Homeಕರ್ನಾಟಕ'ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್' ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

‘ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ನಿರ್ಭಯ ನಿಧಿಯಡಿ’ ನಿರ್ಮಿಸಲಾಗಿರುವ ದೇಶದ ಮೊದಲ ‘ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು.

ನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯಲು ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಹೆಚ್ಚಿಸಲು ಕಮಾಂಡ್ ಸೆಂಟರ್ ನಿರ್ಮಿಸಲಾಗಿದೆ. ಸುಮಾರು 661.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಮಾಂಡ್ ಸೆಂಟರ್‌ಗೆ ಕೇಂದ್ರ ಸರ್ಕಾರ ಶೇ.60 ಮತ್ತು ರಾಜ್ಯ ಸರ್ಕಾರ ಶೇ.40ರಷ್ಟು ಹಣ ಒದಗಿಸಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಮಾಂಡ್ ಸೆಂಟರ್‌ ಬೆಂಗಳೂರಿನ ಜನತೆಗೆ ಸುರಕ್ಷತೆ ಒದಗಿಸಲಿದೆ. ಮಹಿಳೆಯರು ಮಕ್ಕಳಿಗೆ ಇದರಿಂದ ಸಹಾಯವಾಗಲಿದೆ. ದೌರ್ಜನ್ಯ, ಅಪಘಾತ ಆದಾಗ ಜನರು ನೇರವಾಗಿ ಕರೆ ಮಾಡಬಹುದು. ತಕ್ಷಣ ಕಾರ್ಯ ಪ್ರವೃತರಾಗಲಿರುವ ಪೊಲೀಸರು ಏಳು ನಿಮಿಷಗಳ ಒಳಗೆ ಘಟನಾ ಸ್ಥಳಕ್ಕೆ ತಲುಪಲಿದ್ದಾರೆ ಎಂದರು.

ಮಹಾ ನಗರಗಳಾದ ಬೆಂಗಳೂರು, ಅಹಮದಾಬಾದ್‌, ಚೆನ್ನೈ, ದೆಹಲಿ, ಹೈದರಾಬಾದ್‌, ಕೋಲ್ಕತ್ತಾ, ಲಖನೌ ಹಾಗೂ ಮುಂಬೈನಲ್ಲಿ ನಿರ್ಭಯ ನಿಧಿಯಡಿ ಸೇಫ್ ಸಿಟಿ ಯೋಜನೆ ಜಾರಿಯಾಗುತ್ತಿದೆ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ಯೋಜನೆ ಉದ್ಘಾಟನೆಗೊಂಡಿದೆ. ಮಹಿಳೆಯರು, ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಸೇರಿದಂತೆ ಇತರ ದೌರ್ಜನ್ಯಗಳನ್ನು ತಡೆಗಟ್ಟುವುದು ಈ ಯೋಜನೆಯ ಆದ್ಯತೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ : 11,170 ಗ್ರಾಮ ಪಂಚಾಯತ್ ಸಿಬ್ಬಂದಿಗೆ ಸೇವಾ ಭದ್ರತೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...

ಮುಂಬೈ: ಚಲಿಸುತ್ತಿದ್ದ ರೈಲಿನಿಂದ 18 ವರ್ಷದ ವಿದ್ಯಾರ್ಥಿನಿಯನ್ನು ಹೊರಗೆ ತಳ್ಳಿದ ಮಾನಸಿಕ ಅಸ್ವಸ್ಥ

ನವಿ ಮುಂಬೈನ ಪನ್ವೇಲ್-ಸಿಎಸ್‌ಎಂಟಿ ಮಾರ್ಗದಲ್ಲಿ ಚಲಿಸುವ ಸ್ಥಳೀಯ ರೈಲಿನಿಂದ 18 ವರ್ಷದ ಬಾಲಕಿಯನ್ನು ತಳ್ಳಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, 'ಮಾನಸಿಕವಾಗಿ ಅಸ್ವಸ್ಥ'...

ಪ್ರಚೋದನಕಾರಿಯಾಗಿ ಮಾತನಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಸುಮ್ಮನೆ ಯಾರ ವಿರುದ್ದವೂ ಪ್ರಕರಣ ದಾಖಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸೋಮವಾರ (ಡಿ.22) ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,...

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ ಡಿಸೆಂಬರ್...

ವಲಯಾರ್‌ ಗುಂಪು ಹತ್ಯೆ ಪ್ರಕರಣ; ಮೃತನ ಕುಟುಂಬಕ್ಕೆ ‘ನ್ಯಾಯದ ಭರವಸೆ’ ನೀಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪು ಹಲ್ಲೆಯಲ್ಲಿ ಸಾವನ್ನಪ್ಪಿದ ರಾಮ್ ನಾರಾಯಣ್ ಬಾಕೆಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಭರವಸೆ ನೀಡಿದ್ದಾರೆ. ಈ ಘಟನೆಯು ಕೇರಳದಂತಹ ಪ್ರಗತಿಪರ...

ಬ್ಯಾಂಕಾಕ್‌ನಿಂದ ₹20 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ: ಮುಂಬೈ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ಮುಂಬೈ: ಬ್ಯಾಂಕಾಕ್‌ನಿಂದ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಇಬ್ಬರು ವ್ಯಕ್ತಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ,...

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನು ಹತ್ಯೆಗೈದ ಪೋಷಕರು

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಸ್ವಂತ ತಂದೆ ಹಾಗೂ ಆತನ ಕುಟುಂಬ ಸದಸ್ಯರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ಭಾನುವಾರ (ಡಿ.21)...

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...