Homeಕರ್ನಾಟಕಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆಯನ್ನು ಆರೆಸ್ಸೆಸ್‌‌ನವರು ಗುರುತು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದರು

- Advertisement -
- Advertisement -

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ನಿಧಿ ಸಂಗ್ರಹಿಸಲು ನಿಮಗೆ ಯಾರಾದರೂ ಬೆದರಿಕೆ ಹಾಕಿದ್ದರೆ ಅವರ ವಿರುದ್ಧ ದೂರು ನೀಡಿ. ಸರ್ಕಾರ ಮತ್ತು ಸಂಘ ಪರಿವಾರ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಜೆಡಿಎಸ್ ನಾಯಕ ಹೆಚ್‌‌.ಡಿ. ಕುಮಾರಸ್ವಾಮಿಗೆ ಹೇಳಿದ್ದಾರೆ.

“ತಮ್ಮ ತಂದೆಯವರು ಹಿಂದೆ ಮುಖ್ಯಮಂತ್ರಿಗಳಾಗಿದ್ದವರು, ದೇಶದ ಪ್ರಧಾನ ಮಂತ್ರಿಗಳಾಗಿದ್ದವರು, ಜೊತೆಗೆ  ವಿಶೇಷವಾಗಿ ದೈವಭಕ್ತಿ ಹೊಂದಿರುವ ಕುಟುಂಬವಾಗಿದೆ. ನೀವು ಎಲ್ಲಾ ಸಂದರ್ಭದಲ್ಲಿ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗುತ್ತೀರಿ, ಮಠಮಾನ್ಯಗಳಿಗೆ ಹೋಗುತ್ತೀರಿ, ಹೋಮ ಹವನ ಮಾಡಿಸುತ್ತೀರಿ. ಇಲ್ಲಿ ಭಕ್ತಿ ಸಮರ್ಪಣೆ ಮಾಡಲು ಜಾತಿ-ಧರ್ಮವಿಲ್ಲ, ನೀವು ಯಾಕೆ ಸಂಘಪರಿವಾರದ ಕಾರ್ಯಕರ್ತರನ್ನು ಹಿಟ್ಲರ್‌ಗೆ ಹೋಲಿಕೆ ಮಾಡುತ್ತೀರಿ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ: HDK ಕಿಡಿ

“ಇದುವರೆಗೂ ಎಲ್ಲಿಯೂ ಹಣವನ್ನು ಬಲವಂತವಾಗಿ ವಸೂಲಿ ಮಾಡಿರುವ ಉದಾಹರಣೆ ಇಲ್ಲ. ಯಾರು ಆ ರೀತಿ ನಕಲಿಯಾಗಿ ಮಾಡುತ್ತಾರೋ ಅವರ ಮೇಲೆ ಕೇಸು ನೀಡಿ. ಜನ ಸ್ವಯಂ ಪ್ರೇರಿತವಾಗಿ ರಾಮ ಮಂದಿರ ಆಗಬೇಕು ಎಂದು ಹಣ ನೀಡುತ್ತಿದ್ದಾರೆ. ಇದು ಕೇವಲ ಬಿಜೆಪಿಯ ಮಂದಿರವಲ್ಲ, ಇದು ರಾಷ್ಟ್ರೀಯ ಸ್ಮಾರಕ. ಇದಕ್ಕೆ ಉದಾರವಾಗಿ ದೇಣಿಗೆಯನ್ನು ಕೊಡುತ್ತಿದ್ದಾರೆ” ಎಂದು ರೇಣುಕಾಚಾರ್ಯ ಹೇಳಿದ್ದಾರೆ.

“ದೇಣಿಗೆ ನೀಡದ ಮನೆಯನ್ನು ಗುರುತು ಹಾಕುತ್ತಿದ್ದಾರೆ ಎಂದು ನೀವು ತೋರಿಸಿ, ಯಾರು ನಿಮಗೆ ಬೆದರಿಕೆ ಹಾಕಿದ್ದಾರೆ. ಕುಮಾರಸ್ವಾಮಿಯವರು ಯಾವುದೆ ವಿಷಯ ಇಲ್ಲದ್ದಕ್ಕೆ ವಿಷಯಾಂತರ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ: ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ಸೋಮವಾರದಂದು ಟ್ವೀಟರ್‌‌‌ನಲ್ಲಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಈ ಹೇಳಿಕೆಗೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಮತ್ತೇ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, “ದೇವೇಗೌಡರು, ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು. ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ. ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!” ಎಂದು ತಮ್ಮ ಕುಟುಂಬದ ದೈವಿಕ ಭಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಇದಕ್ಕೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...