Homeಕರ್ನಾಟಕಜಿಎಸ್‌ಟಿ ಜಾರಿ ಮಾಡಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ಳುತ್ತಿರುವುದು ಮೋದಿಯವರೇ : ಸಿಎಂ...

ಜಿಎಸ್‌ಟಿ ಜಾರಿ ಮಾಡಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ, ಈಗ ಬೆನ್ನು ತಟ್ಟಿಕೊಳ್ಳುತ್ತಿರುವುದು ಮೋದಿಯವರೇ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಸೋಮವಾರ (ಸೆ.22) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಸಿಎಂ ಪ್ರಶ್ನಿಸಿದರು.

ಜಿಎಸ್‌ಟಿ ಶೇಕಡ 18, 28 ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ಸಿಎಂ ಹೇಳಿದರು.

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದೂ: ಸಿಎಂ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಸಿಎಂ, ಬಾನು ಮುಷ್ತಾಕ್‌ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು. ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದೂ ಎಂದು ಸಿಎಂ ಹೇಳಿದರು.

‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...