಕ, ಚದರ ಮೀಟರ್‌ಗೆ 494 ರೂ. ಇದೆ. ಈಗ ಎಲ್ಲಾ ದೆಹಲಿ ಜಲ ಮಂಡಳಿ ಗ್ರಾಹಕರು ಆ ಆರೋಪಗಳಿಂದ ಮುಕ್ತರಾಗಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಮೂಲಸೌಕರ್ಯವನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಜಲ ಮಂಡಳಿಯು ಜಿಟಿ ರಸ್ತೆಯಲ್ಲಿ (ಶಹದ್ರಾ) ಹೆಚ್ಚುವರಿ ಭೂಗತ ಜಲಾಶಯ ಮತ್ತು ಬೂಸ್ಟರ್ ಪಂಪಿಂಗ್ ಸ್ಟೇಷನ್‌ನಂತಹ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಘೋಷಿಸಿದ್ದಾರೆ.

ಬಡ ಪ್ರದೇಶಗಳಾದ ಪುನರ್ವಸತಿ ವಸಾಹತುಗಳು, ಕೊಳೆಗೇರಿಗಳು ಮತ್ತು ಜೆಜೆ ಕ್ಲಸ್ಟರ್‌ಗಳು ದೆಹಲಿಯವರಿಗೆ ಕೊಳವೆ ನೀರು ಮತ್ತು ಆರೋಗ್ಯಕರ ಒಳಚರಂಡಿ ವ್ಯವಸ್ಥೆ ಹೊಂದಿಲ್ಲದ ಪ್ರದೇಶಗಳಾಗಿವೆ. ದೂರದಿಂದ ಕೊಳಕು ನೀರನ್ನು ತಂದು ಹಲವು ದಿನಗಳವರೆಗೆ ಸಂಗ್ರಹಿಸಿಡುತ್ತಾರೆ. ಹೀಗಾಗಿ ರೋಗ-ರುಜಿನ ಹೆಚ್ಚಿದೆ. ಸರಿಯಾದ ಪೈಪ್‌ಲೈನ್‌ ಅಥವಾ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿದ್ದರೆ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ.

ದೆಹಲಿ ಜಲ ಮಂಡಳಿಯು ಸೋನಿಯಾ ವಿಹಾರ್ ಮತ್ತು ರಾಜೀವ್ ನಗರದಲ್ಲಿ 110 ಕಿ.ಮೀ ಹೊಸ ಒಳಚರಂಡಿ ಮಾರ್ಗ ನಿರ್ಮಿಸಲಿದೆ. ರಾಜಧಾನಿಯ ಅನೇಕ ಪ್ರದೇಶಗಳ ಕಿರಿದಾದ ಬೀದಿಗಳನ್ನು ತೆರವುಗೊಳಿಸಲು ಡಿಜೆಬಿ ಹೊಸ ಒಳಚರಂಡಿ ಶುಚಿಗೊಳಿಸುವ ಯಂತ್ರಗಳನ್ನು ನಿಯೋಜಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಜ್ರೀವಾಲರ ಈ ಕ್ರಮ ಸ್ವಾಗತಾರ್ಹ. ಆಡಳಿತಾರೂಢರು ಮನಸ್ಸು ಮಾಡಿದರೆ ಇಂತಹ ಜನಪರ ಕಾರ್ಯಗಳನ್ನು ಜಾರಿಗೊಳಿಸಬಹುದು ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...