Homeಕರ್ನಾಟಕಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

ಗ್ರಾಮವಾಸ್ತವ್ಯದಲ್ಲಿ ಕುಮಾರಸ್ವಾಮಿ : ತಳಮಟ್ಟದ ಸಂಕಟಗಳಿಗೆ ಪರಿಹಾರ ಸಿಗುವುದೇ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣೆ, ಕ್ಯಾಬಿನೆಟ್ ಸಭೆ, ಸಮನ್ವಯ ಸಮಿತಿ ಸಭೆ, ಮೈತ್ರಿಯ ಗೊಂದಲಗಳಲ್ಲೇ ಮುಳುಗಿ ಗ್ರಾಮ ಕರ್ನಾಟಕವನ್ನೇ ಮರೆತಿದ್ದ ಮುಖ್ಯಮಂತ್ರಿ ಮತ್ತು ಆ ಕಾರಣಕ್ಕಾಗಿ ಸರ್ಕಾರಕ್ಕೆ ಎಚ್ಚರವಾದಂತಿದೆ. ಇದು ಬರಪೀಡಿತ ಗ್ರಾಮ ಕರ್ನಾಟಕದ ಜನತೆಗೆ ತನ್ನ ಸಂಕಟಗಳನ್ನು ಮುಖಾಮುಖಿ ತೋರಿಸಲು ಅವಕಾಶವಾಗಿದೆ.

ಈಗ ಯಾದಗಿರಿ ತಾಲೂಕಿನ ಚಂಡರಕಿಯಲ್ಲಿ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ನಡೆದಿದೆ. ಚಂಡರಕಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುತ್ತಿರುವ ಕುಮಾರಸ್ವಾಮಿ, ಇಡೀ ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಯಾದಗಿರಿಗೊಂದು 300 ವಾರ್ಡುಗಳ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ್ದಾರೆ. ಯಾದಗಿರಿಯ ಎಲ್ಲ ಗ್ರಾಮಗಳಿಗೂ ಒಂದೂವರೆ ವರ್ಷದಲ್ಲಿ ನದಿನೀರನ್ನು ತಲುಪಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕೂ ಮೊದಲು ಅವರು ಯಾದಗಿರಿ ಪಟ್ಟಣದಲ್ಲಿ 28 ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಯಾದಗಿರಿಯ ಜಿಲ್ಲೆಯಲ್ಲಿ ಸಾಲಮನ್ನಾ ಕುರಿತಂತೆ ಆಗಿರುವ ಎಡವಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕಿನ ತಪ್ಪಿನಿಂದಾಗಿ ಇದು ನಡೆದಿದ್ದು ಅದನ್ನು ಸರಿಪಡಿಸುವ ಭರವಸೆ ನೀಡಿ, ಹೊಸ ಸಾಲ ಪಡೆಯಲು 100 ರೂ ಕೋಟಿ ಒದಗಿಸಲು ಆದೇಶ ನೀಡಿದ್ದಾರೆ. ಸಂಜೆ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಚರ್ಚೆ ನಡೆಸಿ, ರಾತ್ರಿ ಅಲ್ಲಿಯೇ ಊಟ ಮಾಡಿ ವಾಸ್ತವ್ಯ ಮಾಡಲಿದ್ದಾರೆ.

ಹಿಂದುಳಿದ ಭಾಗದ ವಾಸ್ತವತೆ ಅರಿವಾಗಲಿ
ಸದಾ ಬೆಂಗಳೂರಿನಿಂದಲೇ ಆಡಳಿತ ನಿರ್ವಹಿಸುವ ಅಧಿಕಾರಸ್ಥರಿಗೆ ಇಂತಹ ಗ್ರಾಮ ವಾಸ್ತವ್ಯಗಳು ಜನರ ನೈಜ ಸಮಸ್ಯೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಸ್ವಾಗತಾರ್ಹ. ಜಿಲ್ಲೆಯಾದ ಮೇಲೂ ಯಾದಗಿರಿಗೆ ಬಹುಪಾಲು ಜಿಲ್ಲಾ ಸೌಕರ್ಯಗಳು ಸಿಕ್ಕಿಲ್ಲ. ಇಂದಿಗೂ ಬಹುಪಾಲು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡಗಳಲ್ಲೇ ನಡೆಯುತ್ತಿವೆ. ಎಲ್ಲ ಕಡೆಯಂತೆಯೇ ಸರ್ಕಾರಿ ಶಾಲೆಗಳು ಸಮಸ್ಯೆಯಲ್ಲಿವೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ (ಯುಕೆಪಿ) ನಿರ್ಮಿಸಿದ ಕಳಪೆ ಕಾಲುವೆಗಳಿಂದ ನೀರು ಪೋಲಾಗುತ್ತಿದೆ. ನೀರಾವರಿ ಯೋಜನೆಗಳ ಕೊರತೆಯ ಕಾರಣಕ್ಕೆ ಅಪಾರ ನೀರು ಸುಮ್ಮನೇ ಹರಿದು ತೆಲಂಗಾಣ ತಲುಪುತ್ತಿದೆ. ಕೃಷ್ಣ ಮತ್ತು ಭೀಮಾ ನದಿಗಳು ಪಕ್ಕದಲ್ಲೇ ಹರಿದರೂ ಯಾದಗಿರಿ ಮತ್ತು ಶಹಾಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸಲಾಗಿಲ್ಲ!

ಸರ್ಕಾರಿ ಯೋಜನೆಗಳ ಅನುಷ್ಟಾನ ಸರಿಯಾಗದೇ ಇರುವುದರಿಂದ ಯಾದಗಿರಿಯ ಜಿಲ್ಲೆಯ ಜನ ಕಳೆದ 20 ವರ್ಷಗಳಿಂದ ಬೆಂಗಳೂರು, ಹೈದರಾಬಾದ್‍ಗಳಿಗೆ ಕಟ್ಟಡ, ರಸ್ತೆ ನಿರ್ಮಾಣದ ಕೆಲಸಗಳಿಗೆ ಗುಳೆ ಹೋಗುವುದು ನಡೆದೇ ಇದೆ. ಬೆಂಗಳೂರಿನ ಹೊರವಲಯದ ಖಾಲಿ ಜಾಗಗಳಲ್ಲಿ ಹತ್ತಾರು ‘ಯಾದಗಿರಿ ಕ್ಯಾಂಪ್’ಗಳು ತಲೆಎತ್ತಿವೆ. ಪೋಷಕರೊಂದಿಗೆ ಅಲ್ಲಿಗೆ ಹೋಗಿರುವ ಮಕ್ಕಳ ಶಿಕ್ಷಣ ಮೊಟಕುಗೊಳ್ಳುತ್ತಿದೆ.

ಇಂತಹ ವಾಸ್ತವ್ಯಗಳಿಂದಲಾದರೂ ನೈಜ ಸಮಸ್ಯೆಗಳನ್ನು ಅಧಿಕಾರಸ್ಥರು ಅರಿಯುವಂತಾಗಲಿ. ಜನರು ಕೂಡ ತಮ್ಮ ಹಕ್ಕುಗಳಿಗಾಗಿ ದನಿ ಎತ್ತಿ ನ್ಯಾಯ ಪಡೆಯುವ ಅವಕಾಶ ಸಿಗಲಿ.
ರೆಸಾರ್ಟು, ರಾಜಧಾನಿ ರಾಜಕಾರಣ ಹಿಂದಕ್ಕೆ ಸರಿದು, ಈ ಬಗೆಯಲ್ಲಾದರೂ ಗ್ರಾಮಗಳತ್ತ ಸರ್ಕಾರ ಕಣ್ಣು ತೆರೆಯುಂತಾಗಲಿ.

ಹಿಂದೆ 13 ವರ್ಷಗಳ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಜನರಲ್ಲಿ ಒಳ್ಳೆಯ ಅಭಿಪ್ರಾಯವನ್ನು ಮೂಡಿಸಿತ್ತು. ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...