Homeಕರ್ನಾಟಕ'ಅತೃಪ್ತ ಆತ್ಮಗಳ ಹತಾಶ ಹೇಳಿಕೆ' : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಆರ್.ಅಶೋಕ್ ಮತ್ತು ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘ತಾ ಕಳ್ಳ ಇತರರ ನಂಬ’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ ಎಂದು ಹೇಳಿದ್ದಾರೆ.

ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ ಎಂದಿದ್ದಾರೆ.

ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಧಾನಿ ಎದುರು ಬಾಯಿ ಬಿಡಲಾಗದೆ ಕೈಕಾಲು ನಡುಗುವಂತಹ ಸ‍್ಥಿತಿ ಇರುವ ಬಿಜೆಪಿಯೂ ಅಲ್ಲ, ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಕೂಡಾ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ಕೂಡಾ ನನ್ನ ಇಲ್ಲವೇ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ, ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯಗಳು ಅವರಿಗೆ ಇದೆ. ಆದರೆ ಯಾವ ಶಾಸಕರು ಏನನ್ನೇ ಹೇಳಿದರೂ ಅಂತಿಮವಾಗಿ ಅವರನ್ನೂ ಸೇರಿದಂತೆ ನಾನು ಮತ್ತು ಶಿವಕುಮಾರ್ ನಮ್ಮ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು. ಇದನ್ನು ನಾವಿಬ್ಬರೂ ಒಂದಲ್ಲ ನೂರು ಬಾರಿ ಹೇಳಿದ್ದೇವೆ. ಇದೇ ಅಂತಿಮ ಸತ್ಯ ಎಂದು ತಿಳಿಸಿದ್ದಾರೆ.

ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧವನ್ನು ಕೆಡಿಸಿ ಡಿ.ಕೆ.ಶಿವಕುಮಾರ್ ಅವರನ್ನು ಒಲಿಸಿಕೊಳ್ಳುವ ದುರಾಲೋಚನೆ ಏನಾದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇದ್ದರೆ, ಅವರ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ. ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸಿಗ, ಸುಳ್ಳು ಕೇಸ್ ಗಳನ್ನು ಹಾಕಿ, ಜೈಲಿಗೆ ಕಳಿಸಿ ಅವರನ್ನು ಮಣಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಮಾಡಿಯಾಗಿದೆ. ಇದಕ್ಕೆಲ್ಲ ಮಣಿಯದೆ ಅವರು ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎನ್ನುವುದು ಈ ಕುತಂತ್ರಿ ನಾಯಕರಿಗೆ ತಿಳಿದಿರಲಿ ಎಂದು ಡಿಕೆಶಿ ಪರ ಸಿಎಂ ಬ್ಯಾಟ್ ಬೀಸಿದ್ದಾರೆ.

ಕರ್ನಾಟಕದ ಇತ್ತೀಚಿನ ರಾಜಕೀಯ ಇತಿಹಾಸದ ಪುಟಗಳ ಮೇಲೆ ಒಮ್ಮೆ ಕಣ್ಣಾಡಿಸಿದರೆ ಈ ಪೋನ್ ಕದ್ದಾಲಿಕೆ, ಗೂಢಚರ್ಯೆಗಳೆಲ್ಲ ಯಾವ ಪಕ್ಷದ ದುಷ್ಕೃತ್ಯಗಳು ಎನ್ನುವುದು ಅರಿವಾಗುತ್ತದೆ. ಈ ದುರ್ಬುದ್ದಿಯ ಕಾರಣದಿಂದಾಗಿಯೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ, ವಚನಭಂಗದಂತಹ ಅನಿಷ‍್ಠಗಳು ಕಾಣಿಸಿಕೊಂಡಿರುವುದು. 2004ರಿಂದ 2013 ವರೆಗಿನ ಒಂಬತ್ತು ವರ್ಷಗಳ ಅವಧಿಯಲ್ಲಿ ರಾಜ್ಯ ಐದು ಮುಖ್ಯಮಂತ್ರಿಗಳನ್ನು, 2018ರಿಂದ 2023ರ 5 ವರ್ಷಗಳ ಅವಧಿಯಲ್ಲಿ ಮೂರು ಮುಖ್ಯಮಂತ್ರಿಗಳನ್ನು ರಾಜ್ಯ ಕಾಣುವಂತಾಗಲು ಇವರೊಳಗಿನ ಪರಸ್ಪರ ಅಪನಂಬಿಕೆ, ದ್ವೇಷ, ಅಸೂಯೆ, ಬೆನ್ನಿಗೆ ಚೂರಿ ಹಾಕುವ ಕುತಂತ್ರಗಳೇ ಕಾರಣ ಎಂದು ಕಿಡಿಕಾರಿದ್ದಾರೆ.

2018ರಲ್ಲಿ ಹೆಚ್.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ಪೂಜ್ಯ ನಿರ್ಮಲಾನಂದನಾಥ ಸ್ವಾಮಿಗಳ ಫೋನನ್ನೆ ಕದ್ದಾಲಿಸಿದ್ದಾರೆ ಎಂದು ಈಗಿನ ಅವರ ರಾಜಕೀಯ ಸಂಗಾತಿ ಬಿ.ವೈ ವಿಜಯೇಂದ್ರ ಅವರೇ ಆರೋಪ ಮಾಡಿದ್ದರು. ಇದರ ಬಗ್ಗೆ ತನಿಖೆ ಮಾಡಿದ್ದ ಸಿಬಿಐ, ಒಬ್ಬ ಸ್ವಾಮೀಜಿಗಳದ್ದಷ್ಟೇ ಅಲ್ಲ, ಬದಲಿಗೆ ಏಳು ಸ್ವಾಮೀಜಿಗಳ ಫೋನ್‌ಗಳ ಕದ್ದಾಲಿಕೆ ಮಾಡಲಾಗಿದೆ ಎಂದು ತಿಳಿಸಿತ್ತು. ನಂಬಿಕೆಗೆ ತಾನು ಅರ್ಹ ಅಲ್ಲ ಎಂದು ಸಾಬೀತು ಮಾಡಿರುವ ಕುಮಾರಸ್ವಾಮಿವರನ್ನು ಬಿಜೆಪಿಯವರು ಸುಮ್ಮನೆ ಬಿಟ್ಟಾರೆಯೇ? ಅವರ ವಿರುದ್ಧವೂ ಗೂಢಚಾರರನ್ನು ಬಿಟ್ಟಿರಬಹುದು. ಇಂತಹ ದುರ್ಬುದ್ದಿಗಾಗಿಯೇ ರಾಜ್ಯದ ಜನತೆ ಈ ಎರಡೂ ಪಕ್ಷಗಳನ್ನು ತಿರಸ್ಕರಿಸಿರುವುದು ಎನ್ನುವುದು ನೆನಪಿರಲಿ ಎಂದಿದ್ದಾರೆ.

ಅಧಿಕಾರವನ್ನು ದುರ್ಬಳಕೆ ಮಾಡಿ ಸರ್ಕಾರಿ ಯಂತ್ರಗಳ ಮೂಲಕವೇ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲ, ಸ್ವಪಕ್ಷದಲ್ಲಿ ತಮ್ಮ ನಾಯಕತ್ವಕ್ಕೆ ಪೈಪೋಟಿ ನೀಡಬಲ್ಲ ನಾಯಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬಂದ ದಿನದಿಂದಲೇ ಮಾಡುತ್ತಿದ್ದಾರೆ ಎನ್ನುವುದು ಜಗಜ್ಜಾಹೀರಾಗಿರುವ ಸತ್ಯ. ಹಾಡಹಗಲೇ ಪೊಲೀಸ್, ಸಿಬಿಐ, ಇಡಿ, ಐಟಿ ಇಲಾಖೆಗಳ ದುರ್ಬಳಕೆಯಾಗುತ್ತಿರುವ ಬಗ್ಗೆ ಇಡೀ ದೇಶದ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇಂತಹವರು ತಮ್ಮ ರಾಜಕೀಯ ವಿರೋಧಿಗಳ ಫೋನ್‌ ಗಳನ್ನು ಕದ್ದು ಆಲಿಸದೆ ಬಿಡುತ್ತಾರೆಯೇ? ಆದರೆ ಇಂತಹ ಬೆದರಿಕೆಗಳಿಗೆ ನಾನಾಗಲಿ, ನನ್ನ ಪಕ್ಷದ ಯಾವ ನಾಯಕರಾಗಲಿ ಜಗ್ಗುವವರಲ್ಲ, ಬಗ್ಗುವವರೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿಯವರಿಗೆ ಈ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು. ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಗೂಡಚರ್ಯೆ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಿರುವುದು ಇತಿಹಾಸದ ಪುಟಗಳಲ್ಲಿದೆ. ಈ ಅಪನಂಬಿಕೆ ಮತ್ತು ಸಣ್ಣತನಗಳಿಂದಾಗಿ ಕನ್ನಡಿಗರೊಬ್ಬರು ಇನ್ನಷ್ಟು ಕಾಲ ಪ್ರಧಾನಿಯಾಗುವ ಅವಕಾಶ ತಪ್ಪಿಹೋಯಿತು ಎನ್ನುವುದು ವಿಷಾದನೀಯ ವಾಸ್ತವ ಎಂದಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಮತ್ತು ಆರ್ ಅಶೋಕ್ ಅವರು ತಮ್ಮ ಅಮೂಲ್ಯ ಕ್ಷಣಗಳನ್ನು ಈ ರೀತಿ ಕುಟಿಲ ರಾಜಕೀಯದಲ್ಲಿ ವ್ಯರ್ಥಮಾಡುವ ಬದಲಿಗೆ ರಚನಾತ್ಮಕ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡಿ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಜ್ಞಾವಂತ ಮತದಾರರು ಐದು ವರ್ಷಗಳ ಕಾಲ ಸರ್ಕಾರ ನಡೆಸಲು ನಮಗೆ ಜನಾದೇಶ ನೀಡಿದ್ದಾರೆ. ವಿರೋಧ ಪಕ್ಷಗಳ ಎಲ್ಲ ಕುತಂತ್ರ-ಕುಚೇಷ್ಠೆಗಳ ನಡುವೆಯೂ ಈ ಅವಧಿಯನ್ನು ಕಾಂಗ್ರೆಸ್ ಪಕ್ಷ ಪೂರ್ಣಗೊಳಿಸಲಿದೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...