Homeಮುಖಪುಟರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

ರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

- Advertisement -
- Advertisement -

ಹರಿಯಾಣದಲ್ಲಿ ರೈತರ ಮೇಲೆ ಶನಿವಾರ ನಡೆದ ಪೊಲೀಸ್‌ ಲಾಠಿ ಚಾರ್ಜ್‌ ಅನ್ನು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಮರ್ಥಿಸಿಕೊಂಡಿದ್ದಾರೆ. ರೈತರು ಶಾಂತಿಯುತ ಪ್ರತಿಭಟನೆಯ ಆಶ್ವಾಸನೆಯನ್ನು ನೀಡಿದ್ದರು, ಆದರೆ ಅಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ಸೇರಿದಂತೆ, ಹೆದ್ದಾರಿಯನ್ನು ನಿರ್ಬಂಧಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಭಾಗವಹಿಸಿದ್ದ ಬಿಜೆಪಿ ಆಯೋಜನೆಯ ಸಭೆಯನ್ನು ವಿರೋಧಿಸಲು ಕರ್ನಾಲ್ ಕಡೆಗೆ ತೆರಳುತ್ತಿದ್ದಾಗ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರತಿಭಟನಾಕಾರರು ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಲಾಠಿಚಾರ್ಜ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದು, ಘಟನೆಯಲ್ಲಿ ಸುಮಾರು 10 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ಸಭೆಯ ನಂತರ ಶನಿವಾರ ಸಂಜೆ ಕರ್ನಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಖಟ್ಟರ್, “ಪ್ರತಿಭಟನಾ ನಿರತ ರೈತರು ತಮ್ಮ ಪ್ರತಿಭಟನೆಗಳು ಶಾಂತಿಯುತವಾಗಿರುತ್ತವೆ ಎಂದು ಸರ್ಕಾರಕ್ಕೆ ಈ ಹಿಂದೆ ಭರವಸೆ ನೀಡಿದ್ದರು. ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೆ, ಅದಕ್ಕೆ ಯಾರೂ ಯಾವುದೇ ಆಕ್ಷೇಪವನ್ನು ವ್ಯಕ್ತಪಡಿಸುತ್ತಿರಲಿಲ್ಲ. ಆದರೆ ಅವರು ಪೊಲೀಸರ ಮೇಲೆ ಕಲ್ಲು ತೂರಿ, ಹೆದ್ದಾರಿಯನ್ನು ತಡೆದ ನಂತರ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಂಡಿದ್ದಾರೆ” ಎಂದು ಹೇಳಿದ್ದಾರೆ.

ಕರ್ನಾಲ್‌ನಲ್ಲಿ ನಡೆದ ಬಿಜೆಪಿ ಸಭೆಯನ್ನು ಉಲ್ಲೇಖಿಸಿದ ಖಟ್ಟರ್, “ಇದು ಪಕ್ಷದ ರಾಜ್ಯಮಟ್ಟದ ಸಭೆಯಾಗಿದೆ. ಇದನ್ನು ವಿರೋಧಿಸಲು ರೈತ ಸಂಘಟನೆಗಳು ನೀಡಿದ ಕರೆಯನ್ನು ನಾನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

“ಯಾವುದೇ ಕಾರಣಕ್ಕೂ ಸಂಸ್ಥೆಯೊಂದರ ಕಾರ್ಯವನ್ನು ಅಡ್ಡಿಪಡಿಸುವುದು ಪ್ರಜಾಪ್ರಭುತ್ವ ವಿರೋಧಿ” ಎಂದು ಅವರು ತಿಳಿಸಿದ್ದಾರೆ.

ಹರಿಯಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ನವದೀಪ್ ಸಿಂಗ್ ವಿರ್ಕ್, “ನಾಲ್ಕು ಪ್ರತಿಭಟನಾಕಾರರು ಮಾತ್ರ ಗಾಯಗೊಂಡಿದ್ದಾರೆ. ಆದರೆ ಹತ್ತು ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದಾರೆ” ಎಂದು ಈ ಹಿಂದೆ ತಿಳಿಸಿದ್ದರು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದ್ದು, ಹಲ್ಲೆಗೂ ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ಹೆದ್ದಾರಿಯನ್ನು ನಿರ್ಬಂಧಿಸಿದ್ದರಿಂದ ನಾವು ಸೌಮ್ಯವಾಗಿ ಬಲ ಪ್ರಯೋಗಿಸಿದ್ದೇವೆ ಎಂದು ಕರ್ನಾಲ್‌ ಐಜಿ ಮಮತಾ ಸಿಂಗ್ ಹೇಳಿದ್ದಾರೆ. “ಪ್ರತಿಭಟನಾಕಾರರು ಪೊಲೀಸರ ಕಡೆಗೆ ಕಲ್ಲುಗಳನ್ನು ಎಸೆದಿದ್ದರಿಂದ ಅವರನ್ನು ಚದುರಿಸಲು ಸೌಮ್ಯ ಬಲಪ್ರಯೋಗ ಮಾಡಲಾಯಿತು” ಎಂದು ಹೇಳಿದ್ದಾರೆ.

ಈ ಮಧ್ಯೆ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕೈಟ್ ಭಾನುವಾರ ಕರ್ನಾಲ್‌ನ ಆಸ್ಪತ್ರೆಯಲ್ಲಿ ಗಾಯಗೊಂಡ ಪ್ರತಿಭಟನಾಕಾರರನ್ನು ಭೇಟಿಯಾದರು. ಪೊಲೀಸರ ಕ್ರೂರ ಲಾಠಿಚಾರ್ಜ್‌ ಅನ್ನು ಅವರು ಖಂಡಿಸಿದ್ದಾರೆ.

“ಕರ್ನಾಲ್‌ನಲ್ಲಿ ಸಂಚು ಹೂಡಿ ಇದನ್ನು ಮಾಡಲಾಗಿದೆ. ರೈತರ ತಲೆಬುರುಡೆ ಒಡೆಯಲು ಪೊಲೀಸರಿಗೆ ಆದೇಶಿಸುತ್ತಿರುವ ಮ್ಯಾಜಿಸ್ಟ್ರೇಟ್‌ನ ಆದೇಶವನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ” ಎಂದು ಟೀಕಾಯತ್‌ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...