Homeಮುಖಪುಟದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ಇತ್ತೀಚೆಗೆ ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಗುರುವಾರದಂದು ಭೇಟಿ ಮಾಡಿದ್ದಾರೆ. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದರು.

ನರಿಕುರವರ್ ಮತ್ತು ಇರುಳರ್‌ ಸಮುದಾಯ ವಾಸಿಸುವ ಮಾಮಲ್ಲಪುರಂ ಬಳಿಯ ಪೂಂಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್‌ 81 ಜನರಿಗೆ ವಸತಿ ಹಕ್ಕುಪತ್ರ ವಿತರಿಸಿದ್ದಾರೆ. 10 ಲಕ್ಷ ವೆಚ್ಚದ ಅಂಗನವಾಡಿ ಮತ್ತು ಪಂಚಾಯತ್ ಯೂನಿಯನ್ ಶಾಲೆಗಳನ್ನು ನಿರ್ಮಿಸಲು ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳ ಆದೇಶಗಳನ್ನು ಸಹ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಈ ವೇಳೆ ಮಾತನಾಡಿದ ಅಶ್ವಿನಿ ಅವರು, “ಮುಖ್ಯಮಂತ್ರಿಗಳಿಗೆ ಧನ್ಯವಾದಗಳು, ನಾವು ಈಗ ಮತದಾರರ ಗುರುತಿನ ಚೀಟಿ, ಆಧಾರ್ ಮತ್ತು ಕುಟುಂಬ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದೇವೆ. ಇದು ಕನಸಿನಂತೆ ಭಾಸವಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಪಡಿತರ ಚೀಟಿ ಪಡೆಯಲು ನಾಲ್ಕು ತಿಂಗಳು ಹರಸಾಹಸ ಪಡಬೇಕಾದ ನಮಗೆ ನೇರವಾಗಿ ಅವರಿಂದಲೇ ಎರಡೇ ದಿನದಲ್ಲಿ ಕಾರ್ಡ್ ಸಿಕ್ಕಿದೆ. ನಾನು ಸಚಿವ ಶೇಖರ್ ಬಾಬು ಅವರನ್ನು ಭೇಟಿಯಾದಾಗ, ನಮ್ಮನ್ನು ಇಲ್ಲಿಂದ ಹೊರಹಾಕುತ್ತಾರೋ ಎಂಬ ಭಯದಲ್ಲಿ ಇಲ್ಲಿ ಪ್ರತಿದಿನ ನಾವು ವಾಸಿಸುತ್ತಿದ್ದೇವೆ ಎಂದು ಹೇಳಿದ್ದೆ. ಈಗ ನಮ್ಮಲ್ಲಿ ಪತ್ರಗಳಿವೆ, ನಮಗೆ ಆ ಭಯವಿಲ್ಲ” ಎಂದು ಹೇಳಿದ್ದಾರೆ.

ಚೆಂಗಲ್‌ಪೇಟ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿಗಳು ನರಿಕುರವರ್ ಮತ್ತು ಇರುಳ ಬುಡಕಟ್ಟು ಜನಾಂಗದ 282 ಜನರಿಗೆ 4.53 ಕೋಟಿ ರೂಪಾಯಿಗಳ ಸರ್ಕಾರದ ಕಲ್ಯಾಣ ಯೋಜನೆಯನ್ನು ಘೋಷಿಸಿದ್ದಾರೆ. ಜೊತೆಗೆ ಪುರಸಭೆಯ ಸಾರ್ವಜನಿಕ ನಿಧಿ ಯೋಜನೆಯಡಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಆದೇಶಿಸಿದರು.

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಚೆಂಗಲ್‌ಪೇಟೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 282 ಜನರಿಗೆ ವಸತಿ ಬಾಂಡ್‌ಗಳು, ಕುಟುಂಬ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಜಾತಿ ಪ್ರಮಾಣಪತ್ರಗಳು, ಕಲ್ಯಾಣ ಮಂಡಳಿ ಕಾರ್ಡ್‌ಗಳು, ತರಬೇತಿ ಆದೇಶಗಳು ಮತ್ತು ಬ್ಯಾಂಕ್ ಸಾಲವನ್ನು ಸಿಎಂ ವಿತರಿಸಿದ್ದಾರೆ. ಇಷ್ಟೇ ಅಲ್ಲದೆ, ನಗರಾಭಿವೃದ್ಧಿ ಯೋಜನೆ ಪ್ರಸ್ತಾವನೆಗೂ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಜಿಲ್ಲೆಯಲ್ಲಿ ಅಂಗನವಾಡಿ ಹಾಗೂ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಆದೇಶ ಹೊರಡಿಸಿದ್ದಾರೆ.

81 ಮಂದಿಗೆ 3.52 ಕೋಟಿ ರೂ.ವೆಚ್ಚದ ವಸತಿ ಪತ್ರ, ಆರು ಮಂದಿಗೆ ವೃದ್ಧಾಪ್ಯ ಕಲ್ಯಾಣ ಯೋಜನೆ, 21 ಮಂದಿಗೆ ಪಡಿತರ ಚೀಟಿ, 18 ಮಂದಿಗೆ ಮತದಾರರ ಗುರುತಿನ ಚೀಟಿ, ಇರುಳ ಸಮುದಾಯದ 88 ಮಂದಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಮತ್ತು 34 ನರಿಕುರವರ್ ಜನರು ತಮ್ಮ ಅತ್ಯಂತ ಹಿಂದುಳಿದ ವರ್ಗ (MBC) ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಹೆಚ್ಚುವರಿಯಾಗಿ, 12 ಜನರು ಮುದ್ರಾ ಯೋಜನೆಯಡಿಯಲ್ಲಿ ತಲಾ ರೂ 1 ಲಕ್ಷ ಸಾಲದ ಮೊತ್ತವನ್ನು ಮತ್ತು ಸಣ್ಣ ವ್ಯಾಪಾರ ಯೋಜನೆಯಡಿಯಲ್ಲಿ 33 ಜನರಿಗೆ ತಲಾ ರೂ 10,000 ಸಾಲದ ಮೊತ್ತವನ್ನು ನೀಡಲಾಗಿದೆ. ಪೂಂಚೇರಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತು ಇತರ ಅಗತ್ಯ ವಸ್ತುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಿಎಂ ಸ್ಟಾಲಿನ್ ಅವರು ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಅಶ್ವಿನಿ ಅವರಿಗೆ ಇತ್ತೀಚೆಗೆ ಮಾಮಲ್ಲಪುರಂ ದೇವಸ್ಥಾನದಲ್ಲಿ ಊಟ ನಿರಾಕರಿಸಲಾಗಿತ್ತು. ‘ಅನ್ನದಾನಂ’ ಬಡವರಿಗೆ ಉಚಿತ ದೇವಸ್ಥಾನದ ಊಟವನ್ನು ನೀಡುವ ಯೋಜನೆಯಾಗಿದೆ. ಡಿಎಂಕೆ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಸಿಇ ಇಲಾಖೆಯಿಂದ ಪ್ರಾರಂಭಿಸಲ್ಪಟ್ಟಿದ್ದು, ಪ್ರಸ್ತುತ ತಮಿಳುನಾಡಿನಾದ್ಯಂತ 754 ಸ್ಥಳಗಳಲ್ಲಿ ಸಕ್ರಿಯವಾಗಿದೆ. ಈ ಯೋಜನೆಯಡಿಯಲ್ಲಿ ತಾರತಮ್ಯ ಎಸಗಲಾಗಿದೆ, ತನಗೆ ಮತ್ತು ತನ್ನ ಸಮುದಾಯದವರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಿಲ್ಲ ಎಂದು ಅಶ್ವಿನಿ ಆರೋಪಿಸಿದ್ದರು. ಅಶ್ವಿನಿ ಪ್ರಶ್ನಿಸಿದ್ದ ಈ ವಿಡಿಯೊ ವೈರಲ್ ಆಗಿತ್ತು.

ಇದು ಸರ್ಕಾರದ ಗಮನಕ್ಕೆ ಬಂದ ನಂತರ, ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಅವರಿಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿ ಕೂಡಾ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಇದರ ಜೊತೆಗೆ ಅಶ್ವಿನಿಯವರೊಂದಿಗೆ ಊಟ ನಿರಾಕರಿಸಲ್ಪಟ್ಟ ನರಿಕುರವರ್‌‌ ಸಮುದಾಯದ ಹಲವು ಜನರು ಭಾಗವಹಿಸಿದ್ದರು

ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...