Homeಕರ್ನಾಟಕವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ವಕ್ಫ್ ಆಸ್ತಿಗಳ ಒಡೆತನ, ಖಾತೆ ವರ್ಗಾವಣೆ ಸಂಬಂಧಿಸಿದ ಗೊಂದಲಗಳ ಪರಿಶೀಲನೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಡಿ.18) ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ವಕ್ಫ್ ಮಂಡಳಿಯು ರೈತರು, ಮಠ-ಮಂದಿರಗಳ ಆಸ್ತಿಯನ್ನು ಕಬಳಿಸುತ್ತಿದೆ ಎಂದು ನಿಯಮ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಉತ್ತರ ನೀಡಿದ ಸಿಎಂ, “ರೈತರಿಗೆ ಮಂಜೂರಾದ ಜಮೀನು, ಮಠ-ಮಂದಿರಗಳ ಆಸ್ತಿ ಮತ್ತು ರುದ್ರಭೂಮಿಗಳ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸುವುದಿಲ್ಲ. ಇದರ ಹೊರತಾಗಿಯೂ ಗೊಂದಲಗಳಿದ್ದರೆ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಇನಾಂ ರದ್ದತಿ ಕಾಯ್ದೆ ಮತ್ತು ಕರ್ನಾಟಕ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾಗಿರುವ ಯಾವುದೇ ಜಮೀನಿನ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಲು ಅವಕಾಶ ನೀಡುವುದಿಲ್ಲ. ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳು ವಕ್ಫ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳ ಮೇಲಿನ ಹಕ್ಕನ್ನೂ ತ್ಯಜಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ವಕ್ಫ್ ಸಚಿವ ಝಮೀರ್ ಅಹ್ಮದ್ ತಿಳಿಸಿದ್ದಾರೆ. ಅವರ ಸಲಹೆಯಂತೆ ವಕ್ಫ್ ಆಸ್ತಿಯಲ್ಲಿರುವ ದೇವಸ್ಥಾನ, ರುದ್ರಭೂಮಿ ಮತ್ತು ಶಾಲೆಗಳಿಗೆ ರಕ್ಷಣೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾವುದೇ ಖಾಸಗಿ ಆಸ್ತಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿದ್ದರೆ, ಮಂಜೂರಾದ ಜಮೀನುಗಳ ಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದರೆ, ಇನಾಂ ರದ್ದತಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯಡಿ ಹಕ್ಕು ಮಂಡನೆ ಬಾಕಿ ಉಳಿದಿದ್ದರೆ ಸಮಿತಿ ಮುಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸಮಿತಿಯು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.

ವಕ್ಫ್ ಅದಾಲತ್ ಅನ್ನು ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು- ಸಚಿವ ಝಮೀರ್ ಅಹ್ಮದ್

ವಕ್ಫ್ ಮಂಡಳಿಗೆ ಸೇರಿದ ಆಸ್ತಿಗಳ ರಕ್ಷಣೆ ಹಾಗೂ ಗೊಂದಲಗಳ ನಿವಾರಣೆಗೆ ನಾನು ವಕ್ಫ್‌ ಆದಾಲತ್ ನಡೆಸಿದ್ದೆ. ಅದನ್ನೇ ಬಿಜೆಪಿಯವರು ತಪ್ಪಾಗಿ ಬಿಂಬಿಸಿದರು. ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಯಂತೆ ವಕ್ಫ್ ಆಸ್ತಿಗಳ ರಕ್ಷಣೆ ಕಾರ್ಯ ನಡೆದಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿ ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿತ್ತು ಎಂದು ಸಚಿವ ಝಮೀರ್ ಅಹ್ಮದ್ ಹೇಳಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗಲೇ 2010, 2020 ಮತ್ತು 2021ರಲ್ಲಿ ನಾಲ್ಕು ಆದೇಶಗಳನ್ನೂ ಹೊರಡಿಸಲಾಗಿದೆ ಎಂದು ಸದನದಲ್ಲಿ ದಾಖಲೆ ಪ್ರದರ್ಶಿಸಿದರು.

ರಾಜ್ಯದಲ್ಲಿ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಿತ್ತು. ಅದೆಲ್ಲ ದಾನಿಗಳು ಸಮಾಜದ ಶ್ರೇಯೋಭಿವೃದ್ದಿಗಾಗಿ ನೀಡಿರುವಂತದ್ದು. ಖಬರಸ್ಥಾನಗಳನ್ನು ಹೊರತುಪಡಿಸಿ ಒಂದೇ ಒಂದು ಇಂಚು ಜಾಗವನ್ನು ವಕ್ಫ್ ಮಂಡಳಿ ಸರ್ಕಾರದಿಂದ ಪಡೆದಿಲ್ಲ. 1.28 ಲಕ್ಷ ಎಕರೆಯಲ್ಲಿ ಇನಾಂ ರದ್ದತಿ ಕಾಯ್ದೆಯಡಿ 47,263 ಎಕರೆ, ಭೂ ಸುಧಾರಣಾ ಕಾಯ್ದೆಯಡಿ 23,620 ಎಕರೆ, ಸರ್ಕಾರದ ವಿವಿಧ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಮೂಲಕ 3 ಸಾವಿರ ಎಕರೆ ಹೋಗಿದೆ. ಉಳಿದಿರುವುದು 17, 966 ಎಕರೆ ಮಾತ್ರ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸುಳ್ಳು ಹಬ್ಬಿಸಿ ಜನರಲ್ಲಿ ಭೀತಿ ಹುಟ್ಟಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

ವಕ್ಫ್‌ ಆಸ್ತಿಯನ್ನು ಶೇ.95ರಷ್ಟು ಒತ್ತುವರಿ ಮಾಡಿರುವುದು ಮುಸ್ಲಿಮರೇ ಆಗಿದ್ದಾರೆ. ವಕ್ಫ್‌ ಆಸ್ತಿಯ ಹೆಸರಿನಲ್ಲಿ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಈ ಮೂಲಕ ಒಗ್ಗಟ್ಟಿನಿಂದ ಇರುವ ಗ್ರಾಮೀಣ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಅತಿಕ್ರಮಣದ ವಿರುದ್ದ ಕಾರ್ಯಪಡೆ ರಚಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದೇಶವಾಗಿತ್ತು. ಹೀಗಿದ್ದರೂ, ರೈತರು, ದೇವಸ್ಥಾನಗಳ ಆಸ್ತಿಯನ್ನು ಕಸಿದುಕೊಳ್ಳಲಾಗತ್ತಿದೆ ಎಂದು ಬಿಜೆಪಿಗರು ವಿವಾದ ಎಬ್ಬಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ವಕ್ಫ್ ಮಂಡಳಿಗೆ 1,12,000 ಎಕರೆ ಜಮೀನು ನೋಟಿಫೈ ಆಗಿತ್ತು. 47,263 ಎಕರೆ ಇನಾಂ ರದ್ಧತಿ ಹಾಗೂ 23,620 ಎಕರೆಯನ್ನು ಭೂಸುಧಾರಣಾ ಕಾಯಿದೆಯಡಿ ರೈತರಿಗೆ ಮಂಜೂರು ಮಾಡಲಾಗಿದೆ. ಒಟ್ಟು 70 ಸಾವಿರ ಎಕರೆ ರೈತರ ವಶದಲ್ಲಿದೆ. ಇನಾಮ್ ರದ್ದತಿ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಭೂಮಿ ಮಂಜೂರಾದ ರೈತರ ತಂಟೆಗೆ ಸರ್ಕಾರ ಹೋಗುವುದಿಲ್ಲ. ವಕ್ಫ್ ಜಮೀನಿನಲ್ಲಿ ಮಸೀದಿ, ದರ್ಗಾ, ಖಬರ್‌ಸ್ತಾನ ಇದೆ. ಅಂತದ್ದು ಒತ್ತುವರಿ ಆಗಿದ್ದರೆ ಅದನ್ನು ಬಿಟ್ಟು ಕೊಡುವಂತೆ ಹೇಳಿದ್ದಾರೆ. ನೀರಾವರಿ ಹಾಗೂ ಇನ್ನಿತರೆ ಉದ್ದೇಶಗಳಿಗೆ 3,101 ಎಕರೆಯನ್ನು ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. ಸುಮಾರು 17,969 ಎಕರೆಯನ್ನು ಖಾಸಗಿಯವರು ಒತ್ತುವರಿ ಮಾಡಿದ್ದಾರೆ ಕೃಷ್ಣಬೈರೆಗೌಡ ಸದನಕ್ಕೆ ತಿಳಿಸಿದರು.

ಬಿಜೆಪಿಗೆ ಕೈಕೊಟ್ಟ ಜೆಡಿಎಸ್

ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಭಾತ್ಯಾಗ ಮಾಡಿತು. ಆದರೆ, ಅದರ ಮಿತ್ರಪಕ್ಷ  ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ಸದಸ್ಯರಾದ ಎ. ಮಂಜು, ಶಾರದಾ ಪೂರ್ಯಾನಾಯ್ಕ್, ಜಿ.ಟಿ ದೇವೇಗೌಡ ಸದನದಲ್ಲೇ ಉಳಿಯುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದರು. ಸರ್ಕಾರ ನೀಡಿದ ಸುದೀರ್ಘ ಉತ್ತರಕ್ಕೆ ಸುರೇಶ್ ಬಾಬು ಅಭಿನಂದಿಸಿದರು. ಈ ಮೂಲಕ ಬಿಜೆಪಿ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ ಎಂಬ ಸಂದೇಶ ನೀಡಿದರು. ಇದೇ ವೇಳೆ ಬಿಜೆಪಿ ಸದಸ್ಯರಾದ ಎಸ್‌.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಕೂಡ ಸದನದಲ್ಲೇ ಉಳಿಯುವ ಮೂಲಕ ಗಮನಸೆಳೆದರು.

ಇದನ್ನೂ ಓದಿ : ಕೆಐಎಡಿಬಿ ಭೂ ಸ್ವಾಧೀನ ಪರಿಹಾರದ ಹಣ ಆರ್‌ಟಿಜಿಎಸ್‌ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...