Homeಮುಖಪುಟ'ತಿರುಪತಿ ಲಡ್ಡು ತಯಾರಿಕೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ' ಎಂದ ಸಿಎಂ ನಾಯ್ಡು; ಆರೋಪ ನಿರಾಕರಿಸಿದ ವೈಎಸ್ಆರ್...

‘ತಿರುಪತಿ ಲಡ್ಡು ತಯಾರಿಕೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ’ ಎಂದ ಸಿಎಂ ನಾಯ್ಡು; ಆರೋಪ ನಿರಾಕರಿಸಿದ ವೈಎಸ್ಆರ್ ಕಾಂಗ್ರೆಸ್

- Advertisement -
- Advertisement -

ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷವು ಈ ಆರೋಪವನ್ನು ತಳ್ಳಿಹಾಕಿದೆ.

ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಜಗನ್ ಮೋಹನ್ ರೆಡ್ಡಿ ಸರ್ಕಾರದ ಅಡಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡೂಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಹೇಳಿದ್ದಾರೆ.

“ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ, ಅವರು ‘ಅನ್ನದಾನ’ (ಉಚಿತ ಊಟ) ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಪವಿತ್ರ ತಿರುಮಲ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ಕಲುಷಿತಗೊಳಿಸಿದ್ದಾರೆ. ಆದರೆ, ನಾವು ಈಗ ಶುದ್ಧ ತುಪ್ಪವನ್ನು ಬಳಸಿ, ಟಿಟಿಡಿಯ ಪಾವಿತ್ರ್ಯತೆಯನ್ನು ಕಾಪಾಡಲು ಪ್ರಯತ್ನಿಸುತ್ತಿದ್ದೇವೆ” ಎಂದಿದ್ದಾರೆ.

ನಾಯ್ಡು ಅವರು ತಿರುಮಲ ದೇಗುಲದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ ಎಂದು ವೈಎಸ್ಆರ್ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ ಆರೋಪಿಸಿದ್ದಾರೆ.

“ಚಂದ್ರಬಾಬು ನಾಯ್ಡು ಅವರು ತಿರುಮಲದ ಪಾವಿತ್ರ್ಯತೆ ಮತ್ತು ಕೋಟ್ಯಂತರ ಹಿಂದೂಗಳ ನಂಬಿಕೆಯನ್ನು ತೀವ್ರವಾಗಿ ಹಾಳು ಮಾಡಿದ್ದಾರೆ. ತಿರುಮಲ ಪ್ರಸಾದದ ಬಗ್ಗೆ ಅವರ ಟೀಕೆಗಳು ಅತ್ಯಂತ ದುರುದ್ದೇಶಪೂರಿತವಾಗಿವೆ. ಯಾವುದೇ ವ್ಯಕ್ತಿ ಇಂತಹ ಮಾತುಗಳನ್ನು ಮಾತನಾಡುವುದಿಲ್ಲ ಅಥವಾ ಅಂತಹ ಆರೋಪಗಳನ್ನು ಮಾಡುವುದಿಲ್ಲ” ಎಂದು ರೆಡ್ಡಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದಿದ್ದಾರೆ.

“ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವ ಮಟ್ಟಕ್ಕೂ ಬಗ್ಗುತ್ತಾರೆ ಎಂಬುದು ಮತ್ತೆ ಸಾಬೀತಾಗಿದೆ. ಭಕ್ತರ ನಂಬಿಕೆ ಗಟ್ಟಿಗೊಳಿಸಲು ನಾನು ಕುಟುಂಬ ಸಮೇತ ತಿರುಮಲ ಪ್ರಸಾದದ ವಿಚಾರವಾಗಿ ಪರಮಾತ್ಮನ ಮುಂದೆ ಪ್ರಮಾಣ ವಚನ ಸ್ವೀಕರಿಸಲು ಸಿದ್ಧ. ಚಂದ್ರಬಾಬು ನಾಯ್ಡು ತಮ್ಮ ಕುಟುಂಬದೊಂದಿಗೆ ಅದೇ ರೀತಿ ಮಾಡಲು ಸಿದ್ಧರಿದ್ದಾರೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ‘ಒಂದು ರಾಷ್ಟ್ರ, ಒಂದು ಚುನಾವಣೆ..’; ಕೋವಿಂದ್ ಸಮಿತಿ ವರದಿ ಅನುಮೋದಿಸಿದ ಕೇಂದ್ರ ಸಂಪುಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...