Homeಮುಖಪುಟದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

ದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

- Advertisement -
- Advertisement -

ಅಧಿಕೃತ ಪೈಪ್ ನೀರು ಮತ್ತು ಒಳಚರಂಡಿ ಸಂಪರ್ಕವಿಲ್ಲದ ದೆಹಲಿ ನಿವಾಸಿಗಳಿಗೆ ಸಹಾಯ ಮಾಡಲು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಈ ಕ್ರಮದಿಂದ ನೀರಿನಿಂದ ಮತ್ತು ಗಾಳಿಯಿಂದ ಹರಡುವ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ ಎಂದು ಹೇಳಲಾಗಿದೆ. ಶುದ್ಧ ನೀರನ್ನು ಮನೆ ಮನೆಗೂ ತಲುಪಿಸುವ ಯೋಜನೆಗೆ ಇದು ಪೂರಕವಾಗಿದೆ. ಇಷ್ಟು ದಿನ ಲಕ್ಷಗಟ್ಟಲೇ ಹಣ ಸುರಿಯುತ್ತಿದ್ದ ಜನರು ಕಡಿಮೆ ಹಣದಲ್ಲಿ ನೀರಿನ ಸಂಪರ್ಕ ವ್ಯವಸ್ಥೆ ಹೊಂದಬಹುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಲಮಂಡಳಿ ಹೊಸ ನೀರು ಮತ್ತು ಒಳಚರಂಡಿ ಸಂಪರ್ಕದ ಶುಲ್ಕದ ಮೂಲ ಮೊತ್ತವನ್ನು 1/50 ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಅಂದರೆ 200 ಚದರ ಮೀಟರ್ ಪ್ರದೇಶಕ್ಕೆ 1,14,110 ರೂ. ಕಟ್ಟುವ ಬದಲು ಕೇವಲ 2310 ರೂ. ಕಟ್ಟುವ ಸೌಲಭ್ಯ ದೊರೆತಿದೆ.

ಸರಿಸುಮಾರು ಶೇ. 18ರಷ್ಟು ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ದೆಹಲಿಯ ಸುಮಾರು 6 ಲಕ್ಷ ಕುಟುಂಬಗಳು ಪ್ರಸ್ತುತ ಕೊಳವೆ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹೊಂದಿಲ್ಲ. ಈ ಮನೆಗಳು ಹೆಚ್ಚಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿವೆ.

ದೆಹಲಿ ಜಲ ಮಂಡಳಿಯ ಅಧ್ಯಕ್ಷರೂ ಆಗಿರುವ ಸಿಎಂ ಕೇಜ್ರಿವಾಲ್ ಅವರು ಹೊಸ ನೀರು ಮತ್ತು ಒಳಚರಂಡಿ ಸಂಪರ್ಕಕ್ಕಾಗಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕವನ್ನು ಮನ್ನಾ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ಮೀಟರ್‌ಗೆ 500 ರೂ. ಇದ್ದಿದ್ದನ್ನು 100 ರೂ.ಗೆ ಇಳಿಸಿದರು. ಆದಾಗ್ಯೂ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ವೆಚ್ಚ ಕಡಿತ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ನೀರಿನ ಪೈಪ್‌ಲೈನ್‌ ಮೂಲಕ ಅಕ್ರಮ ಎಸಗುತ್ತಿದ್ದವರಿಗೆ ಇದು ಕಡಿವಾಣ ಹಾಕಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಡಿಜೆಬಿ ನೀರಿನ ಪೈಪ್‌ಲೈನ್‌ಗಳನ್ನು ಹಾಕಿದ್ದರೂ, ಹೆಚ್ಚಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕದಿಂದಾಗಿ ಹೆಚ್ಚಿನ ನಿವಾಸಿಗಳು ಇನ್ನೂ ಸಂಪರ್ಕವನ್ನು ಪಡೆದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪೈಪ್‌ಲೈನ್‌ಗಳು, ನೀರು ಸಂಸ್ಕರಣಾ ಘಟಕಗಳು ಮತ್ತು ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಈ ಅವಶ್ಯಕತೆಗಳಲ್ಲಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಆಪ್ ಅಧಿಕಾರಾವಧಿಯಲ್ಲಿ, 2014 ರಿಂದ 1,047 ಚದರ ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಪೈಪ್‌ಲೈನ್‌ಗಳನ್ನು ಹೊಂದಿರುವವರ ಸಂಖ್ಯೆ ಶೇ. 58 ರಿಂದ ಶೇ. 93ಕ್ಕೆ ಏರಿಕೆಯಾಗಿದೆ. ಕಡಿತಗೊಳಿಸಿದ ಶುಲ್ಕಗಳು ದೆಹಲಿಯಲ್ಲಿ ಲೆಕ್ಕವಿಲ್ಲದ ಅಥವಾ ಆದಾಯರಹಿತ ನೀರನ್ನು ತಗ್ಗಿಸುತ್ತವೆ ಹಲವು ಜನ ಅಕ್ರಮ ಸಂಪರ್ಕವನ್ನು ಬಿಟ್ಟಿದ್ದಾರೆ.

ಪ್ರಸ್ತುತ ನೀರಿನ ಅಭಿವೃದ್ಧಿ ಶುಲ್ಕ ಪ್ರತಿ ಚದರ ಮೀಟರ್‌ಗೆ 440 ರೂ. ಮತ್ತು ಒಳಚರಂಡಿ ಅಭಿವೃದ್ಧಿ ಶುಲ್ಕ, ಚದರ ಮೀಟರ್‌ಗೆ 494 ರೂ. ಇದೆ. ಈಗ ಎಲ್ಲಾ ದೆಹಲಿ ಜಲ ಮಂಡಳಿ ಗ್ರಾಹಕರು ಆ ಆರೋಪಗಳಿಂದ ಮುಕ್ತರಾಗಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಮೂಲಸೌಕರ್ಯವನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಜಲ ಮಂಡಳಿಯು ಜಿಟಿ ರಸ್ತೆಯಲ್ಲಿ (ಶಹದ್ರಾ) ಹೆಚ್ಚುವರಿ ಭೂಗತ ಜಲಾಶಯ ಮತ್ತು ಬೂಸ್ಟರ್ ಪಂಪಿಂಗ್ ಸ್ಟೇಷನ್‌ನಂತಹ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಘೋಷಿಸಿದ್ದಾರೆ.

ಬಡ ಪ್ರದೇಶಗಳಾದ ಪುನರ್ವಸತಿ ವಸಾಹತುಗಳು, ಕೊಳೆಗೇರಿಗಳು ಮತ್ತು ಜೆಜೆ ಕ್ಲಸ್ಟರ್‌ಗಳು ದೆಹಲಿಯವರಿಗೆ ಕೊಳವೆ ನೀರು ಮತ್ತು ಆರೋಗ್ಯಕರ ಒಳಚರಂಡಿ ವ್ಯವಸ್ಥೆ ಹೊಂದಿಲ್ಲದ ಪ್ರದೇಶಗಳಾಗಿವೆ. ದೂರದಿಂದ ಕೊಳಕು ನೀರನ್ನು ತಂದು ಹಲವು ದಿನಗಳವರೆಗೆ ಸಂಗ್ರಹಿಸಿಡುತ್ತಾರೆ. ಹೀಗಾಗಿ ರೋಗ-ರುಜಿನ ಹೆಚ್ಚಿದೆ. ಸರಿಯಾದ ಪೈಪ್‌ಲೈನ್‌ ಅಥವಾ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿದ್ದರೆ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ.

ದೆಹಲಿ ಜಲ ಮಂಡಳಿಯು ಸೋನಿಯಾ ವಿಹಾರ್ ಮತ್ತು ರಾಜೀವ್ ನಗರದಲ್ಲಿ 110 ಕಿ.ಮೀ ಹೊಸ ಒಳಚರಂಡಿ ಮಾರ್ಗ ನಿರ್ಮಿಸಲಿದೆ. ರಾಜಧಾನಿಯ ಅನೇಕ ಪ್ರದೇಶಗಳ ಕಿರಿದಾದ ಬೀದಿಗಳನ್ನು ತೆರವುಗೊಳಿಸಲು ಡಿಜೆಬಿ ಹೊಸ ಒಳಚರಂಡಿ ಶುಚಿಗೊಳಿಸುವ ಯಂತ್ರಗಳನ್ನು ನಿಯೋಜಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಜ್ರೀವಾಲರ ಈ ಕ್ರಮ ಸ್ವಾಗತಾರ್ಹ. ಆಡಳಿತಾರೂಢರು ಮನಸ್ಸು ಮಾಡಿದರೆ ಇಂತಹ ಜನಪರ ಕಾರ್ಯಗಳನ್ನು ಜಾರಿಗೊಳಿಸಬಹುದು ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...