Homeಕರ್ನಾಟಕವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್ ಆಸ್ತಿಗಳ ಒಡೆತನ, ಖಾತೆ ವರ್ಗಾವಣೆ ಸಂಬಂಧಿಸಿದ ಗೊಂದಲಗಳ ಪರಿಶೀಲನೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಡಿ.18) ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ವಕ್ಫ್ ಮಂಡಳಿಯು ರೈತರು, ಮಠ-ಮಂದಿರಗಳ ಆಸ್ತಿಯನ್ನು ಕಬಳಿಸುತ್ತಿದೆ ಎಂದು ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಿದ ಸಿಎಂ, “ರೈತರಿಗೆ ಮಂಜೂರಾದ ಜಮೀನು, ಮಠ-ಮಂದಿರಗಳ ಆಸ್ತಿ ಮತ್ತು ರುದ್ರಭೂಮಿಗಳ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸುವುದಿಲ್ಲ. ಇದರ ಹೊರತಾಗಿಯೂ ಗೊಂದಲಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಇನಾಂ ರದ್ದತಿ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾಗಿರುವ ಯಾವುದೇ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಲು ಅವಕಾಶ ನೀಡುವುದಿಲ್ಲ. ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳ ಮೇಲಿನ ಹಕ್ಕನ್ನೂ ತ್ಯಜಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ವಕ್ಫ್ ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಅವರ ಸಲಹೆಯಂತೆ ವಕ್ಫ್ ಆಸ್ತಿಯಲ್ಲಿರುವ ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳಿಗೆ ರಕ್ಷಣೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾವುದೇ ಖಾಸಗಿ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿದ್ದರೆ, ಮಂಜೂರಾದ ಜಮೀನುಗಳ ಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದರೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಕ್ಕು ಮಂಡನೆ ಬಾಕಿ ಉಳಿದಿದ್ದರೆ ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸಮಿತಿಯು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.

ವಕ್ಫ್ ಅದಾಲತ್ ಅನ್ನು ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು- ಸಚಿವ ಝಮೀರ್ ಅಹ್ಮದ್

ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳ ರಕ್ಷಣೆ ಹಾಗೂ ಗೊಂದಲಗಳ ನಿವಾರಣೆಗೆ ನಾನು ವಕ್ಫ್‌ ಆದಾಲತ್ ನಡೆಸಿದ್ದೆ. ಅದನ್ನೇ ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು. ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ವಕ್ಫ್ ಆಸ್ತಿಗಳ ರಕ್ಷಣೆ ಕಾರ್ಯ ನಡೆದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿ ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿತ್ತು ಎಂದು ಸಚಿವ ಝಮೀರ್ ಅಹ್ಮದ್ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2010, 2020 ಮತ್ತು 2021ರಲ್ಲಿ ನಾಲ್ಕು ಆದೇಶಗಳನ್ನೂ ಹೊರಡಿಸಲಾಗಿದೆ ಎಂದು ಸದನದಲ್ಲಿ ದಾಖಲೆ ಪ್ರದರ್ಶಿಸಿದರು.

ರಾಜ್ಯದಲ್ಲಿ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಿತ್ತು. ಅದೆಲ್ಲ ದಾನಿಗಳು ಸಮಾಜದ ಶ್ರೇಯೋಭಿವೃದ್ದಿಗಾಗಿ ನೀಡಿರುವಂತದ್ದು. ಖಬರಸ್ಥಾನಗಳನ್ನು ಹೊರತುಪಡಿಸಿ ಒಂದೇ ಒಂದು ಇಂಚು ಜಾಗವನ್ನು ವಕ್ಫ್ ಮಂಡಳಿ ಸರ್ಕಾರದಿಂದ ಪಡೆದಿಲ್ಲ. 1.28 ಲಕ್ಷ ಎಕರೆಯಲ್ಲಿ ಇನಾಂ ರದ್ದತಿ ಕಾಯ್ದೆಯಡಿ 47,263 ಎಕರೆ, ಭೂ ಸುಧಾರಣಾ ಕಾಯ್ದೆಯಡಿ 23,620 ಎಕರೆ, ಸರ್ಕಾರದ ವಿವಿಧ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಮೂಲಕ 3 ಸಾವಿರ ಎಕರೆ ಹೋಗಿದೆ. ಉಳಿದಿರುವುದು 17, 966 ಎಕರೆ ಮಾತ್ರ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸುಳ್ಳು ಹಬ್ಬಿಸಿ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

ವಕ್ಫ್‌ ಆಸ್ತಿಯನ್ನು ಶೇ.95ರಷ್ಟು ಒತ್ತುವರಿ ಮಾಡಿರುವುದು ಮುಸ್ಲಿಮರೇ ಆಗಿದ್ದಾರೆ. ವಕ್ಫ್‌ ಆಸ್ತಿಯ ಹೆಸರಿನಲ್ಲಿ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಈ ಮೂಲಕ ಒಗ್ಗಟ್ಟಿನಿಂದ ಇರುವ ಗ್ರಾಮೀಣ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಅತಿಕ್ರಮಣದ ವಿರುದ್ದ ಕಾರ್ಯಪಡೆ ರಚಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದೇಶವಾಗಿತ್ತು. ಹೀಗಿದ್ದರೂ, ರೈತರು, ದೇವಸ್ಥಾನಗಳ ಆಸ್ತಿಯನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಬಿಜೆಪಿಗರು ವಿವಾದ ಎಬ್ಬಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ವಕ್ಫ್ ಮಂಡಳಿಗೆ 1,12,000 ಎಕರೆ ಜಮೀನು ನೋಟಿಫೈ ಆಗಿತ್ತು. 47,263 ಎಕರೆ ಇನಾಂ ರದ್ಧತಿ ಹಾಗೂ 23,620 ಎಕರೆಯನ್ನು ಭೂಸುಧಾರಣಾ ಕಾಯಿದೆಯಡಿ ರೈತರಿಗೆ ಮಂಜೂರು ಮಾಡಲಾಗಿದೆ. ಒಟ್ಟು 70 ಸಾವಿರ ಎಕರೆ ರೈತರ ವಶದಲ್ಲಿದೆ. ಇನಾಮ್ ರದ್ದತಿ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಮಂಜೂರಾದ ರೈತರ ತಂಟೆಗೆ ಸರ್ಕಾರ ಹೋಗುವುದಿಲ್ಲ. ವಕ್ಫ್ ಜಮೀನಿನಲ್ಲಿ ಮಸೀದಿ, ದರ್ಗಾ, ಖಬರ್‌ಸ್ತಾನ ಇದೆ. ಅಂತದ್ದು ಒತ್ತುವರಿ ಆಗಿದ್ದರೆ ಅದನ್ನು ಬಿಟ್ಟು ಕೊಡುವಂತೆ ಹೇಳಿದ್ದಾರೆ. ನೀರಾವರಿ ಹಾಗೂ ಇನ್ನಿತರೆ ಉದ್ದೇಶಗಳಿಗೆ 3,101 ಎಕರೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. ಸುಮಾರು 17,969 ಎಕರೆಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಕೃಷ್ಣಬೈರೆಗೌಡ ಸದನಕ್ಕೆ ತಿಳಿಸಿದರು.

ಬಿಜೆಪಿಗೆ ಕೈಕೊಟ್ಟ ಜೆಡಿಎಸ್

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಭಾತ್ಯಾಗ ಮಾಡಿತು. ಆದರೆ, ಅದರ ಮಿತ್ರಪಕ್ಷ  ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಸದಸ್ಯರಾದ ಎ. ಮಂಜು, ಶಾರದಾ ಪೂರ್ಯಾನಾಯ್ಕ್, ಜಿ.ಟಿ ದೇವೇಗೌಡ ಸದನದಲ್ಲೇ ಉಳಿಯುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದರು. ಸರ್ಕಾರ ನೀಡಿದ ಸುದೀರ್ಘ ಉತ್ತರಕ್ಕೆ ಸುರೇಶ್ ಬಾಬು ಅಭಿನಂದಿಸಿದರು. ಈ ಮೂಲಕ ಬಿಜೆಪಿ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂಬ ಸಂದೇಶ ನೀಡಿದರು. ಇದೇ ವೇಳೆ ಬಿಜೆಪಿ ಸದಸ್ಯರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಕೂಡ ಸದನದಲ್ಲೇ ಉಳಿಯುವ ಮೂಲಕ ಗಮನಸೆಳೆದರು.

ಇದನ್ನೂ ಓದಿ : ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಹಣ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...