Homeಮುಖಪುಟಸಿಎಂ ಹುದ್ದೆಯನ್ನು ಯಾವುದೇ ಕಾರಣಕ್ಕೆ ಬಿಟ್ಟು ಕೊಡುವುದಿಲ್ಲ: ಇಟ್ಟ ಹೆಜ್ಜೆ ಹಿಂದಕ್ಕೆ ತೆಗೆಯಲ್ಲ- ಶಿವಸೇನೆ ಎಚ್ಚರಿಕೆ

ಸಿಎಂ ಹುದ್ದೆಯನ್ನು ಯಾವುದೇ ಕಾರಣಕ್ಕೆ ಬಿಟ್ಟು ಕೊಡುವುದಿಲ್ಲ: ಇಟ್ಟ ಹೆಜ್ಜೆ ಹಿಂದಕ್ಕೆ ತೆಗೆಯಲ್ಲ- ಶಿವಸೇನೆ ಎಚ್ಚರಿಕೆ

- Advertisement -
- Advertisement -

ಮಹಾರಾಷ್ಟ್ರ ಅಧಿಕಾರ ಗದ್ದುಗೆ ಏರಲು ಬಿಜೆಪಿ ಮತ್ತು ಶಿವಸೇನೆಯ ಹಾವು-ಏಣಿ ಆಟ ಮುಂದುವರೆದಿದೆ. ನಾ ಕೊಡೆ, ನೀ ಬಿಡೆ ಕದನದಲ್ಲಿ ರಾಜ್ಯ ಆಡಳಿತ ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಬಿಜೆಪಿ ಮತ್ತು ಶಿವಸೇನೆಯ ಕುರ್ಚಿ ಗುದ್ದಾಟ ಹಾಸ್ಯಾಸ್ಪದಕ್ಕೆ ಗುರಿಯಾಗಿದೆ. ಮೈತ್ರಿ ಪಾಲುದಾರ, ಮಿತ್ರ ಬಿಜೆಪಿಗೆ, ಶಿವಸೇನೆ ಖಡಕ್ ಎಚ್ಚರಿಕೆ ನೀಡಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನವನ್ನು ಬಿಜೆಪಿಗೆ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಯಾವುದೇ ಕಾರಣಕ್ಕೂ ಇಟ್ಟ ಹೆಜ್ಜೆ ಹಿಂದೆ ತೆಗೆಯುವುದಿಲ್ಲ. ಸಿಎಂ ಸ್ಥಾನ ಶಿವಸೇನೆಗೆ ಬೇಕು ಎಂದು ತೀಕ್ಷ್ಣ ಸಂದೇಶ ರವಾನಿಸಿದ್ದಾರೆ. ಮಾತೋಶ್ರೀ ನಿವಾಸದಿಂದ 3 ಕಿ.ಮೀ ದೂರದಲ್ಲಿರುವ ಹೋಟೆಲ್ ನಲ್ಲಿ ಮಾತನಾಡಿದ ಠಾಕ್ರೆ, ಬಿಜೆಪಿ ಶಿವಸೇನೆಯ ಕೆಲ ಶಾಸಕರನ್ನು ಬಂಧಿಸುವುದು ಮತ್ತು ತನ್ನತ್ತ ಸೆಳೆಯಲು ತಂತ್ರ ಹೂಡಿರಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರ ತಂಡವು ಇಂದು ಮತ್ತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿದೆ. ಆದರೆ ರಾಜ್ಯಪಾಲರನ್ನು ಸರ್ಕಾರ ರಚನೆ ವಿಚಾರಕ್ಕಾಗಿ ಭೇಟಿ ಮಾಡಿಲ್ಲ. ಸರ್ಕಾರಿ ಯೋಜನೆಗಳ ನವೀಕರಣ ಕುರಿತು ಚರ್ಚಿಸಲಾಗಿದೆ ಎಂದು ಬಿಜೆಪಿ ಹೇಳಿದೆ. ಇನ್ನು ಶಿವಸೇನೆ ಮಾತ್ರ ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿದೆ. 15 ದಿನಗಳಿಂದ ನಾವು ಇದಕ್ಕಾಗೇ ಕಾಯುತ್ತಿದ್ದೇವೆ.  ಕಾಲಹರಣ ಮಾಡಲು ವೃಥಾ ಮನಸ್ಸಿಲ್ಲ. ಶಿವಸೇನೆಯಿಂದ ಸಿಎಂ ಅಭ್ಯರ್ಥಿ ಆಯ್ಕೆಯಾಗುವ ಬಗ್ಗೆ ಬಿಜೆಪಿ ಲಿಖಿತ ಒಪ್ಪಂದ ಮಾಡಿಕೊಳ್ಳಬೇಕು ಎಂದು ಹೇಳಿದೆ.

ಅಲ್ಲದೇ ಅಮಿತ್ ಶಾ ಅವರೊಂದಿಗೆ ನಡೆದ ಸಭೆಯಲ್ಲೇ ಉದ್ಧವ್ ಠಾಕ್ರೆ ಅವರು ಸಿಎಂ ಹುದ್ದೆಗಾಗಿ ನೇರವಾಗಿಯೇ ಬೇಡಿಕೆಯಟ್ಟಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಈ ನಿರ್ಧಾರಕ್ಕೆ ಶಿವಸೇನೆ ಬದ್ಧವಾಗಿದೆ. ಸಿಎಂ ಹುದ್ದೆ ಬೇಡವಾಗಿದ್ದರೆ ನಾವ್ಯಾಕೆ ಇಷ್ಟು ದಿನಗಳನ್ನು ವ್ಯರ್ಥ ಮಾಡಬೇಕಿತ್ತು ಅಂತಾ ಶಿವಸೇನೆ ಶಾಸಕ ಸಂಜಯ್ ಶಿರ್ಸತ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...