Homeಕರ್ನಾಟಕಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ - ವರದಿ

ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿರುವ ಸಚಿವರೊಬ್ಬರು ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರಾಗಿ ಶೀಘ್ರದಲ್ಲೇ ನೇಮಕವಾಗುವ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯೊಂದು ಹೇಳಿದೆ. ಅದಾಗ್ಯೂ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ನಿರೀಕ್ಷೆಯಲ್ಲಿರುವ ಈ ಸಚಿವ ‘ಶೋಷಿತರ’ ಸಮಾವೇಶದ ರ‍್ಯಾಲಿ ನಡೆಸಲು ಯೋಜಿಸಿದ್ದು, ಅದಕ್ಕಾಗಿ ತೀವ್ರವಾಗಿ ಲಾಬಿ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ವಾರಗಳಿಂದ, ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಲು ರಾಜ್ಯದಿಂದ ನವದೆಹಲಿಗೆ ಹಲವಾರು ನಾಯಕರು ಹಾರುತ್ತಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಾತುಕತೆ ನಡೆಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಮಾವೇಶದ ವಿಷಯವನ್ನು ಎತ್ತುವುದರ ಜೊತೆಗೆ, ಮಾಜಿ ಎಂಎಲ್ಸಿ ಎಂಸಿ ವೇಣುಗೋಪಾಲ್ ಅವರಿಗೆ ಎಂಎಲ್ಸಿ ಹುದ್ದೆ ನೀಡಬೇಕೆಂದು ತೀವ್ರ ಒತ್ತಾಯಿಸಿದ್ದಾರೆ. ಅವರು ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಎಂ.ಸಿ. ವೇಣುಗೋಪಾಲ್ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರುವುದರಿಂದ, ಸಿದ್ದರಾಮಯ್ಯ ಅವರಿಂದ ಪರಮೇಶ್ವರ್‌ಗೆ ಹಸಿರು ನಿಶಾನೆ ಸಿಕ್ಕಿದ್ದರೂ, ಹೈಕಮಾಂಡ್ ಅವರನ್ನು ಮನವೊಲಿಸಲು ಪ್ರಯತ್ನಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ

ಬಜೆಟ್ ಅಧಿವೇಶನದ ನಂತರ ಸಿದ್ದರಾಮಯ್ಯ ತಮ್ಮ ಸಂಪುಟ ಪುನರ್ರಚಿಸಿದರೆ, ತಮ್ಮ ಖಾತೆ ಬದಲಾವಣೆ ಮಾಡಬೇಕು ಎಂದು ಪರಮೇಶ್ವರ್ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಖಾತೆಯ ಬದಲಿಗೆ ಅವರು ಕಂದಾಯ ಅಥವಾ ಕೈಗಾರಿಕಾ ಖಾತೆಯನ್ನು ನಿರೀಕ್ಷಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ, ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸುದೀರ್ಘ ಮಾತುಕತೆ ನಡೆಸಿದ್ದಾರೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬದಲಿಸುವ ಮನಸ್ಥಿತಿಯಲ್ಲಿಲ್ಲದ ಕಾರಣ ಸ್ವಲ್ಪ ಸಮಯ ಕಾಯುವಂತೆ ಸುರ್ಜೆವಾಲಾ ಸತೀಶ್‌ಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಣ್ಣ ಅಧ್ಯಕ್ಷೀಯ ಕೂಡ ಕಣದಲ್ಲಿದ್ದು, ಆದರೆ ಅವರ ವಿವಾದಾತ್ಮಕ ಹೇಳಿಕೆಗಳನ್ನು ಪರಿಗಣಿಸಿ ಹೈಕಮಾಂಡ್ ಅವರನ್ನು ರಾಜ್ಯ ಮುಖ್ಯಸ್ಥ ಹುದ್ದೆಗೆ ಪರಿಗಣಿಸುವ ಸಾಧ್ಯತೆ ಕಡಿಮೆಯಿದೆ ಎಂದು ವರದಿ ಹೇಳಿದೆ. “ಅವರು ಈ ಬಗ್ಗೆ ಧ್ವನಿ ಎತ್ತುವ ಮೂಲಕ ಮತ್ತು ಮಾಧ್ಯಮಗಳಿಗೆ ಹೇಳಿಕೆ ನೀಡುವ ಮೂಲಕ ತಮ್ಮ ಶಕ್ತಿಯನ್ನು ತೋರಿಸಿದರು. ಆದರೆ ಅದು ಹೈಕಮಾಂಡ್ ಮಟ್ಟದಲ್ಲಿ ಕೆಲಸ ಮಾಡುವುದಿಲ್ಲ” ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಎಂಎಲ್‌ಸಿಗಳ ನಾಮನಿರ್ದೇಶನ

ಎಂಸಿ ವೇಣುಗೋಪಾಲ್ ಅವರಲ್ಲದೆ, ಹಿರಿಯ ನಾಯಕ ಬಿಎಲ್ ಶಂಕರ್, ಯುವ ನಾಯಕ ವಿನಯ್ ಕಾರ್ತಿಕ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಿಗ ಯುಬಿ ವೆಂಕಟೇಶ್, ಕೆಪಿಸಿಸಿ ವಕ್ತಾರ ರಮೇಶ್ ಬಾಬು ಮತ್ತು ಮಾಜಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಡಾ. ಸಿ.ಎಸ್. ದ್ವಾರಕನಾಥ್ ಅವರ ಹೆಸರುಗಳು ಖಾಲಿ ಇರುವ ನಾಲ್ಕು ಎಂಎಲ್‌ಸಿ ಸ್ಥಾನಗಳಿಗೆ ಕೇಳಿಬರುತ್ತಿವೆ.

ಹೈಕಮಾಂಡ್ ಶೀಘ್ರದಲ್ಲೇ ತನ್ನ ಆಯ್ಕೆಯನ್ನು ಸ್ಪಷ್ಟಪಡಿಸುವ ಸಾಧ್ಯತೆ ಇರುವುದರಿಂದ ಲಾಬಿ ತೀವ್ರವಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂಓದಿ:  ಅನುಮತಿಯಿಲ್ಲದೆ ನಿರ್ಮಾಣದ ಆರೋಪ: ಗೋರಖ್‌ಪುರ ಮಸೀದಿ ಕೆಡವಲು ಆದೇಶ

ಅನುಮತಿಯಿಲ್ಲದೆ ನಿರ್ಮಾಣದ ಆರೋಪ: ಗೋರಖ್‌ಪುರ ಮಸೀದಿ ಕೆಡವಲು ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...