Homeಮುಖಪುಟದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ಇತ್ತೀಚೆಗೆ ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಗುರುವಾರದಂದು ಭೇಟಿ ಮಾಡಿದ್ದಾರೆ. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದರು.

ನರಿಕುರವರ್ ಮತ್ತು ಇರುಳರ್‌ ಸಮುದಾಯ ವಾಸಿಸುವ ಮಾಮಲ್ಲಪುರಂ ಬಳಿಯ ಪೂಂಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್‌ 81 ಜನರಿಗೆ ವಸತಿ ಹಕ್ಕುಪತ್ರ ವಿತರಿಸಿದ್ದಾರೆ. 10 ಲಕ್ಷ ವೆಚ್ಚದ ಅಂಗನವಾಡಿ ಮತ್ತು ಪಂಚಾಯತ್ ಯೂನಿಯನ್ ಶಾಲೆಗಳನ್ನು ನಿರ್ಮಿಸಲು ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳ ಆದೇಶಗಳನ್ನು ಸಹ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಈ ವೇಳೆ ಮಾತನಾಡಿದ ಅಶ್ವಿನಿ ಅವರು, “ಮುಖ್ಯಮಂತ್ರಿಗಳಿಗೆ ಧನ್ಯವಾದಗಳು, ನಾವು ಈಗ ಮತದಾರರ ಗುರುತಿನ ಚೀಟಿ, ಆಧಾರ್ ಮತ್ತು ಕುಟುಂಬ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದೇವೆ. ಇದು ಕನಸಿನಂತೆ ಭಾಸವಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಪಡಿತರ ಚೀಟಿ ಪಡೆಯಲು ನಾಲ್ಕು ತಿಂಗಳು ಹರಸಾಹಸ ಪಡಬೇಕಾದ ನಮಗೆ ನೇರವಾಗಿ ಅವರಿಂದಲೇ ಎರಡೇ ದಿನದಲ್ಲಿ ಕಾರ್ಡ್ ಸಿಕ್ಕಿದೆ. ನಾನು ಸಚಿವ ಶೇಖರ್ ಬಾಬು ಅವರನ್ನು ಭೇಟಿಯಾದಾಗ, ನಮ್ಮನ್ನು ಇಲ್ಲಿಂದ ಹೊರಹಾಕುತ್ತಾರೋ ಎಂಬ ಭಯದಲ್ಲಿ ಇಲ್ಲಿ ಪ್ರತಿದಿನ ನಾವು ವಾಸಿಸುತ್ತಿದ್ದೇವೆ ಎಂದು ಹೇಳಿದ್ದೆ. ಈಗ ನಮ್ಮಲ್ಲಿ ಪತ್ರಗಳಿವೆ, ನಮಗೆ ಆ ಭಯವಿಲ್ಲ” ಎಂದು ಹೇಳಿದ್ದಾರೆ.

ಚೆಂಗಲ್‌ಪೇಟ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿಗಳು ನರಿಕುರವರ್ ಮತ್ತು ಇರುಳ ಬುಡಕಟ್ಟು ಜನಾಂಗದ 282 ಜನರಿಗೆ 4.53 ಕೋಟಿ ರೂಪಾಯಿಗಳ ಸರ್ಕಾರದ ಕಲ್ಯಾಣ ಯೋಜನೆಯನ್ನು ಘೋಷಿಸಿದ್ದಾರೆ. ಜೊತೆಗೆ ಪುರಸಭೆಯ ಸಾರ್ವಜನಿಕ ನಿಧಿ ಯೋಜನೆಯಡಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಆದೇಶಿಸಿದರು.

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಚೆಂಗಲ್‌ಪೇಟೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 282 ಜನರಿಗೆ ವಸತಿ ಬಾಂಡ್‌ಗಳು, ಕುಟುಂಬ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಜಾತಿ ಪ್ರಮಾಣಪತ್ರಗಳು, ಕಲ್ಯಾಣ ಮಂಡಳಿ ಕಾರ್ಡ್‌ಗಳು, ತರಬೇತಿ ಆದೇಶಗಳು ಮತ್ತು ಬ್ಯಾಂಕ್ ಸಾಲವನ್ನು ಸಿಎಂ ವಿತರಿಸಿದ್ದಾರೆ. ಇಷ್ಟೇ ಅಲ್ಲದೆ, ನಗರಾಭಿವೃದ್ಧಿ ಯೋಜನೆ ಪ್ರಸ್ತಾವನೆಗೂ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಜಿಲ್ಲೆಯಲ್ಲಿ ಅಂಗನವಾಡಿ ಹಾಗೂ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಆದೇಶ ಹೊರಡಿಸಿದ್ದಾರೆ.

81 ಮಂದಿಗೆ 3.52 ಕೋಟಿ ರೂ.ವೆಚ್ಚದ ವಸತಿ ಪತ್ರ, ಆರು ಮಂದಿಗೆ ವೃದ್ಧಾಪ್ಯ ಕಲ್ಯಾಣ ಯೋಜನೆ, 21 ಮಂದಿಗೆ ಪಡಿತರ ಚೀಟಿ, 18 ಮಂದಿಗೆ ಮತದಾರರ ಗುರುತಿನ ಚೀಟಿ, ಇರುಳ ಸಮುದಾಯದ 88 ಮಂದಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಮತ್ತು 34 ನರಿಕುರವರ್ ಜನರು ತಮ್ಮ ಅತ್ಯಂತ ಹಿಂದುಳಿದ ವರ್ಗ (MBC) ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಹೆಚ್ಚುವರಿಯಾಗಿ, 12 ಜನರು ಮುದ್ರಾ ಯೋಜನೆಯಡಿಯಲ್ಲಿ ತಲಾ ರೂ 1 ಲಕ್ಷ ಸಾಲದ ಮೊತ್ತವನ್ನು ಮತ್ತು ಸಣ್ಣ ವ್ಯಾಪಾರ ಯೋಜನೆಯಡಿಯಲ್ಲಿ 33 ಜನರಿಗೆ ತಲಾ ರೂ 10,000 ಸಾಲದ ಮೊತ್ತವನ್ನು ನೀಡಲಾಗಿದೆ. ಪೂಂಚೇರಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತು ಇತರ ಅಗತ್ಯ ವಸ್ತುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಿಎಂ ಸ್ಟಾಲಿನ್ ಅವರು ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಅಶ್ವಿನಿ ಅವರಿಗೆ ಇತ್ತೀಚೆಗೆ ಮಾಮಲ್ಲಪುರಂ ದೇವಸ್ಥಾನದಲ್ಲಿ ಊಟ ನಿರಾಕರಿಸಲಾಗಿತ್ತು. ‘ಅನ್ನದಾನಂ’ ಬಡವರಿಗೆ ಉಚಿತ ದೇವಸ್ಥಾನದ ಊಟವನ್ನು ನೀಡುವ ಯೋಜನೆಯಾಗಿದೆ. ಡಿಎಂಕೆ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಸಿಇ ಇಲಾಖೆಯಿಂದ ಪ್ರಾರಂಭಿಸಲ್ಪಟ್ಟಿದ್ದು, ಪ್ರಸ್ತುತ ತಮಿಳುನಾಡಿನಾದ್ಯಂತ 754 ಸ್ಥಳಗಳಲ್ಲಿ ಸಕ್ರಿಯವಾಗಿದೆ. ಈ ಯೋಜನೆಯಡಿಯಲ್ಲಿ ತಾರತಮ್ಯ ಎಸಗಲಾಗಿದೆ, ತನಗೆ ಮತ್ತು ತನ್ನ ಸಮುದಾಯದವರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಿಲ್ಲ ಎಂದು ಅಶ್ವಿನಿ ಆರೋಪಿಸಿದ್ದರು. ಅಶ್ವಿನಿ ಪ್ರಶ್ನಿಸಿದ್ದ ಈ ವಿಡಿಯೊ ವೈರಲ್ ಆಗಿತ್ತು.

ಇದು ಸರ್ಕಾರದ ಗಮನಕ್ಕೆ ಬಂದ ನಂತರ, ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಅವರಿಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿ ಕೂಡಾ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಇದರ ಜೊತೆಗೆ ಅಶ್ವಿನಿಯವರೊಂದಿಗೆ ಊಟ ನಿರಾಕರಿಸಲ್ಪಟ್ಟ ನರಿಕುರವರ್‌‌ ಸಮುದಾಯದ ಹಲವು ಜನರು ಭಾಗವಹಿಸಿದ್ದರು

ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....