Homeಕರ್ನಾಟಕಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

ಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣೆ, ಕ್ಯಾಬಿನೆಟ್ ಸಭೆ, ಸಮನ್ವಯ ಸಮಿತಿ ಸಭೆ, ಮೈತ್ರಿಯ ಗೊಂದಲಗಳಲ್ಲೇ ಮುಳುಗಿ ಗ್ರಾಮ ಕರ್ನಾಟಕವನ್ನೇ ಮರೆತಿದ್ದ ಮುಖ್ಯಮಂತ್ರಿ ಮತ್ತು ಆ ಕಾರಣಕ್ಕಾಗಿ ಸರ್ಕಾರಕ್ಕೆ ಎಚ್ಚರವಾದಂತಿದೆ. ಇದು ಬರಪೀಡಿತ ಗ್ರಾಮ ಕರ್ನಾಟಕದ ಜನತೆಗೆ ತನ್ನ ಸಂಕಟಗಳನ್ನು ಮುಖಾಮುಖಿ ತೋರಿಸಲು ಅವಕಾಶವಾಗಿದೆ.

ಈಗ ಯಾದಗಿರಿ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ನಡೆದಿದೆ. ಚಂಡರಕಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುತ್ತಿರುವ ಕುಮಾರಸ್ವಾಮಿ, ಇಡೀ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಯಾದಗಿರಿಗೊಂದು 300 ವಾರ್ಡುಗಳ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ್ದಾರೆ. ಯಾದಗಿರಿಯ ಎಲ್ಲ ಗ್ರಾಮಗಳಿಗೂ ಒಂದೂವರೆ ವರ್ಷದಲ್ಲಿ ನದಿನೀರನ್ನು ತಲುಪಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕೂ ಮೊದಲು ಅವರು ಯಾದಗಿರಿ ಪಟ್ಟಣದಲ್ಲಿ 28 ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಯಾದಗಿರಿಯ ಜಿಲ್ಲೆಯಲ್ಲಿ ಸಾಲಮನ್ನಾ ಕುರಿತಂತೆ ಆಗಿರುವ ಎಡವಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕಿನ ತಪ್ಪಿನಿಂದಾಗಿ ಇದು ನಡೆದಿದ್ದು ಅದನ್ನು ಸರಿಪಡಿಸುವ ಭರವಸೆ ನೀಡಿ, ಹೊಸ ಸಾಲ ಪಡೆಯಲು 100 ರೂ ಕೋಟಿ ಒದಗಿಸಲು ಆದೇಶ ನೀಡಿದ್ದಾರೆ. ಸಂಜೆ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಚರ್ಚೆ ನಡೆಸಿ, ರಾತ್ರಿ ಅಲ್ಲಿಯೇ ಊಟ ಮಾಡಿ ವಾಸ್ತವ್ಯ ಮಾಡಲಿದ್ದಾರೆ.

ಹಿಂದುಳಿದ ಭಾಗದ ವಾಸ್ತವತೆ ಅರಿವಾಗಲಿ
ಸದಾ ಬೆಂಗಳೂರಿನಿಂದಲೇ ಆಡಳಿತ ನಿರ್ವಹಿಸುವ ಅಧಿಕಾರಸ್ಥರಿಗೆ ಇಂತಹ ಗ್ರಾಮ ವಾಸ್ತವ್ಯಗಳು ಜನರ ನೈಜ ಸಮಸ್ಯೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಸ್ವಾಗತಾರ್ಹ. ಜಿಲ್ಲೆಯಾದ ಮೇಲೂ ಯಾದಗಿರಿಗೆ ಬಹುಪಾಲು ಜಿಲ್ಲಾ ಸೌಕರ್ಯಗಳು ಸಿಕ್ಕಿಲ್ಲ. ಇಂದಿಗೂ ಬಹುಪಾಲು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲೇ ನಡೆಯುತ್ತಿವೆ. ಎಲ್ಲ ಕಡೆಯಂತೆಯೇ ಸರ್ಕಾರಿ ಶಾಲೆಗಳು ಸಮಸ್ಯೆಯಲ್ಲಿವೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ (ಯುಕೆಪಿ) ನಿರ್ಮಿಸಿದ ಕಳಪೆ ಕಾಲುವೆಗಳಿಂದ ನೀರು ಪೋಲಾಗುತ್ತಿದೆ. ನೀರಾವರಿ ಯೋಜನೆಗಳ ಕೊರತೆಯ ಕಾರಣಕ್ಕೆ ಅಪಾರ ನೀರು ಸುಮ್ಮನೇ ಹರಿದು ತೆಲಂಗಾಣ ತಲುಪುತ್ತಿದೆ. ಕೃಷ್ಣ ಮತ್ತು ಭೀಮಾ ನದಿಗಳು ಪಕ್ಕದಲ್ಲೇ ಹರಿದರೂ ಯಾದಗಿರಿ ಮತ್ತು ಶಹಾಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲಾಗಿಲ್ಲ!

ಸರ್ಕಾರಿ ಯೋಜನೆಗಳ ಅನುಷ್ಟಾನ ಸರಿಯಾಗದೇ ಇರುವುದರಿಂದ ಯಾದಗಿರಿಯ ಜಿಲ್ಲೆಯ ಜನ ಕಳೆದ 20 ವರ್ಷಗಳಿಂದ ಬೆಂಗಳೂರು, ಹೈದರಾಬಾದ್‍ಗಳಿಗೆ ಕಟ್ಟಡ, ರಸ್ತೆ ನಿರ್ಮಾಣದ ಕೆಲಸಗಳಿಗೆ ಗುಳೆ ಹೋಗುವುದು ನಡೆದೇ ಇದೆ. ಬೆಂಗಳೂರಿನ ಹೊರವಲಯದ ಖಾಲಿ ಜಾಗಗಳಲ್ಲಿ ಹತ್ತಾರು ‘ಯಾದಗಿರಿ ಕ್ಯಾಂಪ್’ಗಳು ತಲೆಎತ್ತಿವೆ. ಪೋಷಕರೊಂದಿಗೆ ಅಲ್ಲಿಗೆ ಹೋಗಿರುವ ಮಕ್ಕಳ ಶಿಕ್ಷಣ ಮೊಟಕುಗೊಳ್ಳುತ್ತಿದೆ.

ಇಂತಹ ವಾಸ್ತವ್ಯಗಳಿಂದಲಾದರೂ ನೈಜ ಸಮಸ್ಯೆಗಳನ್ನು ಅಧಿಕಾರಸ್ಥರು ಅರಿಯುವಂತಾಗಲಿ. ಜನರು ಕೂಡ ತಮ್ಮ ಹಕ್ಕುಗಳಿಗಾಗಿ ದನಿ ಎತ್ತಿ ನ್ಯಾಯ ಪಡೆಯುವ ಅವಕಾಶ ಸಿಗಲಿ.
ರೆಸಾರ್ಟು, ರಾಜಧಾನಿ ರಾಜಕಾರಣ ಹಿಂದಕ್ಕೆ ಸರಿದು, ಈ ಬಗೆಯಲ್ಲಾದರೂ ಗ್ರಾಮಗಳತ್ತ ಸರ್ಕಾರ ಕಣ್ಣು ತೆರೆಯುಂತಾಗಲಿ.

ಹಿಂದೆ 13 ವರ್ಷಗಳ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಜನರಲ್ಲಿ ಒಳ್ಳೆಯ ಅಭಿಪ್ರಾಯವನ್ನು ಮೂಡಿಸಿತ್ತು. ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...