Homeಮುಖಪುಟಸಿಎಂ ಹುದ್ದೆಯನ್ನು ಯಾವುದೇ ಕಾರಣಕ್ಕೆ ಬಿಟ್ಟು ಕೊಡುವುದಿಲ್ಲ: ಇಟ್ಟ ಹೆಜ್ಜೆ ಹಿಂದಕ್ಕೆ ತೆಗೆಯಲ್ಲ- ಶಿವಸೇನೆ ಎಚ್ಚರಿಕೆ

ಸಿಎಂ ಹುದ್ದೆಯನ್ನು ಯಾವುದೇ ಕಾರಣಕ್ಕೆ ಬಿಟ್ಟು ಕೊಡುವುದಿಲ್ಲ: ಇಟ್ಟ ಹೆಜ್ಜೆ ಹಿಂದಕ್ಕೆ ತೆಗೆಯಲ್ಲ- ಶಿವಸೇನೆ ಎಚ್ಚರಿಕೆ

- Advertisement -
- Advertisement -

ಮಹಾರಾಷ್ಟ್ರ ಅಧಿಕಾರ ಗದ್ದುಗೆ ಏರಲು ಬಿಜೆಪಿ ಮತ್ತು ಶಿವಸೇನೆಯ ಹಾವು-ಏಣಿ ಆಟ ಮುಂದುವರೆದಿದೆ. ನಾ ಕೊಡೆ, ನೀ ಬಿಡೆ ಕದನದಲ್ಲಿ ರಾಜ್ಯ ಆಡಳಿತ ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಬಿಜೆಪಿ ಮತ್ತು ಶಿವಸೇನೆಯ ಕುರ್ಚಿ ಗುದ್ದಾಟ ಹಾಸ್ಯಾಸ್ಪದಕ್ಕೆ ಗುರಿಯಾಗಿದೆ. ಮೈತ್ರಿ ಪಾಲುದಾರ, ಮಿತ್ರ ಬಿಜೆಪಿಗೆ, ಶಿವಸೇನೆ ಖಡಕ್ ಎಚ್ಚರಿಕೆ ನೀಡಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನವನ್ನು ಬಿಜೆಪಿಗೆ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಯಾವುದೇ ಕಾರಣಕ್ಕೂ ಇಟ್ಟ ಹೆಜ್ಜೆ ಹಿಂದೆ ತೆಗೆಯುವುದಿಲ್ಲ. ಸಿಎಂ ಸ್ಥಾನ ಶಿವಸೇನೆಗೆ ಬೇಕು ಎಂದು ತೀಕ್ಷ್ಣ ಸಂದೇಶ ರವಾನಿಸಿದ್ದಾರೆ. ಮಾತೋಶ್ರೀ ನಿವಾಸದಿಂದ 3 ಕಿ.ಮೀ ದೂರದಲ್ಲಿರುವ ಹೋಟೆಲ್ ನಲ್ಲಿ ಮಾತನಾಡಿದ ಠಾಕ್ರೆ, ಬಿಜೆಪಿ ಶಿವಸೇನೆಯ ಕೆಲ ಶಾಸಕರನ್ನು ಬಂಧಿಸುವುದು ಮತ್ತು ತನ್ನತ್ತ ಸೆಳೆಯಲು ತಂತ್ರ ಹೂಡಿರಬಹುದು ಎಂದು ಕಳವಳ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರ ತಂಡವು ಇಂದು ಮತ್ತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿದೆ. ಆದರೆ ರಾಜ್ಯಪಾಲರನ್ನು ಸರ್ಕಾರ ರಚನೆ ವಿಚಾರಕ್ಕಾಗಿ ಭೇಟಿ ಮಾಡಿಲ್ಲ. ಸರ್ಕಾರಿ ಯೋಜನೆಗಳ ನವೀಕರಣ ಕುರಿತು ಚರ್ಚಿಸಲಾಗಿದೆ ಎಂದು ಬಿಜೆಪಿ ಹೇಳಿದೆ. ಇನ್ನು ಶಿವಸೇನೆ ಮಾತ್ರ ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿದೆ. 15 ದಿನಗಳಿಂದ ನಾವು ಇದಕ್ಕಾಗೇ ಕಾಯುತ್ತಿದ್ದೇವೆ.  ಕಾಲಹರಣ ಮಾಡಲು ವೃಥಾ ಮನಸ್ಸಿಲ್ಲ. ಶಿವಸೇನೆಯಿಂದ ಸಿಎಂ ಅಭ್ಯರ್ಥಿ ಆಯ್ಕೆಯಾಗುವ ಬಗ್ಗೆ ಬಿಜೆಪಿ ಲಿಖಿತ ಒಪ್ಪಂದ ಮಾಡಿಕೊಳ್ಳಬೇಕು ಎಂದು ಹೇಳಿದೆ.

ಅಲ್ಲದೇ ಅಮಿತ್ ಶಾ ಅವರೊಂದಿಗೆ ನಡೆದ ಸಭೆಯಲ್ಲೇ ಉದ್ಧವ್ ಠಾಕ್ರೆ ಅವರು ಸಿಎಂ ಹುದ್ದೆಗಾಗಿ ನೇರವಾಗಿಯೇ ಬೇಡಿಕೆಯಟ್ಟಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಈ ನಿರ್ಧಾರಕ್ಕೆ ಶಿವಸೇನೆ ಬದ್ಧವಾಗಿದೆ. ಸಿಎಂ ಹುದ್ದೆ ಬೇಡವಾಗಿದ್ದರೆ ನಾವ್ಯಾಕೆ ಇಷ್ಟು ದಿನಗಳನ್ನು ವ್ಯರ್ಥ ಮಾಡಬೇಕಿತ್ತು ಅಂತಾ ಶಿವಸೇನೆ ಶಾಸಕ ಸಂಜಯ್ ಶಿರ್ಸತ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...