Homeಕರ್ನಾಟಕವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್ ಆಸ್ತಿಗಳ ಒಡೆತನ, ಖಾತೆ ವರ್ಗಾವಣೆ ಸಂಬಂಧಿಸಿದ ಗೊಂದಲಗಳ ಪರಿಶೀಲನೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಡಿ.18) ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ವಕ್ಫ್ ಮಂಡಳಿಯು ರೈತರು, ಮಠ-ಮಂದಿರಗಳ ಆಸ್ತಿಯನ್ನು ಕಬಳಿಸುತ್ತಿದೆ ಎಂದು ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಿದ ಸಿಎಂ, “ರೈತರಿಗೆ ಮಂಜೂರಾದ ಜಮೀನು, ಮಠ-ಮಂದಿರಗಳ ಆಸ್ತಿ ಮತ್ತು ರುದ್ರಭೂಮಿಗಳ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸುವುದಿಲ್ಲ. ಇದರ ಹೊರತಾಗಿಯೂ ಗೊಂದಲಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಇನಾಂ ರದ್ದತಿ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾಗಿರುವ ಯಾವುದೇ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಲು ಅವಕಾಶ ನೀಡುವುದಿಲ್ಲ. ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳ ಮೇಲಿನ ಹಕ್ಕನ್ನೂ ತ್ಯಜಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ವಕ್ಫ್ ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಅವರ ಸಲಹೆಯಂತೆ ವಕ್ಫ್ ಆಸ್ತಿಯಲ್ಲಿರುವ ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳಿಗೆ ರಕ್ಷಣೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾವುದೇ ಖಾಸಗಿ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿದ್ದರೆ, ಮಂಜೂರಾದ ಜಮೀನುಗಳ ಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದರೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಕ್ಕು ಮಂಡನೆ ಬಾಕಿ ಉಳಿದಿದ್ದರೆ ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸಮಿತಿಯು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.

ವಕ್ಫ್ ಅದಾಲತ್ ಅನ್ನು ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು- ಸಚಿವ ಝಮೀರ್ ಅಹ್ಮದ್

ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳ ರಕ್ಷಣೆ ಹಾಗೂ ಗೊಂದಲಗಳ ನಿವಾರಣೆಗೆ ನಾನು ವಕ್ಫ್‌ ಆದಾಲತ್ ನಡೆಸಿದ್ದೆ. ಅದನ್ನೇ ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು. ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ವಕ್ಫ್ ಆಸ್ತಿಗಳ ರಕ್ಷಣೆ ಕಾರ್ಯ ನಡೆದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿ ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿತ್ತು ಎಂದು ಸಚಿವ ಝಮೀರ್ ಅಹ್ಮದ್ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2010, 2020 ಮತ್ತು 2021ರಲ್ಲಿ ನಾಲ್ಕು ಆದೇಶಗಳನ್ನೂ ಹೊರಡಿಸಲಾಗಿದೆ ಎಂದು ಸದನದಲ್ಲಿ ದಾಖಲೆ ಪ್ರದರ್ಶಿಸಿದರು.

ರಾಜ್ಯದಲ್ಲಿ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಿತ್ತು. ಅದೆಲ್ಲ ದಾನಿಗಳು ಸಮಾಜದ ಶ್ರೇಯೋಭಿವೃದ್ದಿಗಾಗಿ ನೀಡಿರುವಂತದ್ದು. ಖಬರಸ್ಥಾನಗಳನ್ನು ಹೊರತುಪಡಿಸಿ ಒಂದೇ ಒಂದು ಇಂಚು ಜಾಗವನ್ನು ವಕ್ಫ್ ಮಂಡಳಿ ಸರ್ಕಾರದಿಂದ ಪಡೆದಿಲ್ಲ. 1.28 ಲಕ್ಷ ಎಕರೆಯಲ್ಲಿ ಇನಾಂ ರದ್ದತಿ ಕಾಯ್ದೆಯಡಿ 47,263 ಎಕರೆ, ಭೂ ಸುಧಾರಣಾ ಕಾಯ್ದೆಯಡಿ 23,620 ಎಕರೆ, ಸರ್ಕಾರದ ವಿವಿಧ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಮೂಲಕ 3 ಸಾವಿರ ಎಕರೆ ಹೋಗಿದೆ. ಉಳಿದಿರುವುದು 17, 966 ಎಕರೆ ಮಾತ್ರ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸುಳ್ಳು ಹಬ್ಬಿಸಿ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

ವಕ್ಫ್‌ ಆಸ್ತಿಯನ್ನು ಶೇ.95ರಷ್ಟು ಒತ್ತುವರಿ ಮಾಡಿರುವುದು ಮುಸ್ಲಿಮರೇ ಆಗಿದ್ದಾರೆ. ವಕ್ಫ್‌ ಆಸ್ತಿಯ ಹೆಸರಿನಲ್ಲಿ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಈ ಮೂಲಕ ಒಗ್ಗಟ್ಟಿನಿಂದ ಇರುವ ಗ್ರಾಮೀಣ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಅತಿಕ್ರಮಣದ ವಿರುದ್ದ ಕಾರ್ಯಪಡೆ ರಚಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದೇಶವಾಗಿತ್ತು. ಹೀಗಿದ್ದರೂ, ರೈತರು, ದೇವಸ್ಥಾನಗಳ ಆಸ್ತಿಯನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಬಿಜೆಪಿಗರು ವಿವಾದ ಎಬ್ಬಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ವಕ್ಫ್ ಮಂಡಳಿಗೆ 1,12,000 ಎಕರೆ ಜಮೀನು ನೋಟಿಫೈ ಆಗಿತ್ತು. 47,263 ಎಕರೆ ಇನಾಂ ರದ್ಧತಿ ಹಾಗೂ 23,620 ಎಕರೆಯನ್ನು ಭೂಸುಧಾರಣಾ ಕಾಯಿದೆಯಡಿ ರೈತರಿಗೆ ಮಂಜೂರು ಮಾಡಲಾಗಿದೆ. ಒಟ್ಟು 70 ಸಾವಿರ ಎಕರೆ ರೈತರ ವಶದಲ್ಲಿದೆ. ಇನಾಮ್ ರದ್ದತಿ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಮಂಜೂರಾದ ರೈತರ ತಂಟೆಗೆ ಸರ್ಕಾರ ಹೋಗುವುದಿಲ್ಲ. ವಕ್ಫ್ ಜಮೀನಿನಲ್ಲಿ ಮಸೀದಿ, ದರ್ಗಾ, ಖಬರ್‌ಸ್ತಾನ ಇದೆ. ಅಂತದ್ದು ಒತ್ತುವರಿ ಆಗಿದ್ದರೆ ಅದನ್ನು ಬಿಟ್ಟು ಕೊಡುವಂತೆ ಹೇಳಿದ್ದಾರೆ. ನೀರಾವರಿ ಹಾಗೂ ಇನ್ನಿತರೆ ಉದ್ದೇಶಗಳಿಗೆ 3,101 ಎಕರೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. ಸುಮಾರು 17,969 ಎಕರೆಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಕೃಷ್ಣಬೈರೆಗೌಡ ಸದನಕ್ಕೆ ತಿಳಿಸಿದರು.

ಬಿಜೆಪಿಗೆ ಕೈಕೊಟ್ಟ ಜೆಡಿಎಸ್

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಭಾತ್ಯಾಗ ಮಾಡಿತು. ಆದರೆ, ಅದರ ಮಿತ್ರಪಕ್ಷ  ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಸದಸ್ಯರಾದ ಎ. ಮಂಜು, ಶಾರದಾ ಪೂರ್ಯಾನಾಯ್ಕ್, ಜಿ.ಟಿ ದೇವೇಗೌಡ ಸದನದಲ್ಲೇ ಉಳಿಯುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದರು. ಸರ್ಕಾರ ನೀಡಿದ ಸುದೀರ್ಘ ಉತ್ತರಕ್ಕೆ ಸುರೇಶ್ ಬಾಬು ಅಭಿನಂದಿಸಿದರು. ಈ ಮೂಲಕ ಬಿಜೆಪಿ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂಬ ಸಂದೇಶ ನೀಡಿದರು. ಇದೇ ವೇಳೆ ಬಿಜೆಪಿ ಸದಸ್ಯರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಕೂಡ ಸದನದಲ್ಲೇ ಉಳಿಯುವ ಮೂಲಕ ಗಮನಸೆಳೆದರು.

ಇದನ್ನೂ ಓದಿ : ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಹಣ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...