Homeಕರ್ನಾಟಕವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್ ಆಸ್ತಿಗಳ ಒಡೆತನ, ಖಾತೆ ವರ್ಗಾವಣೆ ಸಂಬಂಧಿಸಿದ ಗೊಂದಲಗಳ ಪರಿಶೀಲನೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಡಿ.18) ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ವಕ್ಫ್ ಮಂಡಳಿಯು ರೈತರು, ಮಠ-ಮಂದಿರಗಳ ಆಸ್ತಿಯನ್ನು ಕಬಳಿಸುತ್ತಿದೆ ಎಂದು ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಿದ ಸಿಎಂ, “ರೈತರಿಗೆ ಮಂಜೂರಾದ ಜಮೀನು, ಮಠ-ಮಂದಿರಗಳ ಆಸ್ತಿ ಮತ್ತು ರುದ್ರಭೂಮಿಗಳ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸುವುದಿಲ್ಲ. ಇದರ ಹೊರತಾಗಿಯೂ ಗೊಂದಲಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಇನಾಂ ರದ್ದತಿ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾಗಿರುವ ಯಾವುದೇ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಲು ಅವಕಾಶ ನೀಡುವುದಿಲ್ಲ. ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳ ಮೇಲಿನ ಹಕ್ಕನ್ನೂ ತ್ಯಜಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ವಕ್ಫ್ ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಅವರ ಸಲಹೆಯಂತೆ ವಕ್ಫ್ ಆಸ್ತಿಯಲ್ಲಿರುವ ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳಿಗೆ ರಕ್ಷಣೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾವುದೇ ಖಾಸಗಿ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿದ್ದರೆ, ಮಂಜೂರಾದ ಜಮೀನುಗಳ ಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದರೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಕ್ಕು ಮಂಡನೆ ಬಾಕಿ ಉಳಿದಿದ್ದರೆ ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸಮಿತಿಯು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.

ವಕ್ಫ್ ಅದಾಲತ್ ಅನ್ನು ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು- ಸಚಿವ ಝಮೀರ್ ಅಹ್ಮದ್

ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳ ರಕ್ಷಣೆ ಹಾಗೂ ಗೊಂದಲಗಳ ನಿವಾರಣೆಗೆ ನಾನು ವಕ್ಫ್‌ ಆದಾಲತ್ ನಡೆಸಿದ್ದೆ. ಅದನ್ನೇ ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು. ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ವಕ್ಫ್ ಆಸ್ತಿಗಳ ರಕ್ಷಣೆ ಕಾರ್ಯ ನಡೆದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿ ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿತ್ತು ಎಂದು ಸಚಿವ ಝಮೀರ್ ಅಹ್ಮದ್ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2010, 2020 ಮತ್ತು 2021ರಲ್ಲಿ ನಾಲ್ಕು ಆದೇಶಗಳನ್ನೂ ಹೊರಡಿಸಲಾಗಿದೆ ಎಂದು ಸದನದಲ್ಲಿ ದಾಖಲೆ ಪ್ರದರ್ಶಿಸಿದರು.

ರಾಜ್ಯದಲ್ಲಿ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಿತ್ತು. ಅದೆಲ್ಲ ದಾನಿಗಳು ಸಮಾಜದ ಶ್ರೇಯೋಭಿವೃದ್ದಿಗಾಗಿ ನೀಡಿರುವಂತದ್ದು. ಖಬರಸ್ಥಾನಗಳನ್ನು ಹೊರತುಪಡಿಸಿ ಒಂದೇ ಒಂದು ಇಂಚು ಜಾಗವನ್ನು ವಕ್ಫ್ ಮಂಡಳಿ ಸರ್ಕಾರದಿಂದ ಪಡೆದಿಲ್ಲ. 1.28 ಲಕ್ಷ ಎಕರೆಯಲ್ಲಿ ಇನಾಂ ರದ್ದತಿ ಕಾಯ್ದೆಯಡಿ 47,263 ಎಕರೆ, ಭೂ ಸುಧಾರಣಾ ಕಾಯ್ದೆಯಡಿ 23,620 ಎಕರೆ, ಸರ್ಕಾರದ ವಿವಿಧ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಮೂಲಕ 3 ಸಾವಿರ ಎಕರೆ ಹೋಗಿದೆ. ಉಳಿದಿರುವುದು 17, 966 ಎಕರೆ ಮಾತ್ರ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸುಳ್ಳು ಹಬ್ಬಿಸಿ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

ವಕ್ಫ್‌ ಆಸ್ತಿಯನ್ನು ಶೇ.95ರಷ್ಟು ಒತ್ತುವರಿ ಮಾಡಿರುವುದು ಮುಸ್ಲಿಮರೇ ಆಗಿದ್ದಾರೆ. ವಕ್ಫ್‌ ಆಸ್ತಿಯ ಹೆಸರಿನಲ್ಲಿ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಈ ಮೂಲಕ ಒಗ್ಗಟ್ಟಿನಿಂದ ಇರುವ ಗ್ರಾಮೀಣ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಅತಿಕ್ರಮಣದ ವಿರುದ್ದ ಕಾರ್ಯಪಡೆ ರಚಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದೇಶವಾಗಿತ್ತು. ಹೀಗಿದ್ದರೂ, ರೈತರು, ದೇವಸ್ಥಾನಗಳ ಆಸ್ತಿಯನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಬಿಜೆಪಿಗರು ವಿವಾದ ಎಬ್ಬಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ವಕ್ಫ್ ಮಂಡಳಿಗೆ 1,12,000 ಎಕರೆ ಜಮೀನು ನೋಟಿಫೈ ಆಗಿತ್ತು. 47,263 ಎಕರೆ ಇನಾಂ ರದ್ಧತಿ ಹಾಗೂ 23,620 ಎಕರೆಯನ್ನು ಭೂಸುಧಾರಣಾ ಕಾಯಿದೆಯಡಿ ರೈತರಿಗೆ ಮಂಜೂರು ಮಾಡಲಾಗಿದೆ. ಒಟ್ಟು 70 ಸಾವಿರ ಎಕರೆ ರೈತರ ವಶದಲ್ಲಿದೆ. ಇನಾಮ್ ರದ್ದತಿ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಮಂಜೂರಾದ ರೈತರ ತಂಟೆಗೆ ಸರ್ಕಾರ ಹೋಗುವುದಿಲ್ಲ. ವಕ್ಫ್ ಜಮೀನಿನಲ್ಲಿ ಮಸೀದಿ, ದರ್ಗಾ, ಖಬರ್‌ಸ್ತಾನ ಇದೆ. ಅಂತದ್ದು ಒತ್ತುವರಿ ಆಗಿದ್ದರೆ ಅದನ್ನು ಬಿಟ್ಟು ಕೊಡುವಂತೆ ಹೇಳಿದ್ದಾರೆ. ನೀರಾವರಿ ಹಾಗೂ ಇನ್ನಿತರೆ ಉದ್ದೇಶಗಳಿಗೆ 3,101 ಎಕರೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. ಸುಮಾರು 17,969 ಎಕರೆಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಕೃಷ್ಣಬೈರೆಗೌಡ ಸದನಕ್ಕೆ ತಿಳಿಸಿದರು.

ಬಿಜೆಪಿಗೆ ಕೈಕೊಟ್ಟ ಜೆಡಿಎಸ್

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಭಾತ್ಯಾಗ ಮಾಡಿತು. ಆದರೆ, ಅದರ ಮಿತ್ರಪಕ್ಷ  ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಸದಸ್ಯರಾದ ಎ. ಮಂಜು, ಶಾರದಾ ಪೂರ್ಯಾನಾಯ್ಕ್, ಜಿ.ಟಿ ದೇವೇಗೌಡ ಸದನದಲ್ಲೇ ಉಳಿಯುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದರು. ಸರ್ಕಾರ ನೀಡಿದ ಸುದೀರ್ಘ ಉತ್ತರಕ್ಕೆ ಸುರೇಶ್ ಬಾಬು ಅಭಿನಂದಿಸಿದರು. ಈ ಮೂಲಕ ಬಿಜೆಪಿ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂಬ ಸಂದೇಶ ನೀಡಿದರು. ಇದೇ ವೇಳೆ ಬಿಜೆಪಿ ಸದಸ್ಯರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಕೂಡ ಸದನದಲ್ಲೇ ಉಳಿಯುವ ಮೂಲಕ ಗಮನಸೆಳೆದರು.

ಇದನ್ನೂ ಓದಿ : ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಹಣ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...