Homeಕರ್ನಾಟಕಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಹುದ್ದೆ ನೀಡಿದ ಸಿಎಂ: ಅಸಮಾಧಾನ ಶಮನಕ್ಕೆ ಯತ್ನ

ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಹುದ್ದೆ ನೀಡಿದ ಸಿಎಂ: ಅಸಮಾಧಾನ ಶಮನಕ್ಕೆ ಯತ್ನ

- Advertisement -
- Advertisement -

ಈ ಹಿಂದೆ ಸರ್ಕಾರದ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದ ಹಿರಿಯ ಕಾಂಗ್ರೆಸ್ ಶಾಸಕರಾದ ಬಿ.ಆರ್ ಪಾಟೀಲ್ ಮತ್ತು ಬಸವರಾಜ್ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮವಾಗಿ ತಮ್ಮ ಸಲಹೆಗಾರ ಮತ್ತು ಆರ್ಥಿಕ ಸಲಹೆಗಾರರನ್ನಾಗಿ ಶುಕ್ರವಾರ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ನೇಮಕ ಮಾಡಿದ್ದಾರೆ. ಈ ಮೂಲಕ ಆಡಳಿತ ಪಕ್ಷದೊಳಗಿನ ಅಸಮಾಧಾನವನ್ನು ಶಮನಗೊಳಿಸಲು ಪ್ರಯತ್ನ ಮಾಡಿದ್ದಾರೆ.

ಮತ್ತೊಬ್ಬರು ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ಅವರನ್ನೂ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಸಿಎಂ ನೇಮಿಸಿದ್ದಾರೆ.

ಬಿ.ಆರ್ ಪಾಟೀಲ್ ಪ್ರಸ್ತುತ ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಶಾಸಕರಾಗಿದ್ದಾರೆ. ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ ಮತ್ತು ಆರ್‌.ವಿ ದೇಶಪಾಂಡೆ ಕ್ರಮವಾಗಿ ಯಲಬುರ್ಗಾ ಮತ್ತು ಹಳಿಯಾಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮೂವರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಮೂವರು ಹಿರಿಯ ಶಾಸಕರಿಗೆ ವಿವಿಧ ಹುದ್ದೆಗಳನ್ನು ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಪಕ್ಷದೊಳಗಿನ ಅಸಮಾಧಾನ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಮೂವರು ರಾಜಕೀಯ ಅನಭವ ಉಳ್ಳವರಾಗಿರುವುದರಿಂದ ಸುಗಮ ಆಡಳಿತಕ್ಕೆ ನೆರವಾಗಲಿದ್ದಾರೆ ಎಂಬ ಉದ್ದೇಶ ಹೊಂದಲಾಗಿದೆ.

ಮೂವರು ಹಿರಿಯ ಶಾಸಕರೂ ಸಿದ್ದರಾಮಯ್ಯ ಸಂಪುಟದ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ, ಸಚಿವ ಸ್ಥಾನ ಸಿಗದ ಹಿನ್ನೆಲೆ ಅಸಮಾಧಾನಗೊಂಡಿದ್ದರು. ಪಾಟೀಲ್ ಮತ್ತು ರಾಯರೆಡ್ಡಿ ಸರ್ಕಾರ ಹಾಗೂ ಕೆಲ ಸಚಿವರ ಕಾರ್ಯವೈಖರಿಯನ್ನು ಬಹಿರಂಗವಾಗಿ ಟೀಕಿಸಿದ್ದರು. ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೂರು ನೀಡಿದ್ದರು.

ರಾಜ್ಯದ ವಿವಿಧ ಮಂಡಳಿ ಮತ್ತು ನಿಗಮಗಳಿಗೆ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರನ್ನು ಪ್ರಮುಖ ಸ್ಥಾನಗಳಿಗೆ ನೇಮಿಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವಾಗಲೇ ಮೂವರು ಹಿರಿಯ ಶಾಸಕರಿಗೆ ವಿವಿಧ ಸ್ಥಾನಗಳನ್ನು ನೀಡಲಾಗಿದೆ.

ಇದನ್ನೂ ಓದಿ : ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...