Homeಮುಖಪುಟಕೇರಳ 'ಕಡು ಬಡತನ ಮುಕ್ತ' ರಾಜ್ಯ : ಅಧಿಕೃತವಾಗಿ ಘೋಷಿಸಿದ ಸಿಎಂ ಪಿಣರಾಯಿ ವಿಜಯನ್

ಕೇರಳ ‘ಕಡು ಬಡತನ ಮುಕ್ತ’ ರಾಜ್ಯ : ಅಧಿಕೃತವಾಗಿ ಘೋಷಿಸಿದ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಕೇರಳವನ್ನು ದೇಶದ ಮೊದಲ ‘ಕಡು ಬಡತನ ಮುಕ್ತ ರಾಜ್ಯ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕೃತವಾಗಿ ಘೋಷಿಸಿದ್ದಾರೆ.

ಕೇರಳದ ರಾಜ್ಯೋತ್ಸವ (ಕೇರಳ ಪಿರವಿ) ದಿನವಾದ ಇಂದು (ನವೆಂಬರ್ 1, ಶನಿವಾರ) ನಡೆದ ವಿಧಾನಸಭೆಯ ವಿಶೇಷ ಕಲಾಪದಲ್ಲಿ ಸಿಎಂ ಈ ಘೋಷಣೆ ಮಾಡಿದ್ದಾರೆ.

ಇದೇ ಘೋಷಣೆಯನ್ನು ಇಂದು ಸಂಜೆ 5 ಗಂಟೆಯಿಂದ ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲೂ ಸಿಎಂ ಮಾಡಲಿದ್ದಾರೆ. ಸಂಪುಟದ ಎಲ್ಲಾ ಸಚಿವರು, ಸ್ಥಳೀಯ ಜನ ಪ್ರತಿನಿಧಿಗಳು, ಸಿನಿಮಾ ನಟರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರತಿಪಕ್ಷ ನಾಯಕನಿಗೂ ಆಹ್ವಾನ ನೀಡಲಾಗಿದೆ.

ಕಡು ಬಡತನ ಮುಕ್ತ ಎಂದರೇನು? 

‘ಕಡು ಬಡತನ’ ಎಂದರೆ ವ್ಯಕ್ತಿಗಳು ಅಥವಾ ಕುಟುಂಬಗಳು ಆಹಾರ, ವಸತಿ, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಬಟ್ಟೆಯಂತಹ ಮೂಲಭೂತ ಮಾನವ ಅಗತ್ಯಗಳನ್ನು ಕೂಡ ಪಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿರುವುದಾಗಿದೆ.

ವಿಶ್ವ ಬ್ಯಾಂಕ್ ಕಡು ಬಡತನವನ್ನು ಒಬ್ಬ ವ್ಯಕ್ತಿ ದಿನಕ್ಕೆ 2.15 ಡಾಲರ್‌ಗಿಂತ ಕಡಿಮೆ, ಅಂದರೆ ಸರಿಸುಮಾರು ರೂ. 180ರಷ್ಟು ಹಣದಲ್ಲಿ ಬದುಕುವುದನ್ನು ವ್ಯಾಖ್ಯಾನಿಸುತ್ತದೆ. ಭಾರತದ ಸ್ವಂತ ಚೌಕಟ್ಟು – ನೀತಿ ಆಯೋಗ ಅಭಿವೃದ್ಧಿಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (ಎಂಪಿಐ) ಈ ಕುರಿತು ವಿಶಾಲವಾದ ಚಿತ್ರಣವನ್ನು ನೀಡುತ್ತದೆ. ಇದು ಬಡತನವನ್ನು ಕೇವಲ ಆದಾಯದಿಂದ ಮಾತ್ರವಲ್ಲದೆ ಪೌಷ್ಠಿಕಾಂಶ, ವಸತಿ, ನೈರ್ಮಲ್ಯ, ಶಿಕ್ಷಣ ಮತ್ತು ಅಗತ್ಯ ಸೇವೆಗಳ ಪಡೆಯುವಿಕೆಯ ಸೂಚ್ಯಂಕದ ಮೂಲಕವೂ ಅಳೆಯುತ್ತದೆ.

2023ರ ನೀತಿ ಆಯೋಗದ ಎಂಪಿಐ ವರದಿಯ ಪ್ರಕಾರ, ಕೇರಳವು ಈಗಾಗಲೇ ದೇಶದಲ್ಲಿ ಬಹುಆಯಾಮದ ಬಡ ನಾಗರಿಕರ ಅತ್ಯಂತ ಕಡಿಮೆ ಪಾಲನ್ನು ಹೊಂದಿದೆ. ಅದರ ಜನಸಂಖ್ಯೆಯ ಕೇವಲ 0.55 ಪ್ರತಿಶತವನ್ನು ಬಹುಆಯಾಮದ ಬಡವರು ಎಂದು ವರ್ಗೀಕರಿಸಲಾಗಿದೆ, ನಂತರದ ಸ್ಥಾನಗಳಲ್ಲಿ ಗೋವಾ (ಶೇಕಡಾ 0.84) ಮತ್ತು ಪುದುಚೇರಿ (ಶೇಕಡಾ 0.85) ಇವೆ.

ಕೇರಳ ಸಾಧಿಸಿದ್ದು ಹೇಗೆ?

ಕೇರಳದ ಕಡು ಬಡತನ ನಿರ್ಮೂಲನೆ ಅಭಿಯಾನವು ಸಿಎಂ ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯಲ್ಲಿ, ಅಂದರೆ 2021ರಲ್ಲಿ ಕಡು ಬಡತನ ನಿರ್ಮೂಲನಾ ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಪ್ರಾರಂಭವಾಯಿತು. ವಿವರವಾದ ಸ್ಥಳೀಯ ಸಮೀಕ್ಷೆಗಳ ಮೂಲಕ ಕಡು ಬಡತನದಲ್ಲಿ ವಾಸಿಸುವ ಪ್ರತಿಯೊಂದು ಮನೆಯನ್ನು ಗುರುತಿಸುವುದು. ನಂತರ ಏಕರೂಪದ ನೀತಿಯ ಬದಲಿಗೆ ಪ್ರತಿ ಕುಟುಂಬಕ್ಕೆ ಕಸ್ಟಮೈಸ್ ಮಾಡಿದ ಪರಿಹಾರಗಳನ್ನು ರೂಪಿಸುವುದು ಎಂಬ ಸ್ಪಷ್ಟ ಉದ್ದೇಶವನ್ನು ಈ ಯೋಜನೆಯ ಮೂಲಕ ಹೊಂದಲಾಗಿತ್ತು.

ಮೂರರಿಂದ ನಾಲ್ಕು ತಿಂಗಳುಗಳಲ್ಲಿ, ಕುಟುಂಬಶ್ರೀ ಕಾರ್ಯಕರ್ತರು, ಆಶಾ ಆರೋಗ್ಯ ಕಾರ್ಯಕರ್ತರು ಮತ್ತು ಸ್ಥಳೀಯ ಸರ್ಕಾರಿ ಪ್ರತಿನಿಧಿಗಳು ರಾಜ್ಯದಾದ್ಯಂತ ಮನೆ-ಮನೆಗೆ ತೆರಳಿ ಸಮೀಕ್ಷೆಗಳನ್ನು ನಡೆಸಿದರು. ಅವರ ಸಮಗ್ರ ಪ್ರಯತ್ನಗಳು 1,30,009 ವ್ಯಕ್ತಿಗಳನ್ನು ಒಳಗೊಂಡ 64,006 ಕುಟುಂಬಗಳನ್ನು ಕಡು ಬಡತನದಲ್ಲಿ ವಾಸಿಸುತ್ತಿದ್ದಾರೆ ಎಂದು ಗುರುತಿಸಿತ್ತು.

ನಂತರ, ರಾಜ್ಯದ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳು ಪ್ರತಿ ಕುಟುಂಬದ ಅಗತ್ಯಗಳಿಗೆ ಅನುಗುಣವಾಗಿ ಸೂಕ್ಷ್ಮ ಮಟ್ಟದ ಪರಿಹಾರಗಳನ್ನು ವಿನ್ಯಾಸಗೊಳಿಸಿತ್ತು. ಇವುಗಳಲ್ಲಿ ವಸತಿ ಬೆಂಬಲ, ವೈದ್ಯಕೀಯ ಚಿಕಿತ್ಸೆ, ಜೀವನೋಪಾಯ ಉಪಕ್ರಮಗಳು ಮತ್ತು ಕಲ್ಯಾಣ ನೆರವು ಸೇರಿವೆ. ಕುಟುಂಬಶ್ರೀ ಚಳುವಳಿಯು ಕೇರಳದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯ ಮೂಲಾಧಾರವಾಗಿ ಹೊರಹೊಮ್ಮಿದೆ. 1998ರಲ್ಲಿ ಬಡತನ ನಿರ್ಮೂಲನೆ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿ ಪ್ರಾರಂಭವಾದ ಕುಟುಂಬಶ್ರೀ, 45 ಲಕ್ಷಕ್ಕೂ ಹೆಚ್ಚು ಮಹಿಳೆಯರನ್ನು ಒಳಗೊಂಡ ವಿಶ್ವದ ಅತಿದೊಡ್ಡ ಮಹಿಳಾ ಸಾಮೂಹಿಕ ಸಂಘಟನೆಗಳಲ್ಲಿ ಒಂದಾಗಿ ಬೆಳೆದಿದೆ.

ಆಡಳಿತದ ವಿಕೇಂದ್ರೀಕರಣ

ಕೇರಳದ ಯಶಸ್ಸಿನ ಹಿಂದಿನ ಪ್ರಮುಖ ಅಂಶವೆಂದರೆ, ಅದರ ವಿಕೇಂದ್ರೀಕೃತ ಆಡಳಿತ ಮಾದರಿ. 1990ರ ದಶಕದಿಂದಲೂ, ರಾಜ್ಯವು ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳಿಗೆ ಅಭಿವೃದ್ಧಿ ಆದ್ಯತೆಗಳನ್ನು ಗುರುತಿಸಲು, ಸಂಪನ್ಮೂಲಗಳನ್ನು ಹಂಚಿಕೆ ಮಾಡಲು ಮತ್ತು ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರ ನೀಡಿದೆ. ಪಂಚಾಯತ್‌ಗಳು ಮತ್ತು ಪುರಸಭೆಗಳು ಸ್ಥಳೀಯ ಅಗತ್ಯಗಳನ್ನು ಪರಿಹರಿಸುವಲ್ಲಿ ನೇರ ಪಾತ್ರವನ್ನು ವಹಿಸಿವೆ, ಕಲ್ಯಾಣ ಯೋಜನೆಗಳು ಸಮಾಜದ ಪ್ರತಿಯೊಂದು ವರ್ಗವನ್ನು ತಲುಪುವುದನ್ನು ಇವುಗಳು ಖಚಿತಪಡಿಸುತ್ತವೆ.

ಈ ತಳಮಟ್ಟದ ವಿಧಾನವು ಅಧಿಕಾರಶಾಹಿ ವಿಳಂಬವನ್ನು ಕಡಿಮೆ ಮಾಡುವುದಲ್ಲದೆ, ಆಡಳಿತವನ್ನು ಹೆಚ್ಚು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿಸಿದೆ. ಸ್ಥಳೀಯ ಸಮುದಾಯಗಳು ನಿರ್ಧಾರ ತೆಗೆದುಕೊಳ್ಳುವಲ್ಲಿ ಸಕ್ರಿಯವಾಗಿ ಕೊಡುಗೆ ನೀಡುವ ಕೇರಳದ ಭಾಗವಹಿಸುವಿಕೆಯ ಯೋಜನಾ ವ್ಯವಸ್ಥೆಯು ಬಡತನ ನಿರ್ಮೂಲನೆಯನ್ನು ಗುರಿಯಾಗಿರಿಸಿಕೊಂಡಿದೆ ಮತ್ತು ಸುಸ್ಥಿರವಾಗಿದೆ ಎಂದು ತಜ್ಞರು ಹೇಳುತ್ತಾರೆ.

ಕೇರಳದ ಸಮಗ್ರ ಆಡಳಿತ ಮಾದರಿ

ತಜ್ಞರು ಕೇರಳದ ಯಶಸ್ಸಿಗೆ ಅದರ ಬಲವಾದ ವಿಕೇಂದ್ರೀಕೃತ ಆಡಳಿತ ಮತ್ತು ಸಮುದಾಯದ ಭಾಗವಹಿಸುವಿಕೆ ಕಾರಣ ಎಂದು ಹೇಳುತ್ತಾರೆ. ಸ್ಥಳೀಯ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಮೂಲಕ ಮತ್ತು ಕುಟುಂಬಶ್ರೀಯಂತಹ ಕಾರ್ಯಕ್ರಮಗಳನ್ನು ಸಂಯೋಜಿಸುವ ಮೂಲಕ, ಪ್ರತಿಯೊಂದು ಯೋಜನೆಯು ಅದರ ಉದ್ದೇಶಿತ ಫಲಾನುಭವಿಗಳನ್ನು ತಲುಪುವಂತೆ ಸರ್ಕಾರ ನೋಡಿಕೊಂಡಿದೆ. ಸರ್ಕಾರಿ ಇಲಾಖೆಗಳು, ಮಹಿಳಾ ನೇತೃತ್ವದ ಸಾಮೂಹಿಕ ಸಂಸ್ಥೆಗಳು ಮತ್ತು ಸ್ಥಳೀಯ ಪ್ರತಿನಿಧಿಗಳ ನಡುವಿನ ಸಹಯೋಗವು ಈ ಉಪಕ್ರಮವನ್ನು ಆಳವಾಗಿ ಜನ-ಕೇಂದ್ರಿತ ಮತ್ತು ಸುಸ್ಥಿರವಾಗಿಸಿದೆ ಎನ್ನಲಾಗುತ್ತಿದೆ.

ಮಹಿಳಾ ಸಿಬ್ಬಂದಿ ‘ಮುಟ್ಟು’ ಸಾಬೀತಿಗೆ ‘ಸ್ಯಾನಿಟರಿ ಪ್ಯಾಡ್‌’ನ ಫೋಟೋ ಕೇಳಿದ ಮೇಲ್ವಿಚಾರಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...