Homeಮುಖಪುಟದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ಇತ್ತೀಚೆಗೆ ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಗುರುವಾರದಂದು ಭೇಟಿ ಮಾಡಿದ್ದಾರೆ. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದರು.

ನರಿಕುರವರ್ ಮತ್ತು ಇರುಳರ್‌ ಸಮುದಾಯ ವಾಸಿಸುವ ಮಾಮಲ್ಲಪುರಂ ಬಳಿಯ ಪೂಂಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್‌ 81 ಜನರಿಗೆ ವಸತಿ ಹಕ್ಕುಪತ್ರ ವಿತರಿಸಿದ್ದಾರೆ. 10 ಲಕ್ಷ ವೆಚ್ಚದ ಅಂಗನವಾಡಿ ಮತ್ತು ಪಂಚಾಯತ್ ಯೂನಿಯನ್ ಶಾಲೆಗಳನ್ನು ನಿರ್ಮಿಸಲು ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳ ಆದೇಶಗಳನ್ನು ಸಹ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಈ ವೇಳೆ ಮಾತನಾಡಿದ ಅಶ್ವಿನಿ ಅವರು, “ಮುಖ್ಯಮಂತ್ರಿಗಳಿಗೆ ಧನ್ಯವಾದಗಳು, ನಾವು ಈಗ ಮತದಾರರ ಗುರುತಿನ ಚೀಟಿ, ಆಧಾರ್ ಮತ್ತು ಕುಟುಂಬ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದೇವೆ. ಇದು ಕನಸಿನಂತೆ ಭಾಸವಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಪಡಿತರ ಚೀಟಿ ಪಡೆಯಲು ನಾಲ್ಕು ತಿಂಗಳು ಹರಸಾಹಸ ಪಡಬೇಕಾದ ನಮಗೆ ನೇರವಾಗಿ ಅವರಿಂದಲೇ ಎರಡೇ ದಿನದಲ್ಲಿ ಕಾರ್ಡ್ ಸಿಕ್ಕಿದೆ. ನಾನು ಸಚಿವ ಶೇಖರ್ ಬಾಬು ಅವರನ್ನು ಭೇಟಿಯಾದಾಗ, ನಮ್ಮನ್ನು ಇಲ್ಲಿಂದ ಹೊರಹಾಕುತ್ತಾರೋ ಎಂಬ ಭಯದಲ್ಲಿ ಇಲ್ಲಿ ಪ್ರತಿದಿನ ನಾವು ವಾಸಿಸುತ್ತಿದ್ದೇವೆ ಎಂದು ಹೇಳಿದ್ದೆ. ಈಗ ನಮ್ಮಲ್ಲಿ ಪತ್ರಗಳಿವೆ, ನಮಗೆ ಆ ಭಯವಿಲ್ಲ” ಎಂದು ಹೇಳಿದ್ದಾರೆ.

ಚೆಂಗಲ್‌ಪೇಟ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿಗಳು ನರಿಕುರವರ್ ಮತ್ತು ಇರುಳ ಬುಡಕಟ್ಟು ಜನಾಂಗದ 282 ಜನರಿಗೆ 4.53 ಕೋಟಿ ರೂಪಾಯಿಗಳ ಸರ್ಕಾರದ ಕಲ್ಯಾಣ ಯೋಜನೆಯನ್ನು ಘೋಷಿಸಿದ್ದಾರೆ. ಜೊತೆಗೆ ಪುರಸಭೆಯ ಸಾರ್ವಜನಿಕ ನಿಧಿ ಯೋಜನೆಯಡಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಆದೇಶಿಸಿದರು.

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಚೆಂಗಲ್‌ಪೇಟೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 282 ಜನರಿಗೆ ವಸತಿ ಬಾಂಡ್‌ಗಳು, ಕುಟುಂಬ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಜಾತಿ ಪ್ರಮಾಣಪತ್ರಗಳು, ಕಲ್ಯಾಣ ಮಂಡಳಿ ಕಾರ್ಡ್‌ಗಳು, ತರಬೇತಿ ಆದೇಶಗಳು ಮತ್ತು ಬ್ಯಾಂಕ್ ಸಾಲವನ್ನು ಸಿಎಂ ವಿತರಿಸಿದ್ದಾರೆ. ಇಷ್ಟೇ ಅಲ್ಲದೆ, ನಗರಾಭಿವೃದ್ಧಿ ಯೋಜನೆ ಪ್ರಸ್ತಾವನೆಗೂ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಜಿಲ್ಲೆಯಲ್ಲಿ ಅಂಗನವಾಡಿ ಹಾಗೂ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಆದೇಶ ಹೊರಡಿಸಿದ್ದಾರೆ.

81 ಮಂದಿಗೆ 3.52 ಕೋಟಿ ರೂ.ವೆಚ್ಚದ ವಸತಿ ಪತ್ರ, ಆರು ಮಂದಿಗೆ ವೃದ್ಧಾಪ್ಯ ಕಲ್ಯಾಣ ಯೋಜನೆ, 21 ಮಂದಿಗೆ ಪಡಿತರ ಚೀಟಿ, 18 ಮಂದಿಗೆ ಮತದಾರರ ಗುರುತಿನ ಚೀಟಿ, ಇರುಳ ಸಮುದಾಯದ 88 ಮಂದಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಮತ್ತು 34 ನರಿಕುರವರ್ ಜನರು ತಮ್ಮ ಅತ್ಯಂತ ಹಿಂದುಳಿದ ವರ್ಗ (MBC) ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಹೆಚ್ಚುವರಿಯಾಗಿ, 12 ಜನರು ಮುದ್ರಾ ಯೋಜನೆಯಡಿಯಲ್ಲಿ ತಲಾ ರೂ 1 ಲಕ್ಷ ಸಾಲದ ಮೊತ್ತವನ್ನು ಮತ್ತು ಸಣ್ಣ ವ್ಯಾಪಾರ ಯೋಜನೆಯಡಿಯಲ್ಲಿ 33 ಜನರಿಗೆ ತಲಾ ರೂ 10,000 ಸಾಲದ ಮೊತ್ತವನ್ನು ನೀಡಲಾಗಿದೆ. ಪೂಂಚೇರಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತು ಇತರ ಅಗತ್ಯ ವಸ್ತುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಿಎಂ ಸ್ಟಾಲಿನ್ ಅವರು ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಅಶ್ವಿನಿ ಅವರಿಗೆ ಇತ್ತೀಚೆಗೆ ಮಾಮಲ್ಲಪುರಂ ದೇವಸ್ಥಾನದಲ್ಲಿ ಊಟ ನಿರಾಕರಿಸಲಾಗಿತ್ತು. ‘ಅನ್ನದಾನಂ’ ಬಡವರಿಗೆ ಉಚಿತ ದೇವಸ್ಥಾನದ ಊಟವನ್ನು ನೀಡುವ ಯೋಜನೆಯಾಗಿದೆ. ಡಿಎಂಕೆ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಸಿಇ ಇಲಾಖೆಯಿಂದ ಪ್ರಾರಂಭಿಸಲ್ಪಟ್ಟಿದ್ದು, ಪ್ರಸ್ತುತ ತಮಿಳುನಾಡಿನಾದ್ಯಂತ 754 ಸ್ಥಳಗಳಲ್ಲಿ ಸಕ್ರಿಯವಾಗಿದೆ. ಈ ಯೋಜನೆಯಡಿಯಲ್ಲಿ ತಾರತಮ್ಯ ಎಸಗಲಾಗಿದೆ, ತನಗೆ ಮತ್ತು ತನ್ನ ಸಮುದಾಯದವರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಿಲ್ಲ ಎಂದು ಅಶ್ವಿನಿ ಆರೋಪಿಸಿದ್ದರು. ಅಶ್ವಿನಿ ಪ್ರಶ್ನಿಸಿದ್ದ ಈ ವಿಡಿಯೊ ವೈರಲ್ ಆಗಿತ್ತು.

ಇದು ಸರ್ಕಾರದ ಗಮನಕ್ಕೆ ಬಂದ ನಂತರ, ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಅವರಿಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿ ಕೂಡಾ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಇದರ ಜೊತೆಗೆ ಅಶ್ವಿನಿಯವರೊಂದಿಗೆ ಊಟ ನಿರಾಕರಿಸಲ್ಪಟ್ಟ ನರಿಕುರವರ್‌‌ ಸಮುದಾಯದ ಹಲವು ಜನರು ಭಾಗವಹಿಸಿದ್ದರು

ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...