Homeಕರ್ನಾಟಕಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

ಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣೆ, ಕ್ಯಾಬಿನೆಟ್ ಸಭೆ, ಸಮನ್ವಯ ಸಮಿತಿ ಸಭೆ, ಮೈತ್ರಿಯ ಗೊಂದಲಗಳಲ್ಲೇ ಮುಳುಗಿ ಗ್ರಾಮ ಕರ್ನಾಟಕವನ್ನೇ ಮರೆತಿದ್ದ ಮುಖ್ಯಮಂತ್ರಿ ಮತ್ತು ಆ ಕಾರಣಕ್ಕಾಗಿ ಸರ್ಕಾರಕ್ಕೆ ಎಚ್ಚರವಾದಂತಿದೆ. ಇದು ಬರಪೀಡಿತ ಗ್ರಾಮ ಕರ್ನಾಟಕದ ಜನತೆಗೆ ತನ್ನ ಸಂಕಟಗಳನ್ನು ಮುಖಾಮುಖಿ ತೋರಿಸಲು ಅವಕಾಶವಾಗಿದೆ.

ಈಗ ಯಾದಗಿರಿ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ನಡೆದಿದೆ. ಚಂಡರಕಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುತ್ತಿರುವ ಕುಮಾರಸ್ವಾಮಿ, ಇಡೀ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಯಾದಗಿರಿಗೊಂದು 300 ವಾರ್ಡುಗಳ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ್ದಾರೆ. ಯಾದಗಿರಿಯ ಎಲ್ಲ ಗ್ರಾಮಗಳಿಗೂ ಒಂದೂವರೆ ವರ್ಷದಲ್ಲಿ ನದಿನೀರನ್ನು ತಲುಪಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕೂ ಮೊದಲು ಅವರು ಯಾದಗಿರಿ ಪಟ್ಟಣದಲ್ಲಿ 28 ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಯಾದಗಿರಿಯ ಜಿಲ್ಲೆಯಲ್ಲಿ ಸಾಲಮನ್ನಾ ಕುರಿತಂತೆ ಆಗಿರುವ ಎಡವಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕಿನ ತಪ್ಪಿನಿಂದಾಗಿ ಇದು ನಡೆದಿದ್ದು ಅದನ್ನು ಸರಿಪಡಿಸುವ ಭರವಸೆ ನೀಡಿ, ಹೊಸ ಸಾಲ ಪಡೆಯಲು 100 ರೂ ಕೋಟಿ ಒದಗಿಸಲು ಆದೇಶ ನೀಡಿದ್ದಾರೆ. ಸಂಜೆ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಚರ್ಚೆ ನಡೆಸಿ, ರಾತ್ರಿ ಅಲ್ಲಿಯೇ ಊಟ ಮಾಡಿ ವಾಸ್ತವ್ಯ ಮಾಡಲಿದ್ದಾರೆ.

ಹಿಂದುಳಿದ ಭಾಗದ ವಾಸ್ತವತೆ ಅರಿವಾಗಲಿ
ಸದಾ ಬೆಂಗಳೂರಿನಿಂದಲೇ ಆಡಳಿತ ನಿರ್ವಹಿಸುವ ಅಧಿಕಾರಸ್ಥರಿಗೆ ಇಂತಹ ಗ್ರಾಮ ವಾಸ್ತವ್ಯಗಳು ಜನರ ನೈಜ ಸಮಸ್ಯೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಸ್ವಾಗತಾರ್ಹ. ಜಿಲ್ಲೆಯಾದ ಮೇಲೂ ಯಾದಗಿರಿಗೆ ಬಹುಪಾಲು ಜಿಲ್ಲಾ ಸೌಕರ್ಯಗಳು ಸಿಕ್ಕಿಲ್ಲ. ಇಂದಿಗೂ ಬಹುಪಾಲು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲೇ ನಡೆಯುತ್ತಿವೆ. ಎಲ್ಲ ಕಡೆಯಂತೆಯೇ ಸರ್ಕಾರಿ ಶಾಲೆಗಳು ಸಮಸ್ಯೆಯಲ್ಲಿವೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ (ಯುಕೆಪಿ) ನಿರ್ಮಿಸಿದ ಕಳಪೆ ಕಾಲುವೆಗಳಿಂದ ನೀರು ಪೋಲಾಗುತ್ತಿದೆ. ನೀರಾವರಿ ಯೋಜನೆಗಳ ಕೊರತೆಯ ಕಾರಣಕ್ಕೆ ಅಪಾರ ನೀರು ಸುಮ್ಮನೇ ಹರಿದು ತೆಲಂಗಾಣ ತಲುಪುತ್ತಿದೆ. ಕೃಷ್ಣ ಮತ್ತು ಭೀಮಾ ನದಿಗಳು ಪಕ್ಕದಲ್ಲೇ ಹರಿದರೂ ಯಾದಗಿರಿ ಮತ್ತು ಶಹಾಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲಾಗಿಲ್ಲ!

ಸರ್ಕಾರಿ ಯೋಜನೆಗಳ ಅನುಷ್ಟಾನ ಸರಿಯಾಗದೇ ಇರುವುದರಿಂದ ಯಾದಗಿರಿಯ ಜಿಲ್ಲೆಯ ಜನ ಕಳೆದ 20 ವರ್ಷಗಳಿಂದ ಬೆಂಗಳೂರು, ಹೈದರಾಬಾದ್‍ಗಳಿಗೆ ಕಟ್ಟಡ, ರಸ್ತೆ ನಿರ್ಮಾಣದ ಕೆಲಸಗಳಿಗೆ ಗುಳೆ ಹೋಗುವುದು ನಡೆದೇ ಇದೆ. ಬೆಂಗಳೂರಿನ ಹೊರವಲಯದ ಖಾಲಿ ಜಾಗಗಳಲ್ಲಿ ಹತ್ತಾರು ‘ಯಾದಗಿರಿ ಕ್ಯಾಂಪ್’ಗಳು ತಲೆಎತ್ತಿವೆ. ಪೋಷಕರೊಂದಿಗೆ ಅಲ್ಲಿಗೆ ಹೋಗಿರುವ ಮಕ್ಕಳ ಶಿಕ್ಷಣ ಮೊಟಕುಗೊಳ್ಳುತ್ತಿದೆ.

ಇಂತಹ ವಾಸ್ತವ್ಯಗಳಿಂದಲಾದರೂ ನೈಜ ಸಮಸ್ಯೆಗಳನ್ನು ಅಧಿಕಾರಸ್ಥರು ಅರಿಯುವಂತಾಗಲಿ. ಜನರು ಕೂಡ ತಮ್ಮ ಹಕ್ಕುಗಳಿಗಾಗಿ ದನಿ ಎತ್ತಿ ನ್ಯಾಯ ಪಡೆಯುವ ಅವಕಾಶ ಸಿಗಲಿ.
ರೆಸಾರ್ಟು, ರಾಜಧಾನಿ ರಾಜಕಾರಣ ಹಿಂದಕ್ಕೆ ಸರಿದು, ಈ ಬಗೆಯಲ್ಲಾದರೂ ಗ್ರಾಮಗಳತ್ತ ಸರ್ಕಾರ ಕಣ್ಣು ತೆರೆಯುಂತಾಗಲಿ.

ಹಿಂದೆ 13 ವರ್ಷಗಳ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಜನರಲ್ಲಿ ಒಳ್ಳೆಯ ಅಭಿಪ್ರಾಯವನ್ನು ಮೂಡಿಸಿತ್ತು. ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....