Homeಕರ್ನಾಟಕ'ಅತೃಪ್ತ ಆತ್ಮಗಳ ಹತಾಶ ಹೇಳಿಕೆ' : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಆರ್.ಅಶೋಕ್ ಮತ್ತು ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘ತಾ ಕಳ್ಳ ಇತರರ ನಂಬ’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ ಎಂದು ಹೇಳಿದ್ದಾರೆ.

ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ ಎಂದಿದ್ದಾರೆ.

ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಧಾನಿ ಎದುರು ಬಾಯಿ ಬಿಡಲಾಗದೆ ಕೈಕಾಲು ನಡುಗುವಂತಹ ಸ‍್ಥಿತಿ ಇರುವ ಬಿಜೆಪಿಯೂ ಅಲ್ಲ, ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಕೂಡಾ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ಕೂಡಾ ನನ್ನ ಇಲ್ಲವೇ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ, ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯಗಳು ಅವರಿಗೆ ಇದೆ. ಆದರೆ ಯಾವ ಶಾಸಕರು ಏನನ್ನೇ ಹೇಳಿದರೂ ಅಂತಿಮವಾಗಿ ಅವರನ್ನೂ ಸೇರಿದಂತೆ ನಾನು ಮತ್ತು ಶಿವಕುಮಾರ್ ನಮ್ಮ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು. ಇದನ್ನು ನಾವಿಬ್ಬರೂ ಒಂದಲ್ಲ ನೂರು ಬಾರಿ ಹೇಳಿದ್ದೇವೆ. ಇದೇ ಅಂತಿಮ ಸತ್ಯ ಎಂದು ತಿಳಿಸಿದ್ದಾರೆ.

ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧವನ್ನು ಕೆಡಿಸಿ ಡಿ.ಕೆ.ಶಿವಕುಮಾರ್ ಅವರನ್ನು ಒಲಿಸಿಕೊಳ್ಳುವ ದುರಾಲೋಚನೆ ಏನಾದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇದ್ದರೆ, ಅವರ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ. ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸಿಗ, ಸುಳ್ಳು ಕೇಸ್ ಗಳನ್ನು ಹಾಕಿ, ಜೈಲಿಗೆ ಕಳಿಸಿ ಅವರನ್ನು ಮಣಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಮಾಡಿಯಾಗಿದೆ. ಇದಕ್ಕೆಲ್ಲ ಮಣಿಯದೆ ಅವರು ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎನ್ನುವುದು ಈ ಕುತಂತ್ರಿ ನಾಯಕರಿಗೆ ತಿಳಿದಿರಲಿ ಎಂದು ಡಿಕೆಶಿ ಪರ ಸಿಎಂ ಬ್ಯಾಟ್ ಬೀಸಿದ್ದಾರೆ.

ಕರ್ನಾಟಕದ ಇತ್ತೀಚಿನ ರಾಜಕೀಯ ಇತಿಹಾಸದ ಪುಟಗಳ ಮೇಲೆ ಒಮ್ಮೆ ಕಣ್ಣಾಡಿಸಿದರೆ ಈ ಪೋನ್ ಕದ್ದಾಲಿಕೆ, ಗೂಢಚರ್ಯೆಗಳೆಲ್ಲ ಯಾವ ಪಕ್ಷದ ದುಷ್ಕೃತ್ಯಗಳು ಎನ್ನುವುದು ಅರಿವಾಗುತ್ತದೆ. ಈ ದುರ್ಬುದ್ದಿಯ ಕಾರಣದಿಂದಾಗಿಯೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ, ವಚನಭಂಗದಂತಹ ಅನಿಷ‍್ಠಗಳು ಕಾಣಿಸಿಕೊಂಡಿರುವುದು. 2004ರಿಂದ 2013 ವರೆಗಿನ ಒಂಬತ್ತು ವರ್ಷಗಳ ಅವಧಿಯಲ್ಲಿ ರಾಜ್ಯ ಐದು ಮುಖ್ಯಮಂತ್ರಿಗಳನ್ನು, 2018ರಿಂದ 2023ರ 5 ವರ್ಷಗಳ ಅವಧಿಯಲ್ಲಿ ಮೂರು ಮುಖ್ಯಮಂತ್ರಿಗಳನ್ನು ರಾಜ್ಯ ಕಾಣುವಂತಾಗಲು ಇವರೊಳಗಿನ ಪರಸ್ಪರ ಅಪನಂಬಿಕೆ, ದ್ವೇಷ, ಅಸೂಯೆ, ಬೆನ್ನಿಗೆ ಚೂರಿ ಹಾಕುವ ಕುತಂತ್ರಗಳೇ ಕಾರಣ ಎಂದು ಕಿಡಿಕಾರಿದ್ದಾರೆ.

2018ರಲ್ಲಿ ಹೆಚ್.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ಪೂಜ್ಯ ನಿರ್ಮಲಾನಂದನಾಥ ಸ್ವಾಮಿಗಳ ಫೋನನ್ನೆ ಕದ್ದಾಲಿಸಿದ್ದಾರೆ ಎಂದು ಈಗಿನ ಅವರ ರಾಜಕೀಯ ಸಂಗಾತಿ ಬಿ.ವೈ ವಿಜಯೇಂದ್ರ ಅವರೇ ಆರೋಪ ಮಾಡಿದ್ದರು. ಇದರ ಬಗ್ಗೆ ತನಿಖೆ ಮಾಡಿದ್ದ ಸಿಬಿಐ, ಒಬ್ಬ ಸ್ವಾಮೀಜಿಗಳದ್ದಷ್ಟೇ ಅಲ್ಲ, ಬದಲಿಗೆ ಏಳು ಸ್ವಾಮೀಜಿಗಳ ಫೋನ್‌ಗಳ ಕದ್ದಾಲಿಕೆ ಮಾಡಲಾಗಿದೆ ಎಂದು ತಿಳಿಸಿತ್ತು. ನಂಬಿಕೆಗೆ ತಾನು ಅರ್ಹ ಅಲ್ಲ ಎಂದು ಸಾಬೀತು ಮಾಡಿರುವ ಕುಮಾರಸ್ವಾಮಿವರನ್ನು ಬಿಜೆಪಿಯವರು ಸುಮ್ಮನೆ ಬಿಟ್ಟಾರೆಯೇ? ಅವರ ವಿರುದ್ಧವೂ ಗೂಢಚಾರರನ್ನು ಬಿಟ್ಟಿರಬಹುದು. ಇಂತಹ ದುರ್ಬುದ್ದಿಗಾಗಿಯೇ ರಾಜ್ಯದ ಜನತೆ ಈ ಎರಡೂ ಪಕ್ಷಗಳನ್ನು ತಿರಸ್ಕರಿಸಿರುವುದು ಎನ್ನುವುದು ನೆನಪಿರಲಿ ಎಂದಿದ್ದಾರೆ.

ಅಧಿಕಾರವನ್ನು ದುರ್ಬಳಕೆ ಮಾಡಿ ಸರ್ಕಾರಿ ಯಂತ್ರಗಳ ಮೂಲಕವೇ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲ, ಸ್ವಪಕ್ಷದಲ್ಲಿ ತಮ್ಮ ನಾಯಕತ್ವಕ್ಕೆ ಪೈಪೋಟಿ ನೀಡಬಲ್ಲ ನಾಯಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬಂದ ದಿನದಿಂದಲೇ ಮಾಡುತ್ತಿದ್ದಾರೆ ಎನ್ನುವುದು ಜಗಜ್ಜಾಹೀರಾಗಿರುವ ಸತ್ಯ. ಹಾಡಹಗಲೇ ಪೊಲೀಸ್, ಸಿಬಿಐ, ಇಡಿ, ಐಟಿ ಇಲಾಖೆಗಳ ದುರ್ಬಳಕೆಯಾಗುತ್ತಿರುವ ಬಗ್ಗೆ ಇಡೀ ದೇಶದ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇಂತಹವರು ತಮ್ಮ ರಾಜಕೀಯ ವಿರೋಧಿಗಳ ಫೋನ್‌ ಗಳನ್ನು ಕದ್ದು ಆಲಿಸದೆ ಬಿಡುತ್ತಾರೆಯೇ? ಆದರೆ ಇಂತಹ ಬೆದರಿಕೆಗಳಿಗೆ ನಾನಾಗಲಿ, ನನ್ನ ಪಕ್ಷದ ಯಾವ ನಾಯಕರಾಗಲಿ ಜಗ್ಗುವವರಲ್ಲ, ಬಗ್ಗುವವರೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿಯವರಿಗೆ ಈ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು. ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಗೂಡಚರ್ಯೆ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಿರುವುದು ಇತಿಹಾಸದ ಪುಟಗಳಲ್ಲಿದೆ. ಈ ಅಪನಂಬಿಕೆ ಮತ್ತು ಸಣ್ಣತನಗಳಿಂದಾಗಿ ಕನ್ನಡಿಗರೊಬ್ಬರು ಇನ್ನಷ್ಟು ಕಾಲ ಪ್ರಧಾನಿಯಾಗುವ ಅವಕಾಶ ತಪ್ಪಿಹೋಯಿತು ಎನ್ನುವುದು ವಿಷಾದನೀಯ ವಾಸ್ತವ ಎಂದಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಮತ್ತು ಆರ್ ಅಶೋಕ್ ಅವರು ತಮ್ಮ ಅಮೂಲ್ಯ ಕ್ಷಣಗಳನ್ನು ಈ ರೀತಿ ಕುಟಿಲ ರಾಜಕೀಯದಲ್ಲಿ ವ್ಯರ್ಥಮಾಡುವ ಬದಲಿಗೆ ರಚನಾತ್ಮಕ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡಿ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಜ್ಞಾವಂತ ಮತದಾರರು ಐದು ವರ್ಷಗಳ ಕಾಲ ಸರ್ಕಾರ ನಡೆಸಲು ನಮಗೆ ಜನಾದೇಶ ನೀಡಿದ್ದಾರೆ. ವಿರೋಧ ಪಕ್ಷಗಳ ಎಲ್ಲ ಕುತಂತ್ರ-ಕುಚೇಷ್ಠೆಗಳ ನಡುವೆಯೂ ಈ ಅವಧಿಯನ್ನು ಕಾಂಗ್ರೆಸ್ ಪಕ್ಷ ಪೂರ್ಣಗೊಳಿಸಲಿದೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...