Homeಮುಖಪುಟದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ಇತ್ತೀಚೆಗೆ ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಗುರುವಾರದಂದು ಭೇಟಿ ಮಾಡಿದ್ದಾರೆ. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದರು.

ನರಿಕುರವರ್ ಮತ್ತು ಇರುಳರ್‌ ಸಮುದಾಯ ವಾಸಿಸುವ ಮಾಮಲ್ಲಪುರಂ ಬಳಿಯ ಪೂಂಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್‌ 81 ಜನರಿಗೆ ವಸತಿ ಹಕ್ಕುಪತ್ರ ವಿತರಿಸಿದ್ದಾರೆ. 10 ಲಕ್ಷ ವೆಚ್ಚದ ಅಂಗನವಾಡಿ ಮತ್ತು ಪಂಚಾಯತ್ ಯೂನಿಯನ್ ಶಾಲೆಗಳನ್ನು ನಿರ್ಮಿಸಲು ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳ ಆದೇಶಗಳನ್ನು ಸಹ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಈ ವೇಳೆ ಮಾತನಾಡಿದ ಅಶ್ವಿನಿ ಅವರು, “ಮುಖ್ಯಮಂತ್ರಿಗಳಿಗೆ ಧನ್ಯವಾದಗಳು, ನಾವು ಈಗ ಮತದಾರರ ಗುರುತಿನ ಚೀಟಿ, ಆಧಾರ್ ಮತ್ತು ಕುಟುಂಬ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದೇವೆ. ಇದು ಕನಸಿನಂತೆ ಭಾಸವಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಪಡಿತರ ಚೀಟಿ ಪಡೆಯಲು ನಾಲ್ಕು ತಿಂಗಳು ಹರಸಾಹಸ ಪಡಬೇಕಾದ ನಮಗೆ ನೇರವಾಗಿ ಅವರಿಂದಲೇ ಎರಡೇ ದಿನದಲ್ಲಿ ಕಾರ್ಡ್ ಸಿಕ್ಕಿದೆ. ನಾನು ಸಚಿವ ಶೇಖರ್ ಬಾಬು ಅವರನ್ನು ಭೇಟಿಯಾದಾಗ, ನಮ್ಮನ್ನು ಇಲ್ಲಿಂದ ಹೊರಹಾಕುತ್ತಾರೋ ಎಂಬ ಭಯದಲ್ಲಿ ಇಲ್ಲಿ ಪ್ರತಿದಿನ ನಾವು ವಾಸಿಸುತ್ತಿದ್ದೇವೆ ಎಂದು ಹೇಳಿದ್ದೆ. ಈಗ ನಮ್ಮಲ್ಲಿ ಪತ್ರಗಳಿವೆ, ನಮಗೆ ಆ ಭಯವಿಲ್ಲ” ಎಂದು ಹೇಳಿದ್ದಾರೆ.

ಚೆಂಗಲ್‌ಪೇಟ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿಗಳು ನರಿಕುರವರ್ ಮತ್ತು ಇರುಳ ಬುಡಕಟ್ಟು ಜನಾಂಗದ 282 ಜನರಿಗೆ 4.53 ಕೋಟಿ ರೂಪಾಯಿಗಳ ಸರ್ಕಾರದ ಕಲ್ಯಾಣ ಯೋಜನೆಯನ್ನು ಘೋಷಿಸಿದ್ದಾರೆ. ಜೊತೆಗೆ ಪುರಸಭೆಯ ಸಾರ್ವಜನಿಕ ನಿಧಿ ಯೋಜನೆಯಡಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಆದೇಶಿಸಿದರು.

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಚೆಂಗಲ್‌ಪೇಟೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 282 ಜನರಿಗೆ ವಸತಿ ಬಾಂಡ್‌ಗಳು, ಕುಟುಂಬ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಜಾತಿ ಪ್ರಮಾಣಪತ್ರಗಳು, ಕಲ್ಯಾಣ ಮಂಡಳಿ ಕಾರ್ಡ್‌ಗಳು, ತರಬೇತಿ ಆದೇಶಗಳು ಮತ್ತು ಬ್ಯಾಂಕ್ ಸಾಲವನ್ನು ಸಿಎಂ ವಿತರಿಸಿದ್ದಾರೆ. ಇಷ್ಟೇ ಅಲ್ಲದೆ, ನಗರಾಭಿವೃದ್ಧಿ ಯೋಜನೆ ಪ್ರಸ್ತಾವನೆಗೂ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಜಿಲ್ಲೆಯಲ್ಲಿ ಅಂಗನವಾಡಿ ಹಾಗೂ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಆದೇಶ ಹೊರಡಿಸಿದ್ದಾರೆ.

81 ಮಂದಿಗೆ 3.52 ಕೋಟಿ ರೂ.ವೆಚ್ಚದ ವಸತಿ ಪತ್ರ, ಆರು ಮಂದಿಗೆ ವೃದ್ಧಾಪ್ಯ ಕಲ್ಯಾಣ ಯೋಜನೆ, 21 ಮಂದಿಗೆ ಪಡಿತರ ಚೀಟಿ, 18 ಮಂದಿಗೆ ಮತದಾರರ ಗುರುತಿನ ಚೀಟಿ, ಇರುಳ ಸಮುದಾಯದ 88 ಮಂದಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಮತ್ತು 34 ನರಿಕುರವರ್ ಜನರು ತಮ್ಮ ಅತ್ಯಂತ ಹಿಂದುಳಿದ ವರ್ಗ (MBC) ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಹೆಚ್ಚುವರಿಯಾಗಿ, 12 ಜನರು ಮುದ್ರಾ ಯೋಜನೆಯಡಿಯಲ್ಲಿ ತಲಾ ರೂ 1 ಲಕ್ಷ ಸಾಲದ ಮೊತ್ತವನ್ನು ಮತ್ತು ಸಣ್ಣ ವ್ಯಾಪಾರ ಯೋಜನೆಯಡಿಯಲ್ಲಿ 33 ಜನರಿಗೆ ತಲಾ ರೂ 10,000 ಸಾಲದ ಮೊತ್ತವನ್ನು ನೀಡಲಾಗಿದೆ. ಪೂಂಚೇರಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತು ಇತರ ಅಗತ್ಯ ವಸ್ತುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಿಎಂ ಸ್ಟಾಲಿನ್ ಅವರು ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಅಶ್ವಿನಿ ಅವರಿಗೆ ಇತ್ತೀಚೆಗೆ ಮಾಮಲ್ಲಪುರಂ ದೇವಸ್ಥಾನದಲ್ಲಿ ಊಟ ನಿರಾಕರಿಸಲಾಗಿತ್ತು. ‘ಅನ್ನದಾನಂ’ ಬಡವರಿಗೆ ಉಚಿತ ದೇವಸ್ಥಾನದ ಊಟವನ್ನು ನೀಡುವ ಯೋಜನೆಯಾಗಿದೆ. ಡಿಎಂಕೆ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಸಿಇ ಇಲಾಖೆಯಿಂದ ಪ್ರಾರಂಭಿಸಲ್ಪಟ್ಟಿದ್ದು, ಪ್ರಸ್ತುತ ತಮಿಳುನಾಡಿನಾದ್ಯಂತ 754 ಸ್ಥಳಗಳಲ್ಲಿ ಸಕ್ರಿಯವಾಗಿದೆ. ಈ ಯೋಜನೆಯಡಿಯಲ್ಲಿ ತಾರತಮ್ಯ ಎಸಗಲಾಗಿದೆ, ತನಗೆ ಮತ್ತು ತನ್ನ ಸಮುದಾಯದವರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಿಲ್ಲ ಎಂದು ಅಶ್ವಿನಿ ಆರೋಪಿಸಿದ್ದರು. ಅಶ್ವಿನಿ ಪ್ರಶ್ನಿಸಿದ್ದ ಈ ವಿಡಿಯೊ ವೈರಲ್ ಆಗಿತ್ತು.

ಇದು ಸರ್ಕಾರದ ಗಮನಕ್ಕೆ ಬಂದ ನಂತರ, ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಅವರಿಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿ ಕೂಡಾ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಇದರ ಜೊತೆಗೆ ಅಶ್ವಿನಿಯವರೊಂದಿಗೆ ಊಟ ನಿರಾಕರಿಸಲ್ಪಟ್ಟ ನರಿಕುರವರ್‌‌ ಸಮುದಾಯದ ಹಲವು ಜನರು ಭಾಗವಹಿಸಿದ್ದರು

ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...