ನಿನ್ನೆ(ನ.27) ಬೆಳಿಗ್ಗೆ 10 ಗಂಟೆಯಿಂದ ಸಂಜೆ 4:30ರವರೆಗೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಮಟ್ಟದ ‘ಜನತಾ ದರ್ಶನ’ ಕಾರ್ಯಕ್ರಮಕ್ಕೆ ಸಾವಿರಾರು ಜನರು ತಮ್ಮ ಅಹವಾಲು ಹೊತ್ತು ಆಗಮಿಸಿದ್ದರು.
ರಾಜ್ಯ ವಿವಿಧ ಭಾಗಗಳಿಂದ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದಿದ್ದ ಜನರನ್ನು ಖುದ್ದು ಮುಖ್ಯಮಂತ್ರಿಯೇ ಭೇಟಿಯಾಗಿ ಅಹವಾಲು ಆಲಿಸಿದರು.
ಮುಖ್ಯಮಂತ್ರಿಗಳ ಕಚೇರಿ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ನಿನ್ನೆ ಬೆಳಿಗ್ಗೆಯಿಂದ ಸಂಜೆಯವರೆಗೆ ಒಟ್ಟು 3,812 ಅರ್ಜಿಗಳನ್ನು ಜನರಿಂದ ಸ್ವೀಕರಿಸಲಾಗಿದೆ. ಈ ಪೈಕಿ 980 ಅರ್ಜಿಗಳನ್ನು ಮುಖ್ಯಮಂತ್ರಿಗಳೇ ನೇರವಾಗಿ ಸ್ವೀಕರಿಸಿದ್ದಾರೆ. ಉಳಿದ 2,862 ಅರ್ಜಿಗಳನ್ನು ಅಧಿಕಾರಿಗಳು ಸ್ವೀಕರಿಸಿ ಐಪಿಜಿಆರ್ಎಸ್ ತಂತ್ರಶಾದಲ್ಲಿ ನೋಂದಣಿ ಮಾಡಿದ್ದಾರೆ.
ಹಲವು ಅರ್ಜಿಗಳಿಗೆ ಸಿಎಂ ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ. ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳಿಗೆ 15 ದಿನಗಳ ಸಮಯ ನೀಡಿದ್ದಾರೆ.
ಸಾವಿರಾರು ಜನರು ಸಮಸ್ಯೆ ಹೊತ್ತು ಬಂದಿರುವುದನ್ನು ಕಂಡು ಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನುಮುಂದೆ ಇಷ್ಟು ಅರ್ಜಿಗಳು ನನ್ನ ಬಳಿ ಬರಬಾರದು. ಸ್ಥಳೀಯ ಮಟ್ಟದಲ್ಲೇ ಜನರ ಸಮಸ್ಯೆ ಪರಿಹರಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಜನತಾ ದರ್ಶನದ ವೇಳೆ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿರಿದ್ದರು.
ಇದನ್ನೂ ಓದಿ : ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಆರೋಪಿಗಳು ಪೊಲೀಸ್ ವಶಕ್ಕೆ