Homeಮುಖಪುಟದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

ದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

- Advertisement -
- Advertisement -

ಅಧಿಕೃತ ಪೈಪ್ ನೀರು ಮತ್ತು ಒಳಚರಂಡಿ ಸಂಪರ್ಕವಿಲ್ಲದ ದೆಹಲಿ ನಿವಾಸಿಗಳಿಗೆ ಸಹಾಯ ಮಾಡಲು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಈ ಕ್ರಮದಿಂದ ನೀರಿನಿಂದ ಮತ್ತು ಗಾಳಿಯಿಂದ ಹರಡುವ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ ಎಂದು ಹೇಳಲಾಗಿದೆ. ಶುದ್ಧ ನೀರನ್ನು ಮನೆ ಮನೆಗೂ ತಲುಪಿಸುವ ಯೋಜನೆಗೆ ಇದು ಪೂರಕವಾಗಿದೆ. ಇಷ್ಟು ದಿನ ಲಕ್ಷಗಟ್ಟಲೇ ಹಣ ಸುರಿಯುತ್ತಿದ್ದ ಜನರು ಕಡಿಮೆ ಹಣದಲ್ಲಿ ನೀರಿನ ಸಂಪರ್ಕ ವ್ಯವಸ್ಥೆ ಹೊಂದಬಹುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಲಮಂಡಳಿ ಹೊಸ ನೀರು ಮತ್ತು ಒಳಚರಂಡಿ ಸಂಪರ್ಕದ ಶುಲ್ಕದ ಮೂಲ ಮೊತ್ತವನ್ನು 1/50 ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಅಂದರೆ 200 ಚದರ ಮೀಟರ್ ಪ್ರದೇಶಕ್ಕೆ 1,14,110 ರೂ. ಕಟ್ಟುವ ಬದಲು ಕೇವಲ 2310 ರೂ. ಕಟ್ಟುವ ಸೌಲಭ್ಯ ದೊರೆತಿದೆ.

ಸರಿಸುಮಾರು ಶೇ. 18ರಷ್ಟು ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ದೆಹಲಿಯ ಸುಮಾರು 6 ಲಕ್ಷ ಕುಟುಂಬಗಳು ಪ್ರಸ್ತುತ ಕೊಳವೆ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹೊಂದಿಲ್ಲ. ಈ ಮನೆಗಳು ಹೆಚ್ಚಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿವೆ.

ದೆಹಲಿ ಜಲ ಮಂಡಳಿಯ ಅಧ್ಯಕ್ಷರೂ ಆಗಿರುವ ಸಿಎಂ ಕೇಜ್ರಿವಾಲ್ ಅವರು ಹೊಸ ನೀರು ಮತ್ತು ಒಳಚರಂಡಿ ಸಂಪರ್ಕಕ್ಕಾಗಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕವನ್ನು ಮನ್ನಾ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ಮೀಟರ್‌ಗೆ 500 ರೂ. ಇದ್ದಿದ್ದನ್ನು 100 ರೂ.ಗೆ ಇಳಿಸಿದರು. ಆದಾಗ್ಯೂ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ವೆಚ್ಚ ಕಡಿತ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ನೀರಿನ ಪೈಪ್‌ಲೈನ್‌ ಮೂಲಕ ಅಕ್ರಮ ಎಸಗುತ್ತಿದ್ದವರಿಗೆ ಇದು ಕಡಿವಾಣ ಹಾಕಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಡಿಜೆಬಿ ನೀರಿನ ಪೈಪ್‌ಲೈನ್‌ಗಳನ್ನು ಹಾಕಿದ್ದರೂ, ಹೆಚ್ಚಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕದಿಂದಾಗಿ ಹೆಚ್ಚಿನ ನಿವಾಸಿಗಳು ಇನ್ನೂ ಸಂಪರ್ಕವನ್ನು ಪಡೆದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪೈಪ್‌ಲೈನ್‌ಗಳು, ನೀರು ಸಂಸ್ಕರಣಾ ಘಟಕಗಳು ಮತ್ತು ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಈ ಅವಶ್ಯಕತೆಗಳಲ್ಲಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಆಪ್ ಅಧಿಕಾರಾವಧಿಯಲ್ಲಿ, 2014 ರಿಂದ 1,047 ಚದರ ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಪೈಪ್‌ಲೈನ್‌ಗಳನ್ನು ಹೊಂದಿರುವವರ ಸಂಖ್ಯೆ ಶೇ. 58 ರಿಂದ ಶೇ. 93ಕ್ಕೆ ಏರಿಕೆಯಾಗಿದೆ. ಕಡಿತಗೊಳಿಸಿದ ಶುಲ್ಕಗಳು ದೆಹಲಿಯಲ್ಲಿ ಲೆಕ್ಕವಿಲ್ಲದ ಅಥವಾ ಆದಾಯರಹಿತ ನೀರನ್ನು ತಗ್ಗಿಸುತ್ತವೆ ಹಲವು ಜನ ಅಕ್ರಮ ಸಂಪರ್ಕವನ್ನು ಬಿಟ್ಟಿದ್ದಾರೆ.

ಪ್ರಸ್ತುತ ನೀರಿನ ಅಭಿವೃದ್ಧಿ ಶುಲ್ಕ ಪ್ರತಿ ಚದರ ಮೀಟರ್‌ಗೆ 440 ರೂ. ಮತ್ತು ಒಳಚರಂಡಿ ಅಭಿವೃದ್ಧಿ ಶುಲ್ಕ, ಚದರ ಮೀಟರ್‌ಗೆ 494 ರೂ. ಇದೆ. ಈಗ ಎಲ್ಲಾ ದೆಹಲಿ ಜಲ ಮಂಡಳಿ ಗ್ರಾಹಕರು ಆ ಆರೋಪಗಳಿಂದ ಮುಕ್ತರಾಗಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಮೂಲಸೌಕರ್ಯವನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಜಲ ಮಂಡಳಿಯು ಜಿಟಿ ರಸ್ತೆಯಲ್ಲಿ (ಶಹದ್ರಾ) ಹೆಚ್ಚುವರಿ ಭೂಗತ ಜಲಾಶಯ ಮತ್ತು ಬೂಸ್ಟರ್ ಪಂಪಿಂಗ್ ಸ್ಟೇಷನ್‌ನಂತಹ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಘೋಷಿಸಿದ್ದಾರೆ.

ಬಡ ಪ್ರದೇಶಗಳಾದ ಪುನರ್ವಸತಿ ವಸಾಹತುಗಳು, ಕೊಳೆಗೇರಿಗಳು ಮತ್ತು ಜೆಜೆ ಕ್ಲಸ್ಟರ್‌ಗಳು ದೆಹಲಿಯವರಿಗೆ ಕೊಳವೆ ನೀರು ಮತ್ತು ಆರೋಗ್ಯಕರ ಒಳಚರಂಡಿ ವ್ಯವಸ್ಥೆ ಹೊಂದಿಲ್ಲದ ಪ್ರದೇಶಗಳಾಗಿವೆ. ದೂರದಿಂದ ಕೊಳಕು ನೀರನ್ನು ತಂದು ಹಲವು ದಿನಗಳವರೆಗೆ ಸಂಗ್ರಹಿಸಿಡುತ್ತಾರೆ. ಹೀಗಾಗಿ ರೋಗ-ರುಜಿನ ಹೆಚ್ಚಿದೆ. ಸರಿಯಾದ ಪೈಪ್‌ಲೈನ್‌ ಅಥವಾ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿದ್ದರೆ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ.

ದೆಹಲಿ ಜಲ ಮಂಡಳಿಯು ಸೋನಿಯಾ ವಿಹಾರ್ ಮತ್ತು ರಾಜೀವ್ ನಗರದಲ್ಲಿ 110 ಕಿ.ಮೀ ಹೊಸ ಒಳಚರಂಡಿ ಮಾರ್ಗ ನಿರ್ಮಿಸಲಿದೆ. ರಾಜಧಾನಿಯ ಅನೇಕ ಪ್ರದೇಶಗಳ ಕಿರಿದಾದ ಬೀದಿಗಳನ್ನು ತೆರವುಗೊಳಿಸಲು ಡಿಜೆಬಿ ಹೊಸ ಒಳಚರಂಡಿ ಶುಚಿಗೊಳಿಸುವ ಯಂತ್ರಗಳನ್ನು ನಿಯೋಜಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಜ್ರೀವಾಲರ ಈ ಕ್ರಮ ಸ್ವಾಗತಾರ್ಹ. ಆಡಳಿತಾರೂಢರು ಮನಸ್ಸು ಮಾಡಿದರೆ ಇಂತಹ ಜನಪರ ಕಾರ್ಯಗಳನ್ನು ಜಾರಿಗೊಳಿಸಬಹುದು ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...