Homeಕರ್ನಾಟಕಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

ಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

- Advertisement -
- Advertisement -

 

ಮಾಸಿಕ ಹತ್ತು ಸಾವಿರ ರೂಪಾಯಿ ಗೌರವಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವ ಹಿನ್ನೆಲೆ, ಜನವರಿ 7ರಿಂದ ನಡೆಸುತ್ತಿದ್ದ ಮುಷ್ಕರವನ್ನು ಆಶಾ ಕಾರ್ಯಕರ್ತೆಯರು ಶುಕ್ರವಾರ (ಜ.10) ಹಿಂಪಡೆದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಮಾಸಿಕ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ. ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಭರವಸೆ ನೀಡಿದ್ದಾರೆ.

ಪೋರ್ಟಲ್ ಸುಧಾರಣೆಗೆ ಸೂಚನೆ

ವಿವಿಧ ಮಾಹಿತಿಗಳನ್ನು ಪೋರ್ಟಲ್‌ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ, ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೌರವಧನ ನಿಲ್ಲಿಸದೆ ರಜೆ

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವಧನ ನಿಲ್ಲಿಸದೆ ರಜೆ ಮಂಜೂರು ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಬಜೆಟ್‌ಗೂ ಮುನ್ನ ಸಭೆ

ಆಯವ್ಯಯ ಅಥವಾ ಬಜೆಟ್ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಸಿಎಂ ಹೇಳಿದ್ದಾರೆ.

ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ

ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ

ಬುಧವಾರ (ಜ.8) ಪ್ರತಿಭಟನಾ ಸ್ಥಳಕ್ಕೆ ರಾಜ್ಯ ಸರ್ಕಾರದ ‌ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದರು. ರಾಜ್ಯ ಮತ್ತು ‌ಕೇಂದ್ರದ ಗೌರವಧನ ಸೇರಿಸಿ ಸದ್ಯಕ್ಕೆ 9,500 ರೂ. ಮುಂಗಡವಾಗಿ ನೀಡಲಾಗುವುದು. ಆದರೆ, ಆಶಾಗಳು ಮಾಡುವ ಕೆಲಸವು ಕಡಿಮೆಯಾದರೆ, ವ್ಯತ್ಯಾಸದ ಮೊತ್ತವನ್ನು ಈ 9,500ರೂ.ನಿಂದ ಕಡಿತ ಮಾಡಲಾಗುವುದು ಎಂದಿದ್ದರು.

ಆರೋಗ್ಯ ಸಚಿವರ ಈ ಹೇಳಿಕೆಯನ್ನು ಒಪ್ಪದ ಆಶಾಗಳು, 15 ಸಾವಿರ ರೂ. ನಿಶ್ಚಿತ ಗೌರವಧನ ನಿಗದಿ ಮಾಡುವುದು ಸೇರಿದಂತೆ ಇತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಮುಂದುವರೆಸಿದ್ದರು. ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ನಮ್ಮ ಅಹವಾಲು ಆಲಿಸಬೇಕು ಎಂದು ಒತ್ತಾಯಿಸಿದ್ದರು.

ಹೋರಾಟಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ, ಶುಕ್ರವಾರ (ಜ.10) ಮಧ್ಯಾಹ್ನ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಸೇರಿದಂತೆ ಪ್ರಮುಖರ ಜೊತೆ ಸಭೆ ನಡೆಸಿ ಭರವಸೆಗಳನ್ನು ನೀಡಿದರು. ಆ ಬಳಿಕ ಆಶಾಗಳು ತಮ್ಮ ಅನಿರ್ಧಿಷ್ಟಾವಧಿ ಮುಷ್ಕರ ಹಿಂಪಡೆದರು.

ಇದನ್ನೂ ಓದಿ : ಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...