Homeಕರ್ನಾಟಕಬಜೆಟ್ ಮಂಡನೆ ವೇಳೆ ಕೇಂದ್ರದ ಆರ್ಥಿಕ ತಾರತಮ್ಯ ಪ್ರಸ್ತಾಪಿಸಿದ ಸಿಎಂ: ಸದನದಿಂದ ಹೊರ ನಡೆದ ಬಿಜೆಪಿ...

ಬಜೆಟ್ ಮಂಡನೆ ವೇಳೆ ಕೇಂದ್ರದ ಆರ್ಥಿಕ ತಾರತಮ್ಯ ಪ್ರಸ್ತಾಪಿಸಿದ ಸಿಎಂ: ಸದನದಿಂದ ಹೊರ ನಡೆದ ಬಿಜೆಪಿ ಶಾಸಕರು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರದ ಆರ್ಥಿಕ ತಾರತಮ್ಯವನ್ನು ಕಟುವಾಗಿ ಟೀಕಿಸಿದ್ದನ್ನು ಖಂಡಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಕರ್ನಾಟಕಕ್ಕೆ ಕೇಂದ್ರದಿಂದ 45, 322 ಕೋಟಿ ರೂಪಾಯಿ ತೆರಿಗೆ ಅನ್ಯಾಯವಾಗಿದೆ. ಬಿಜೆಪಿ ಆಡಳಿತ ರಾಜ್ಯಗಳು ಅನ್ಯಾಯವಾದರೂ ಪ್ರಶ್ನಿಸದೆ ಸುಮ್ಮನಿವೆ. ನಮ್ಮ ರಾಜ್ಯದ ಈ ಹಿಂದಿನ ಬಿಜೆಪಿ ಸರ್ಕಾರ ಕೂಡ ತೆರಿಗೆ ಪಾಲನ್ನು ತರುವಲ್ಲಿ ವಿಫಲವಾಗಿತ್ತು ಎಂದು ಸಿಎಂ ಹೇಳಿದರು.

ಇದರಿಂದ ಕೋಪಗೊಂಡ ವಿಪಕ್ಷ ನಾಯಕ ಆರ್‌. ಆಶೋಕ್, “ನೀವಿಲ್ಲಿ ಬಜೆಟ್ ಮಂಡಿಸಲು ಬಂದಿದ್ದೀರೋ, ಕೇಂದ್ರ ಸರ್ಕಾರವನ್ನು ಟೀಕಿಸಲು ಬಂದಿದ್ದೀರೋ” ಎಂದು ಅಸಮಧಾನ ವ್ಯಕ್ತಪಡಿಸಿದರು. ಇದಕ್ಕೆ ದನಿಗೂಡಿಸಿದ ಇತರ ಬಿಜೆಪಿ ಶಾಸಕರು ಸಿಎಂ ಬಜೆಟ್ ಓದುವ ವೇಳೆ ಗದ್ದಲ ಸೃಷ್ಟಿಸಿದರು. ಈ ನಡುವೆ ಸಿಎಂ ಬಜೆಟ್ ಮಂಡನೆ ಮುಂದುವರಿಸಿದರು.

ಬಳಿಕ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಬಜೆಟ್‌ಗೆ ಬಹಿಷ್ಕಾರ ಹಾಕಿದ ಬಿಜೆಪಿ ಶಾಸಕರು ಸದನದಿಂದ ಹೊರ ನಡೆದರು. “ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ” ಎಂದು ಕೂಗುತ್ತಾ ಸದನದಿಂದ ಹೊರಬಂದು  ವಿಧಾನಸಭೆ ಪ್ರವೇಶದ್ವಾರದ ಬಾಗಿಲಿಗೆ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಗೆ ಈ ಬಾರಿ ಸೂಟ್‌ಕೇಸ್‌ ಬದಲು ಬ್ಯಾಗ್‌ ಹಿಡಿದು ಆಗಮಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಸರ್ಕಾರಿ ಸ್ವಾಮ್ಯದ ಲಿಡ್ಕರ್ ಕಂಪನಿಯ ಬ್ಯಾಗ್‌ನಲ್ಲಿ ಬಜೆಟ್ ಪ್ರತಿ ಇರಿಸಲಾಗಿತ್ತು.

2024-25ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,71,383 ಕೋಟಿ ರೂ. ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಹಲವು ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...