Homeಕರ್ನಾಟಕಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

- Advertisement -
- Advertisement -

ರಾಜ್ಯದಲ್ಲಿ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಚುರುಕುಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ, ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸಲಹೆ ನಿಡಿದ್ದಾರೆ.

“ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದರು.

“ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು” ಎಂದು ಹೇಳಿದರು.

“ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

“ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

“ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಬೇಕು” ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

“ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು” ಎಂದರು.

“ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು” ಎಂದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...