Homeಕರ್ನಾಟಕಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

ಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣೆ, ಕ್ಯಾಬಿನೆಟ್ ಸಭೆ, ಸಮನ್ವಯ ಸಮಿತಿ ಸಭೆ, ಮೈತ್ರಿಯ ಗೊಂದಲಗಳಲ್ಲೇ ಮುಳುಗಿ ಗ್ರಾಮ ಕರ್ನಾಟಕವನ್ನೇ ಮರೆತಿದ್ದ ಮುಖ್ಯಮಂತ್ರಿ ಮತ್ತು ಆ ಕಾರಣಕ್ಕಾಗಿ ಸರ್ಕಾರಕ್ಕೆ ಎಚ್ಚರವಾದಂತಿದೆ. ಇದು ಬರಪೀಡಿತ ಗ್ರಾಮ ಕರ್ನಾಟಕದ ಜನತೆಗೆ ತನ್ನ ಸಂಕಟಗಳನ್ನು ಮುಖಾಮುಖಿ ತೋರಿಸಲು ಅವಕಾಶವಾಗಿದೆ.

ಈಗ ಯಾದಗಿರಿ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ನಡೆದಿದೆ. ಚಂಡರಕಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುತ್ತಿರುವ ಕುಮಾರಸ್ವಾಮಿ, ಇಡೀ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಯಾದಗಿರಿಗೊಂದು 300 ವಾರ್ಡುಗಳ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ್ದಾರೆ. ಯಾದಗಿರಿಯ ಎಲ್ಲ ಗ್ರಾಮಗಳಿಗೂ ಒಂದೂವರೆ ವರ್ಷದಲ್ಲಿ ನದಿನೀರನ್ನು ತಲುಪಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕೂ ಮೊದಲು ಅವರು ಯಾದಗಿರಿ ಪಟ್ಟಣದಲ್ಲಿ 28 ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಯಾದಗಿರಿಯ ಜಿಲ್ಲೆಯಲ್ಲಿ ಸಾಲಮನ್ನಾ ಕುರಿತಂತೆ ಆಗಿರುವ ಎಡವಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕಿನ ತಪ್ಪಿನಿಂದಾಗಿ ಇದು ನಡೆದಿದ್ದು ಅದನ್ನು ಸರಿಪಡಿಸುವ ಭರವಸೆ ನೀಡಿ, ಹೊಸ ಸಾಲ ಪಡೆಯಲು 100 ರೂ ಕೋಟಿ ಒದಗಿಸಲು ಆದೇಶ ನೀಡಿದ್ದಾರೆ. ಸಂಜೆ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಚರ್ಚೆ ನಡೆಸಿ, ರಾತ್ರಿ ಅಲ್ಲಿಯೇ ಊಟ ಮಾಡಿ ವಾಸ್ತವ್ಯ ಮಾಡಲಿದ್ದಾರೆ.

ಹಿಂದುಳಿದ ಭಾಗದ ವಾಸ್ತವತೆ ಅರಿವಾಗಲಿ
ಸದಾ ಬೆಂಗಳೂರಿನಿಂದಲೇ ಆಡಳಿತ ನಿರ್ವಹಿಸುವ ಅಧಿಕಾರಸ್ಥರಿಗೆ ಇಂತಹ ಗ್ರಾಮ ವಾಸ್ತವ್ಯಗಳು ಜನರ ನೈಜ ಸಮಸ್ಯೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಸ್ವಾಗತಾರ್ಹ. ಜಿಲ್ಲೆಯಾದ ಮೇಲೂ ಯಾದಗಿರಿಗೆ ಬಹುಪಾಲು ಜಿಲ್ಲಾ ಸೌಕರ್ಯಗಳು ಸಿಕ್ಕಿಲ್ಲ. ಇಂದಿಗೂ ಬಹುಪಾಲು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲೇ ನಡೆಯುತ್ತಿವೆ. ಎಲ್ಲ ಕಡೆಯಂತೆಯೇ ಸರ್ಕಾರಿ ಶಾಲೆಗಳು ಸಮಸ್ಯೆಯಲ್ಲಿವೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ (ಯುಕೆಪಿ) ನಿರ್ಮಿಸಿದ ಕಳಪೆ ಕಾಲುವೆಗಳಿಂದ ನೀರು ಪೋಲಾಗುತ್ತಿದೆ. ನೀರಾವರಿ ಯೋಜನೆಗಳ ಕೊರತೆಯ ಕಾರಣಕ್ಕೆ ಅಪಾರ ನೀರು ಸುಮ್ಮನೇ ಹರಿದು ತೆಲಂಗಾಣ ತಲುಪುತ್ತಿದೆ. ಕೃಷ್ಣ ಮತ್ತು ಭೀಮಾ ನದಿಗಳು ಪಕ್ಕದಲ್ಲೇ ಹರಿದರೂ ಯಾದಗಿರಿ ಮತ್ತು ಶಹಾಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲಾಗಿಲ್ಲ!

ಸರ್ಕಾರಿ ಯೋಜನೆಗಳ ಅನುಷ್ಟಾನ ಸರಿಯಾಗದೇ ಇರುವುದರಿಂದ ಯಾದಗಿರಿಯ ಜಿಲ್ಲೆಯ ಜನ ಕಳೆದ 20 ವರ್ಷಗಳಿಂದ ಬೆಂಗಳೂರು, ಹೈದರಾಬಾದ್‍ಗಳಿಗೆ ಕಟ್ಟಡ, ರಸ್ತೆ ನಿರ್ಮಾಣದ ಕೆಲಸಗಳಿಗೆ ಗುಳೆ ಹೋಗುವುದು ನಡೆದೇ ಇದೆ. ಬೆಂಗಳೂರಿನ ಹೊರವಲಯದ ಖಾಲಿ ಜಾಗಗಳಲ್ಲಿ ಹತ್ತಾರು ‘ಯಾದಗಿರಿ ಕ್ಯಾಂಪ್’ಗಳು ತಲೆಎತ್ತಿವೆ. ಪೋಷಕರೊಂದಿಗೆ ಅಲ್ಲಿಗೆ ಹೋಗಿರುವ ಮಕ್ಕಳ ಶಿಕ್ಷಣ ಮೊಟಕುಗೊಳ್ಳುತ್ತಿದೆ.

ಇಂತಹ ವಾಸ್ತವ್ಯಗಳಿಂದಲಾದರೂ ನೈಜ ಸಮಸ್ಯೆಗಳನ್ನು ಅಧಿಕಾರಸ್ಥರು ಅರಿಯುವಂತಾಗಲಿ. ಜನರು ಕೂಡ ತಮ್ಮ ಹಕ್ಕುಗಳಿಗಾಗಿ ದನಿ ಎತ್ತಿ ನ್ಯಾಯ ಪಡೆಯುವ ಅವಕಾಶ ಸಿಗಲಿ.
ರೆಸಾರ್ಟು, ರಾಜಧಾನಿ ರಾಜಕಾರಣ ಹಿಂದಕ್ಕೆ ಸರಿದು, ಈ ಬಗೆಯಲ್ಲಾದರೂ ಗ್ರಾಮಗಳತ್ತ ಸರ್ಕಾರ ಕಣ್ಣು ತೆರೆಯುಂತಾಗಲಿ.

ಹಿಂದೆ 13 ವರ್ಷಗಳ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಜನರಲ್ಲಿ ಒಳ್ಳೆಯ ಅಭಿಪ್ರಾಯವನ್ನು ಮೂಡಿಸಿತ್ತು. ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...